ಬಳ್ಳಾರಿ,ಫೆ,27: ನಗರದ ಜೆಡಿಎಸ್ ಪಕ್ಷದ ಜಿಲ್ಲಾ ಘಟಕದ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಜಿಲ್ಲಾ ಮತ್ತು ತಾಲೂಕು ಘಟಕದ ಪದಾಧಿಕಾರಿಗಳ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಸುಳ್ಳು ಗ್ಯಾರಂಟಿಗಳ ಭರವಸೆ ನೀಡಿದ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದಿಂದ ರಾಜ್ಯದ ಜನತೆ ಬೇಸತ್ತು ಹೋಗಿದ್ದಾರೆ. ಐದು ಗ್ಯಾರಂಟಿಗಳು ಇನ್ನೂ ಈವತ್ತಿಗೂ ಕೂಡ ಯಾವ ಗ್ಯಾರಂಟಿಯೂ ಯಶಸ್ವಿಯಾಗಿಲ್ಲ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರಕಾರಕ್ಕೆ ಜನರೇ ಪಾಠ ಕಲಿಸಲಿದ್ದಾರೆ ಎಂದರು.
ಕಾಂಗ್ರೆಸ್ ಸರಕಾರ ಕೇವಲ ಗ್ಯಾರಂಟಿಗಳ ಹೆಸರಿನಲ್ಲೇ ಕಾಲಕಳೆಯುತ್ತಿದೆ. ರಾಜ್ಯದಲ್ಲಿ ಈವರೆಗೂ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೆತ್ತಿಕೊಂಡಿಲ್ಲ ಎಂದು ಆರೋಪಿಸಿದರು.
ಪಕ್ಷದಲ್ಲಿ ಯುವಕರಿಗೆ ಆದ್ಯತೆ:
ಜೆಡಿಎಸ್ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಲು ಬಳ್ಳಾರಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಯುವಕರಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ ತಾಯಣ್ಣ ಅವರು, ಜಿಲ್ಲೆಯ ಸಿರುಗುಪ್ಪ, ಸಂಡೂರು, ಕಂಪ್ಲಿ, ಬಳ್ಳಾರಿ ನಗರ ಮತ್ತು ಬಳ್ಳಾರಿ ಗ್ರಾಮಾಂತರ ಕ್ಷೇತ್ರಗಳಲ್ಲಿರುವ ವಿವಿಧ ವಿಭಾಗಗಳ ಅಧ್ಯಕ್ಷರುಗಳು ಪಕ್ಷವನ್ನು ತಳಮಟ್ಟದಿಂದ ಸಂಘಟಿಸಲು ಮುಂದಾಗಬೇಕು ಎಂದು ಕರೆ ನೀಡಿದರು.
ಸಭೆಯಲ್ಲಿ ಪಕ್ಷದ ಮುಖಂಡರಾದ ಕುರೇಕುಪ್ಪ ಸೋಮಪ್ಪ, ಕಪ್ಪಗಲ್ಲು ರಸೂಲ್ ಸಾಬ್, ರುದ್ರಮುನಿ ವಕೀಲರು, ಎಲ್ಲನಗೌಡ ವಕೀಲರು, ಹೊನ್ನೂರಪ್ಪ (ವಂಡ್ರಿ) ಪ್ರಸಾದ್, ಮುಕ್ಕಣ್ಣ, ಜಾವೀದ್, ಅಶೋಕ್ ಸಂಗನಕಲ್ಲು, ಕೇದಾರ್ ರಾಯಾಪುರ, ಬಸಪ್ಪ, ಭವಾನಿ, ಉಷಾ, ಜಮಿಲಾ ಸೇರಿದಂತೆ ಮತ್ತಿತರರು ಹಾಜರಿದ್ದರು.
ಉಸ್ತುವಾರಿಗಳ ನೇಮಕ:
ಬಳ್ಳಾರಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಹೈಕಮಾಂಡ್ ಜಿಲ್ಲಾ ಉಸ್ತುವಾರಿಗಳು ಮತ್ತು ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ತಾಲೂಕು ಉಸ್ತುವಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಜಿಲ್ಲಾ ಉಸ್ರುವಾರಿಗಳಾಗಿ ಹಗರಿಬೊಮ್ಮನಹಳ್ಳಿ ಶಾಸಕ ನೇಮಿರಾಜನಾಯ್ಕ್, ಸಹ ಉಸ್ತುವಾರಿಯಾಗಿ ಮಾಜಿ ಶಾಸಕ ಅನಿಲ್ ಹೆಚ್.ಲಾಡ್ ಅವರನ್ನು ನೇಮಕ ಮಾಡಲಾಗಿದೆ.
ಅದೇ ರೀತಿ ಜಿಲ್ಲೆಯ 5 ವಿಧಾನ ಸಭಾ ಕ್ಷೇತ್ರಗಳ ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ.
ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ಮಾಜಿ ಶಾಸಕ ಅನಿಲ್ ಎಚ್. ಲಾಡ್, ಸಹ ಉಸ್ತುವಾರಿಯಾಗಿ ಎಲ್ಲನಗೌಡ ವಕೀಲರು, ಬಳ್ಳಾರಿ ಗ್ರಾಮಾಂತರ ವಿಧಾನ ಸಭಾ ಕ್ಷೇತ್ರದ ಉಸ್ತುವಾರಿಗಳಾಗಿ ಪಕ್ಷದ ಜಿಲ್ಲಾಧ್ಯಕ್ಷ ಡಿ. ಮೀನಹಳ್ಳಿ ತಾಯಣ್ಣ, ಸಹ ಉಸ್ತುವಾರಿಗಳಾಗಿ ಅಶೋಕ್ ಸಂಗನಕಲ್ಲು, ಚಾಗನೂರು ನಾಗರಾಜ ಅವರನ್ನು ನೇಮಕ ಮಾಡಲಾಗಿದೆ.
ಸಂಡೂರು ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳಾಗಿ ಕುರೇಕುಪ್ಪ ಸೋಮಪ್ಪ, ಸಹ ಉಸ್ತುವಾರಿಗಳಾಗಿ ಪೇಟೆಮನೆ ಖಾದರ್ ಬಾಷಾ ಅವರನ್ನು ನೇಮಕ ಮಾಡಿಲಾಗಿದೆ.
ಕಂಪ್ಲಿ ವಿಧಾನ ಸಭಾ ಕ್ಷೇತ್ರದ ಉಸ್ತುವಾರಿಗಳಾಗಿ ರಾಜುನಾಯಕ್, ಸಹ ಉಸ್ತುವಾರಿಗಳಾಗಿ ಲಕ್ಷಿö್ಮÃಕಾಂತರೆಡ್ಡಿ, ವಿಶ್ವನಾಥಸ್ವಾಮಿ, ಮದಿರೆ ವಿಜಯಕುಮಾರ್ ಅವರನ್ನು ನೇಮಕ ಮಾಡಲಾಗಿದೆ.
ಸಿರುಗುಪ್ಪ ವಿಧಾನಸಭಾ ಕ್ಷೇತ್ರದ ಉಸ್ತರುವಾರಿಗಳಾಗಿ ಪರಮೇಶ್ವರನಾಯಕ್, ಸಹ ಉಸ್ತುವಾರಿಗಳಾಗಿ ಶಿವನಾರಾಯಣ ಅವರನ್ನು ನೇಮಕಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷರಾದ ಮೀನಹಳ್ಳಿ ತಾಯಣ್ಣ ಅವರು ತಿಳಿಸಿದ್ದಾರೆ.
ವಿವಿಧ ವಿಭಾಗಗಳ ಜಿಲ್ಲಾ ಅಧ್ಯಕ್ಷರುಗಳ ನೇಮಕ:
ವಿದ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷರಾಗಿ ಸೈಯ್ಯದ್ ನಾತಿಕ್, ಮಹಿಳಾ ವಿಭಾಗದ ಜಿಲ್ಲಾಧ್ಯಕ್ಷರಾಗಿ ಭವಾನಿ, ಪರಿಶಿಷ್ಟ ಪಂಗಡ ವಿಭಾಗದ ಜಿಲ್ಲಾಧ್ಯಕ್ಷರಾಗಿ ಅದ್ದಿಗೇರಿ ರಾಮಣ್ಣ, ಕಾರ್ಮಿಕ ವಿಭಾಗ ಜಿಲ್ಲಾಧ್ಯಕ್ಷರಾಗಿ ಬಾವಿ ಶಿವಕುಮಾರ್, ರೈತ ವಿಭಾಗದ ಜಿಲ್ಲಾಧ್ಯಕ್ಷರಾಗಿ ಲಕ್ಷಿö್ಮÃಕಾಂತರೆಡ್ಡಿ, ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾಧ್ಯಕ್ಷರಾಗಿ ಜಾವೀದ್, ಕಾನೂನು ವಿಭಾಗದ ಜಿಲ್ಲಾಧ್ಯಕ್ಷರಾಗಿ ರುದ್ರಮುನಿ ವಕೀಲರು, ನಗರ ಯುವ ಘಟಕದ ಅಧ್ಯಕ್ಷರಾಗಿ ಮುತ್ತು ರಾಕೇಶ್, ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷರಾಗಿ ಸಂಗನಕಲ್ಲು ಪ್ರಸಾದ್, ಅಂಗವಿಕಲರ ವಿಭಾಗದ ಜಿಲ್ಲಾಧ್ಯಕ್ಷರಾಗಿ ಸಿದ್ದೇಶ್ ಕೆ, ಕ್ರೆöÊಸ್ತ ವಿಭಾಗದ ಜಿಲಾಧ್ಯಕ್ಷರಾಗಿ ಎಲೀಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಇದೇ ವೇಳೆ ಎಲ್ಲಾ ವಿಭಾಗಗಳ ಜಿಲ್ಲಾಧ್ಯಕ್ಷರುಗಳಿಗೆ ನೇಮಕಾತಿ ಆದೇಶ ಪತ್ರವನ್ನು ಜಿಲ್ಲಾಧ್ಯಕ್ಷರಾದ ಮೀನಹಳ್ಳಿ ತಾಯಣ್ಣ ಅವರು ವಿತರಿಸಿದರು.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಗೆಲುವಿಗೆ ಶಕ್ತಿಮೀರಿ ಶ್ರಮಿಸಬೇಕು
![](https://suvarnavaahini.com/wp-content/uploads/2024/02/jds-860x384.jpg)