ಬಳ್ಳಾರಿ, ಜೂ.18: ಟಿಪ್ಪರ್ ಡಿಕ್ಕಿಯಾಗಿ ಬೈಕ್ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಳ್ಳಾರಿ ತಾಲೂಕಿನ ಅಮರಾಪುರ ಗ್ರಾಮದ ಬಳಿ ನಡೆದಿದೆ. ಅದೃಷ್ಟವಶಾತ್ 8 ವರ್ಷದ ಮಗು ಪ್ರಾಣಾಪಾಯದಿಂದ ಪಾರಾಗಿದೆ. ಹೊಸ ದರೋಜಿ ಗ್ರಾಮದ ನಾಗರಾಜ್ (40) ಹಾಗೂ ಪಾರ್ವತಿ (37) ಮೃತರು. ಪತ್ನಿ ಹಾಗೂ 8 ವರ್ಷದ ಗಂಡು ಮಗುವಿನೊಂದಿಗೆ ನಾಗರಾಜ್ ಬಳ್ಳಾರಿಗೆ ಬರುತ್ತಿದ್ದ. ಚಳಗುರ್ಕಿ ಗ್ರಾಮದಿಂದ ಬಳ್ಳಾರಿ ವಾಪಾಸ್ ಆಗುವ ವೇಳೆ ವೇಗವಾಗಿ ಬಂದ ಟಿಪ್ಪರ್ ಲಾರಿ ಬೈಕ್ಗೆ ಡಿಕ್ಕಿಯಾಗಿದೆ.
ಗಾಯಗೊಂಡ ಮಗುವಿಗೆ ಬಳ್ಳಾರಿ ವಿಮ್ಸ್ನಲ್ಲಿ ಚಿಕಿತ್ಸೆ
ಈ ವೇಳೆ ನಾಗರಾಜ್ ಹಾಗೂ ಪಾರ್ವತಿ ತಲೆ ಭಾಗಕ್ಕೆ ಬಲವಾದ ಗಾಯವಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಗಾಯಗೊಂಡ ಮಗುವಿಗೆ ಬಳ್ಳಾರಿ ವಿಮ್ಸ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಬಳ್ಳಾರಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯಲ್ಲಿ ತಂದೆ-ತಾಯಿ ಕಳೆದುಕೊಂಡು ಮಗು ಅನಾಥವಾದಂತಾಗಿದೆ.