ಬಳ್ಳಾರಿ: ಏ 12; ಬಳ್ಳಾರಿ ಮತ್ತು ವಿಜಯನಗರ ಕ್ಷೇತ್ರದಲ್ಲಿ ತುಕಾರಾಂ ಅವರು ಬಹುಮತದಿಂದ ಗೆಲ್ಲುತ್ತಾರೆ. ಗೆದ್ದ ನಂತರ ಜಿಲ್ಲೆಯ ಹಲವಾರು ಸಮಸ್ಯೆಗಳನ್ನು ಬಗೆ ಹರಿಸಲಿದ್ದಾರೆ ಎಂದು ಸಚಿವ ಬಿ. ನಾಗೇಂದ್ರ ಅವರು ಹೇಳಿದರು.
ಕಾಂಗ್ರೆಸ್ ಅಭ್ಯರ್ಥಿ ಈ ತುಕಾರಾಂ ಅವರು ನಾಮ ಪತ್ರ ಸಲ್ಲಿಸಿದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಹೆಚ್ಚು ಮತದಿಂದ ಗೆಲ್ಲಲಿದ್ದಾರೆ. ಬಳ್ಳಾರಿ ಜನರು ಈ ಬಾರಿ ತುಕಾರಾಂ ಅವರಿಗೆ ಆಶಿರ್ವಾದ ಮಾಡಲಿದ್ದಾರೆ. ಬಿಜೆಪಿಯವರು ಕೆವಲ ಸುಳ್ಳುಗಳನ್ನ ಹೇಳಿಕೊಂಡು ದೇಶವನ್ನು ಲೂಟಿ ಮಾಡುತ್ತಿದ್ದು, ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಜನರಿಗೆ ಅವರು ಬಂಡವಾಳ ಗೋತ್ತಾಗಿದೆ ಹಾಗಾಗಿ ಜನರು ಕಾಂಗ್ರೆಸ್ ಗೆ ಮತ ನೀಡಲಿದ್ದಾರೆ ಎಂದರು.
ಬಹುಮತದಿಂದ ಕಾಂಗ್ರೆಸ್ ಗೆಲ್ಲಲಿದೆ: ಸಚಿವ ಬಿ.ನಾಗೇಂದ್ರ
![](https://suvarnavaahini.com/wp-content/uploads/2024/04/14-860x387.jpg)