ಈ ಮುಂಗಾರು ಅಧಿವೇಶಷನದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ. ಇಂಧನ, ಹಾಲ ಬೆಲೆ ಏರಿಕೆ ವಿರೋಧಿಸಿ ಸರ್ಕಾರದ ವಿರುದ್ಧ ಮುಗಿಬೀಳಲಿವೆ. ಇನ್ನು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಹಗರಣ, ಮೈಸೂರು ಮುಡಾದಲ್ಲಿನ ಹಗರಣಗಳನ್ನು ಇಟ್ಟುಕೊಂಡು ಅಧಿವೇಶನದಲ್ಲಿ ಸರ್ಕಾರವನ್ನ ಕಟ್ಟಿ ಹಾಕುವ ತಂತ್ರವನ್ನು ಬಿಜೆಪಿ-ಜೆಡಿಎಸ್ ಮಾಡಿವೆ.
ಮತ್ತೊಂದೆಡೆ ಆಡಳಿತರೂಢ ಕಾಂಗ್ರೆಸ್ ಸರ್ಕಾರ, ವಿಪಕ್ಷಗಳ ಆರೋಪ, ಪ್ರಶ್ನೆಗಳನ್ನು ಹೇಗೆ ಎದುರಿಸುತ್ತದೆ ಎನ್ನುವುದನ್ನು ಕಾದುನೋಡಬೇಕಿದೆ. ಒಟ್ಟಿನಲ್ಲಿ ಮುಂಗಾರು ಅಧಿವೇಶನ ಭಾರೀ ಕೋಲಾಹಲಕ್ಕೆ ಕಾರಣವಾಗುವುದಂತೂ ಸತ್ಯ.