ಕಂಪ್ಲಿ : ಕಂಪ್ಲಿ ಪೊಲೀಸ್ ಠಾಣೆಯ ಪಿಐ ಆಗಿ ಕಾರ್ಯನಿರ್ವಹಿಸುತ್ತಿರುವ ವಾಸುಕುಮಾರ್ ಕೆ.ಬಿ.ಅವರು ಮುಖ್ಯಮಂತ್ರಿಗಳ ಪದಕ ಮತ್ತು ಪ್ರಶಸ್ತಿಗೆ ಭಾಜನರಾಗಿದ್ದಾರೆ.
2022-23 ರಲ್ಲಿ ಕಂಪ್ಲಿಯಲ್ಲಿ ಆರಕ್ಷಕ ನಿರೀಕ್ಷಕರಾಗಿ ಅಪ್ರತಿಮ ಸೇವೆ ಸಲ್ಲಿಸಿದ್ದ ವಾಸುಕುಮಾರ್ ಅವರಿಗೆ 2022-23ನೇ ಸಾಲಿನ ಮುಖ್ಯಮಂತ್ರಿಗಳ ಪದಕ ಹಾಗೂ ಪ್ರಶಸ್ತಿ ಲಭಿಸಿದ್ದು, ಇಂದು ಬೆಂಗಳೂರಿನಲ್ಲಿ ನಡೆದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಿAದ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರ ಸಮ್ಮುಖದಲ್ಲಿ ಪದಕ ಹಾಗೂ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.
ಮುಖ್ಯಮಂತ್ರಿಗಳ ಪದಕ ಪಡೆದ ಪಿಐ ವಾಸುಕುಮಾರ್ ಕೆ.ಬಿ.ಅವರನ್ನು ಕಂಪ್ಲಿ ಠಾಣೆಯ ಸಿಬ್ಬಂದಿಗಳು, ತಾಲ್ಲೂಕಿನ ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು ಸೇರಿದಂತೆ ಸಾರ್ವಜನಿಕರು ಅಭಿನಂದಿಸಿದ್ದಾರೆ.