![](https://suvarnavaahini.com/wp-content/uploads/2024/06/sk.1.jpg)
ಹರಿದ್ವಾರ : ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಮತ್ತು ಸೋದೆ ವಾದಿರಾಜ ಮಠದ ಪೀಠಾಧಿಪತಿ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಇಂದು ಹರಿದ್ವಾರಕ್ಕೆ ಭೇಟಿ ನೀಡಿದರು. ಇವರೆಲ್ಲ ಸೇರಿ ಶ್ರೀಕ್ಷೇತ್ರ ಹರಿದ್ವಾರದಲ್ಲಿ ನೂತನವಾಗಿ ನಿರ್ಮಿಸಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿ ಮಠ ಮತ್ತು ಯಾತ್ರಿಕರ ಸೌಕರ್ಯ ಕೇಂದ್ರವನ್ನು ಉದ್ಘಾಟಿಸಿದರು.