ಬಳ್ಳಾರಿ, ಜು.17: ನಗರದ ಪ್ರತಿಷ್ಠಿತ ಬಳ್ಳಾರಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ & ಮ್ಯಾನೇಜ್ಮೆಂಟ್ ಕಾಲೇಜಿನ ಎಲೆಕ್ಟಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಜಿ. ಹೃತಿಕಾ ಅವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 2023-24ನೇ ಸಾಲಿನ ಅಂತಿಮ ವರ್ಷದ ಪರೀಕ್ಷೆಯಲ್ಲಿ ಪ್ರಥಮ ಱ್ಯಾಂಕ್ ಗಳಿಸಿ ಸಾಧನೆಗೈದಿದ್ದಾರೆ ಅವರಿಗೆ ಇದೇ 18ರಂದು ನಡೆಯುವ ವಿಶ್ವವಿದ್ಯಾಲದಯ 24ನೇ ಘಟಿಕೋತ್ಸವದಲ್ಲಿ ಏಳು ಚಿನ್ನದ ಪದಕಗಳನ್ನು ರಾಜ್ಯಪಾಲರಿಂದ ಪಡೆಯಲಿದ್ದಾರೆ ಮತ್ತು ಇದೇ ವಿಭಾಗದ ವಿದ್ಯಾರ್ಥಿ ರಿತಿಕ್ ಕುಮಾರ್ ನಾಯಕ್ ಏಳನೇ ಱ್ಯಾಂಕ್ ಪಡೆದಿದ್ದಾರೆ. ಹಾಗೆಯೇ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗದಲ್ಲಿ ಸಂಧ್ಯಾರಾಣಿಯವರು 8ನೇ ಱ್ಯಾಂಕ್ ಗಳಿಸುವ ಮೂಲಕ ಅಸಾಧಾರಣ ಸಮರ್ಪಣೆ ಮತ್ತು ಶೈಕ್ಷಣಿಕ ಉತ್ಕೃಷ್ಟತೆಯನ್ನು ಪ್ರದರ್ಶಿಸುತ್ತಾ, ನಮ್ಮ ವಿದ್ಯಾರ್ಥಿಗಳು ಉನ್ನತ ಶ್ರೇಣಿಗಳನ್ನು ಪಡೆದುಕೊಂಡಿದ್ದಾರೆ ಮತ್ತು ನಮ್ಮ ಸಂಸ್ಥೆಗೆ ಹೆಮ್ಮೆ ತಂದಿದ್ದಾರೆ ಎಂದು ಕಾಲೇಜಿನ ಪ್ರಾಚಾರ್ಯರಾದ ಡಾ. ಯಡವಳ್ಳಿ ಬಸವರಾಜ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಇದೇ ಎಲೆಕ್ಟ್ರಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿಭಾಗದಲ್ಲಿ ಸತತ ಮೂರು ವರ್ಷಗಳಿಂದ ಚಂದನ (2020-21) ಮತ್ತು ಸಂಪತ್ ಕುಮಾರ್ (2022-23) ಕೂಡ ಪ್ರಥಮ ಱ್ಯಾಂಕ್ ಪಡೆದು ಚಿನ್ನದ ಪದಕಗಳನ್ನು ಗಳಿಸಿರುತ್ತಾರೆ ಎಂದು ತಿಳಿಸಿದರು.
“ಈ ಸಾಧನೆಗಳು ನಮ್ಮ ವಿದ್ಯಾರ್ಥಿಗಳ ಕಠಿಣ ಪರಿಶ್ರಮ ಮತ್ತು ಸಂಕಲ್ಪ, ನಮ್ಮ ಅಧ್ಯಾಪಕರ ಸಮರ್ಪಣೆ ಮತ್ತು ನಮ್ಮ ಸಂಸ್ಥೆಯಲ್ಲಿನ ಬೆಂಬಲ ಕಲಿಕೆಯ ವಾತಾವರಣಕ್ಕೆ ಸಾಕ್ಷಿಯಾಗಿದೆ. ಅವರ ಅತ್ಯುತ್ತಮ ಸಾಧನೆಗಳಿಗಾಗಿ ನಾವು ಹೃತಿಕಾ, ರಿತಿಕ್ ಮತ್ತು ಸಂಧ್ಯಾ ಅವರಿಗೆ ನಮ್ಮ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇವೆ” ಎಂದು ಕಾಲೇಜಿನ ಅಧ್ಯಕ್ಷರಾದ ಡಾ. ಯಶವಂತ್ ಭೂಪಾಲ್ ತಿಳಿಸಿದ್ದಾರೆ.
ನಿರ್ದೇಶಕರಾದ ವೈ.ಜೆ.ಪೃಥ್ವಿರಾಜ್ ಭೂಪಾಲ್, ಉಪಪ್ರಾಚಾರ್ಯರಾದ ಡಾ.ಬಿ.ಎಸ್.ಖೇಣೇದ್, ಇಇಇ ವಿಭಾಗ ಮುಖ್ಯಸ್ಥರಾದ ಡಾ. ಶರಣ ರೆಡ್ಡಿ, ಇಸಿಇ ವಿಭಾಗ ಮುಖ್ಯಸ್ಥರಾದ ಡಾ.ಸದ್ಯೋಜತ.ಕೆ.ಎಂ, ಆಡಳಿತಾಧಿಕಾರಿಗಳಾದ ಅಮರೇಶಯ್ಯ.ಪಿ ಹಾಗೂ ಶಿಕ್ಷಕ ಶಿಕ್ಷಕೇತರ ಸಿಬ್ಬಂದಿಯವರು ವಿದ್ಯಾರ್ಥಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.