ಬಳ್ಳಾರಿ,ಏ.28: ಬಳ್ಳಾರಿ ಮಹಾನಗರ ಪಾಲಿಕೆಯ 22 ನೇ ವಾರ್ಡಿನ ಕೆಹೆಚ್ಬಿ ಕಾಲೋನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಇಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಎರ್ಪಡಿಸಲಾಗಿತ್ತು.ಬೆಂಗಳೂರಿನ ವೈದೇಹಿ ಆಸ್ಪತ್ರೆಯವರ ಸಹಯೋಗದೊಂದಿಗೆ ಮಹಾನಗರ ಪಾಲಿಕೆಯ 22ನೇ ವಾರ್ಡ್ನ ಸದಸ್ಯ ಕೆ. ಹನುಮಂತಪ್ಪನವರ ನೇತೃತ್ವದಲ್ಲಿ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ 150ಕ್ಕೂ ಹೆಚ್ಚು ಸಾರ್ವಜನಿಕರು ಬಿಪಿ, ಶುಗರ್, ಮತ್ತಿತರೇ ಕಾಯಿಲೆಗಳ
ಬಗ್ಗೆ ತಪಾಸಣೆಗೆ ಒಳಗಾದರು. ತಪಾಸಣೆಗೊಳಗಾದವರಿಗೆ ಅಗತ್ಯವಾದ ಔಷಧಿಗಳನ್ನೂ ಸಹ ವಿತರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ನಾಯ್ಡು, ಬಿಜೆಪಿ ಸಾರ್ವಜನಿಕ ಸಂಪರ್ಕ ಅಧಿಕಾರಿ ಮಲ್ಲಿಕಾರ್ಜುನ ಹಚ್ಚೋಳ್ಳಿ, ರಾಮಚಂದ್ರಪ್ಪ, ಬಿಜೆಪಿ ಮುಖಂಡರಾದ ಗಡ್ಡಂ ತಿಮ್ಮಪ್ಪ, ನಾಗವೇಣಿ, ಬಿಜೆಪಿ ಮಹಿಳಾ ಮೋರ್ಚಾದ ಮುಖಂಡರಾದ ಸುಮಾರೆಡ್ಡಿ, ಹಾಗೂ ಶ್ರೀಧರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.