ಸುವರ್ಣವಾಹಿನಿ ಸುದ್ದಿ
ಸಿರುಗುಪ್ಪ,ಏ.02: ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದವರಿಗೆ ಗುರುತಿಸಿ ನೀಡಲಾಗುವ ೨೦೨೪ನೇ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಸಿರುಗುಪ್ಪ ಪೊಲೀಸ್ ವೃತ್ತ ನಿರೀಕ್ಷಕ ವೈ.ಎಸ್.ಹನುಮಂತಪ್ಪ ಅವರು ಭಾಜನಾಗಿದ್ದಾರೆ.
ಅವರು ಮೂಲತಃ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ನರಸಗೊಂಡನಹಳ್ಳಿ ಗ್ರಾಮದ ವೈ.ಎಂ ಶಾಂತರಾಜ್ ಹಾಗೂ ಸರಸ್ವತಮ್ಮ ಪುತ್ರನಾದ ಹನುಮಂತಪ್ಪ ಅವರು ೨೦೧೦ ರಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ನೇಮಕಗೊಂಡು ಇಲಾಖೆಗೆ ಸೇರ್ಪಡೆಯಾಗಿದ್ದರು.
ಮೈಸೂರಿನಲ್ಲಿ ತರಬೇತಿ ಮುಗಿಸಿದ ನಂತರ ತುಮಕೂರು ಜಿಲ್ಲೆಯ ಶಿರಾದಲ್ಲಿ ಕೆಲ ತಿಂಗಳುಗಳ ಕಾಲ ಸೇವೆ ಸಲ್ಲಿಸಿದ್ದರು. ಪ್ರೊಬೇಷನರಿ ಮುಗಿದ ಬಳಿಕ ಬಳ್ಳಾರಿ ಜಿಲ್ಲೆಯ ಕಮಲಾಪುರ ಬಳ್ಳಾರಿ ನಗರದ ಎಪಿಎಂಸಿ ಬಳ್ಳಾರಿ ತಾಲೂಕಿನ ಪಿಡಿಹಳ್ಳಿ, ಬಳ್ಳಾರಿ ಗ್ರಾಮೀಣ ಸೇರಿದಂತೆ ವಿವಿಧ ಠಾಣೆಗಳಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸಿದ್ದರು.
ನಂತರ ಇನ್ಸ್ಪೆಕ್ಟರ್ ಆಗಿ ಬಡ್ತಿ ಪಡೆದ ನಂತರ ಕೆಲವು ತಿಂಗಳುಗಳ ಕಾಲ ಬೆಂಗಳೂರಿನಲ್ಲಿ ಆಂತರಿಕ ಭದ್ರತಾ ವಿಭಾಗದಲ್ಲಿ ಕೆಲಸ ಮಾಡಿದ ಹನುಮಂತಪ್ಪ ಬಳಿಕ ಹೊಸಪೇಟೆ ಎಸ್ಪಿ ಕಛೇರಿ, ಬಳ್ಳಾರಿ ಐಎಸ್ಡಿಯಲ್ಲಿಯು ಕೆಲಸ ಮಾಡಿದ್ದರು.
ಬಳಿಕ ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ವೃತ ಪೊಲೀಸ್ ನಿರೀಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಇವರು ಜನ ಸ್ನೇಹಿ ಪೋಲಿಸ್ ಅಧಿಕಾರಿಯಾಗಿ ಹೆಸರುಗಳಿಸಿದ್ದು, ಎಲ್ಲಿಯೂ ಕಂಟ್ರಾವರ್ಸಿಗಳಿಗೆ
ಅವಕಾಶನೇ ಕೊಡದೆ, ದಕ್ಷ ಹಾಗೂ ಪ್ರಾಮಾಣಿಕರಾಗಿ ಸೇವೆ ಸಲ್ಲಿಸಿ ಇಲಾಖೆಯಲ್ಲಿ ಸೈ ಎನ್ನಿಸಿಕೊಂಡ ಸೂಪರ್ ಕಾಪ್ ಹನುಮಂತಪ್ಪರವರಿಗೆ ದೊರೆತ ಈ ಮುಖ್ಯಮಂತ್ರಿಗಳ ಚಿನ್ನದ ಪದಕದಿಂದ ಪೊಲೀಸ್ ಇಲಾಖೆಯಲ್ಲಿ ಹೆಸರು ಮಾಡಲು ಉತ್ತೇಜನೆ ನೀಡಿದಂತಾಗಿದೆ.
ಈ ಗೌರವಕ್ಕೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕೆ.ಪಿ.ರವಿಕುಮಾರ್, ಎಸ್.ನವೀನ್ಕುಮಾರ್ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.