ಬಳ್ಳಾರಿ,ಏ.21: ಲೋಕಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮೇ. 07 ರಂದು ಮತದಾನ ನಡೆಯಲಿದ್ದು, ಪ್ರತಿಯೊಬ್ಬ ಮತದಾರರು ಅಂದು ತಪ್ಪದೆ ಮತ ಚಲಾಯಿಸಿ, ಪ್ರಜಾಪ್ರಭುತ್ವವದ ಹಬ್ಬದಲ್ಲಿ ಭಾಗಿಯಾಗಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಕರೆ ನೀಡಿದರು.
ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಮತದಾನ ಜಾಗೃತಿ ಅಭಿಯಾನ ಅಂಗವಾಗಿ ಭಾನುವಾರ ನಗರದ ರೈಲ್ವೇ ನಿಲ್ದಾಣದ ಆವರಣದಲ್ಲಿ ಏರ್ಪಡಿಸಿದ್ದ ಮ್ಯಾರಾಥಾನ್ ಓಟ ಕಾರ್ಯಕ್ರಮವನ್ನು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಜಿಲ್ಲಾದ್ಯಾಂತ ಹಲವಾರು ಕಾರ್ಯಕ್ರಮಗಳನ್ನು
ಸಾರ್ವಜನಿಕರಲ್ಲಿ ಮತದಾನ ಕುರಿತು ಅರಿವು ಮೂಡಿಸಲು ಏರ್ಪಡಿಸಲಾಗುತ್ತಿದ್ದು, ಎಲ್ಲಾ ಮತದಾರರು ತಪ್ಪದೆ ಮತದಾನ ಪ್ರಕ್ರಿಯೆಲ್ಲಿ ಪಾಲ್ಗೊಂಡು ಶೇ.100 ಪ್ರಮಾಣದಷ್ಟು ಮತದಾನವಾಗಲು ಪ್ರತಿಯೊಬ್ಬರು ಮತ ಚಲಾಯಿಸಬೇಕು. ಜಿಲ್ಲೆಯಾದ್ಯಂತ 60,000 ಹೆಚ್ಚೂ ಯುವ ಮತದಾರರಿದ್ದು, ಚುನಾವಣೆಯಲ್ಲಿ ಯುವಕರು ತಪ್ಪದೇ ಮತದಾನ ಮಾಡಬೇಕು ಅಲ್ಲದೆ ಇತರರಿಗೂ ಮತದಾನಕ್ಕೆ ಪ್ರೇರೇಪಿಸುವ ಮೂಲಕ ಹೆಚ್ಚಿನ ಮತದಾನ ಪ್ರಮಾಣ ದಾಖಲಾಗುವಂತೆ ಶ್ರಮಿಸಬೇಕು ಎಂದು ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.
ಚುನಾವಣಾ ಸ್ವೀಪ್ ಐಕಾನ್ ಆದ ನೃತ್ಯಪಟು ಎಸ್.ಕೆ.ಆರ್.ಜಿಲಾನ್ ಬಾಷಾ ಅವರು ಮಾತನಾಡಿ ಚುನಾವಣೆ ಎನ್ನುವುದು ಪ್ರತಿ ಐದು ವಷರ್Àಕೊಮ್ಮೆ ಬರುವ ಹಬ್ಬವಾಗಿದ್ದು, ಪ್ರತಿಯೊಬ್ಬ ಮತದಾರರು ಹಷರ್Àದಿಂದ ಮತಚಲಾವಣೆ ಮಾಡುವ ಮೂಲಕ ಹಬ್ಬ ಆಚರಿಸಬೇಕು ಎಂದರು.
ಮತದಾರರು ನಮ್ಮ ಭಾಗದ ಬಿರು ಬಿಸಿಲಿಗೂ ಜಗ್ಗದೆ, ಸಕ್ರಿಯವಾಗಿ ತೊಡಗಿಕೊಂಡು ಮತ ಚಲಾಯಿಸಿ. ಮೇ.07 ರಂದು ಯುವಕರು ತಪ್ಪದೇ ಮತದಾನ ಹಕ್ಕನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಯುವಕರಿಗೆ ಕರೆ ನೀಡಿದರು.
ಮತ್ತೋರ್ವ ಚುನಾವಣಾ ಸ್ವೀಪ್ ಐಕಾನ್ ಆದ ಅಥ್ಲೆಟಿಕ್ ಪಟು ನಂದಿನಿ ಅಗಸರ್ ಅವರು ಮಾತನಾಡಿ, ಸದೃಢ ರಾಷ್ಟ್ರ ನಿರ್ಮಾಣಕ್ಕೆ ಪ್ರತಿಯೊಬ್ಬ ಅರ್ಹ ಮತದಾರರು ಮೇ. 07 ರಂದು ತಮ್ಮ ಕೆಲಸದ ಒತ್ತಡದಲ್ಲಿಯೂ ಕೂಡ ಬಿಡುವು ಮಾಡಿಕೊಂಡು ತಪ್ಪದೇ ಮತದಾನ ಮಾಡಬೇಕು ಎಂದರು.
ಭವಿಷ್ಯದ ಉತ್ತಮ ದೇಶಕ್ಕೆ ಎಲ್ಲಾ ಸಾರ್ವಜನಿಕರು, ನಾಗರೀಕರು ಮತ್ತು ಯುವಕರು ಮತ ಚಲಾವಣೆ ಮಾಡಿ ಎಂದು ಹೇಳಿದರು.
ಇದೇ ವೇಳೆ ಮತದಾನ ಜಾಗೃತಿಯ ಪ್ರತಿಜ್ಞಾ ವಿಧಿಯನ್ನು ಇದೇ ಸಂದರ್ಭದಲ್ಲಿ ಬೋಧಿಸಲಾಯಿತು.
ನಾನು ಹೆಮ್ಮೆಯ ಮತದಾರ ಎನ್ನುವ ಸೆಲ್ಪೀ ಬೂತ್ ಅನ್ನು ರೈಲ್ವೆ ನಿಲ್ದಾಣದಲ್ಲಿ ಸ್ಥಾಪಿಸಿಸಲಾಗಿತ್ತು, ಇದು ಆಕಷರ್Àಣೆಯ ಕೇಂದ್ರವಾಗಿ, ಯುವಕರು ಸಂತಸದಿಂದ ಮೊಬೈಲ್ಗಳಲ್ಲಿ ಫೆÇೀಟೋ ಕ್ಲಿಕ್ಕಿಸಿಕೊಂಡರು.
ಈ ಸಂಧರ್ಭದಲ್ಲಿ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಎನ್.ಝುಬೇರ್, ಸಹಾಯಕ ಆಯುಕ್ತ ಹೇಮಂತ್, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಂಜೀತ್ ಕುಮಾರ್ ಬಂಡಾರು, ಅರಣ್ಯ ಇಲಾಖೆಯ ಉಪಸಂರಕ್ಷಣಾಧಿಕಾರಿ ಸಂದೀಪ್ ಸೂರ್ಯವಂಶಿ, ಮಹಾನಗರ ಪಾಲಿಕೆಯ ಆಯುಕ್ತ ಜಿ.ಖಲೀಲ್ ಸಾಬ್, ಹೆಚ್ಚುವರಿ ಪೆÇಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು, ವಿದ್ಯಾರ್ಥಿಗಳು, ಯುವಕರು ಹಾಗೂ ಸಾರ್ವಜನಿಕರು ಮ್ಯಾರಥಾನ್ನಲ್ಲಿ ಭಾಗವಹಿಸಿದ್ದರು.