ಬಳ್ಳಾರಿ,ಏ.27: ಬಳ್ಳಾರಿ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಕಾರ್ಮಿಕರ ದಿನಾಚರಣೆಯ ಪ್ರಯುಕ್ತ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಬಳ್ಳಾರಿ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘ, ಜಿಲ್ಲಾ ಅಂದತ್ವ ನಿವಾರಣ ಸಂಘ ಹಾಗೂ ಎಂ ಆರ್ ಪಿ ಆಸ್ಪತ್ರೆ ಕೊಂಡ್ಲಹಳ್ಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಕಾರ್ಮಿಕರ ದಿನಾಚರಣೆಯ ಪ್ರಯುಕ್ತ ಉಚಿತ ನೇತ್ರ ತಪಾಸಣೆ ಇದೇ ಮೇ 1ನೇ ತಾರೀಕು ಗುರುವಾರ ಬೆಳಿಗ್ಗೆ 9:00 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ರಾಘವ ಕಲಾಮಂದಿರದಲ್ಲಿ ಆಯೋಜಿಸಲಾಗಿದೆ.
ಖ್ಯಾತ ನೇತ್ರ ತಜ್ಞರಾದ ಡಾಕ್ಟರ್ ಏನ್.ವಿಜಯ್, ವಿಜಯ ನಾಗರಾಜ್ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಬಳ್ಳಾರಿ ಇವರ ನೇತೃತ್ವದಲ್ಲಿ ಮತ್ತು ಸ್ಯೆಯ್ಯದ್ ನೂರ್ ಭಾಷಾ ಬಳ್ಳಾರಿ ಇವರ ಸಹಕಾರದೊಂದಿಗೆ ಹಮ್ಮಿಕೊಂಡಿರುವ ಉಚಿತ ನೇತ್ರ ತಪಾಸಣೆ ಹಾಗೂ ಕಣ್ಣಿನ ಶಸ್ತ್ರ ಚಿಕಿತ್ಸಾ ಶಿಬಿರದ ಕಾರ್ಯಕ್ರಮಕ್ಕೆ ಜಿಲ್ಲೆಯ ಸಾರ್ವಜನಿಕರು ನಾಗರಿಕ ಬಂಧುಗಳು ಆಗಮಿಸಿ ಭಾಗವಹಿಸಿ ತಮ್ಮ ಕಣ್ಣಿನ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದು ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷರು, ಗೌರವಾಧ್ಯಕ್ಷರು
ಹಾಗೂ ಉಪಾಧ್ಯಕ್ಷರು, ಕಾರ್ಯದರ್ಶಿಗಳು ಮತ್ತು ಪದಾಧಿಕಾರಿಗಳುಈ ಮೂಲಕ ಕೋರಲಾಗಿದೆ.