ಬಳ್ಳಾರಿ, ಫೆ.3: ವೀ.ವಿ ಸಂಘದ ಹಾನಗಲ್ ಶ್ರೀ ಕುಮಾರೇಶ್ವರ ಪಾಲಿಟೆಕ್ನಿಕ್ ತಾಂತ್ರಿಕ ವಿದ್ಯಾಲಯದಲ್ಲಿ ಹರಿಹರದ ಶ್ರೀ ರಾಮಕೃಷ್ಣ ವಿವೇಕಾನಂದ ಆಶ್ರಮದ ಶ್ರೀ ಶಾರದೇಶಾನಂದ ಸ್ವಾಮೀಜಿ
ಮಹರಾಜರು ಭೇಟಿ ನೀಡಿ ಕಾರ್ಯಕ್ರಮವನ್ನು ಜ್ಯೋತಿ ಬೆಳಗುವುದರ ಮೂಲಕ ಉಧ್ಘಾಟಿಸಲಾಯಿತು, ಇವರನ್ನು ವೀ.ವಿ ಸಂಘದ ಅಧ್ಯಕ್ಷರಾದ ಅಲ್ಲಂ ಗುರುಬಸವರಾಜ್ ರವರು ಸ್ವಾಗತಿಸಿ ಇವರು ನೀಡುವ ಆದರ್ಶ
ಮೌಲ್ಯಗಳನ್ನು ತಮ್ಮ ವ್ಯಕ್ತಿತ್ವ ವಿಕಸನ ಜೀವನದಲ್ಲಿ ಅಳವಡಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಶ್ರೀ ಶಾರದೇಶಾನಂದ ಸ್ವಾಮೀಜಿ ಮಹರಾಜರು ಮಾತನಾಡುತ್ತಾ ಆದ್ಯಾತ್ಮ ಮತ್ತು ವಿಜ್ಞಾನ ನಡುವೆ ಇರುವ ಸಂಬಂಧದ ಬಗ್ಗೆ ವಿವರಿಸಿದರು. ಜೀವನ ತಮಾಷೆಯಾಗಬಾರದು ವಯಸ್ಸಾದ ಹಿರಿಯರನ್ನು ಗೌರವದಿಂದ ನೋಡಿಕೊಳ್ಳಬೇಕು ಮತ್ತು ಉನ್ನತ ಸ್ಥಾನ ಪಡೆಯಲು ದ್ವೇಷ,ಅಸೂಯೆ ಇತ್ಯಾದಿಗಳನ್ನು ತ್ಯಜಿಸಿ.
ಉಪನ್ಯಾಸ ಮತ್ತು ಧ್ಯಾನದ ಮಹತ್ವವನ್ನು ತಿಳಿಸಿದರು. ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ಕಾಯಕವನ್ನು
ನಿಷ್ಠೆಯಿಂದ ಮಾಡಬೇಕು ಎಂದು ತಿಳಿಸಿದರು. ಹೆಚ್.ಎಸ್.ಕೆ. ಪಾಲಿಟೆಕ್ನಿಕ್ನ ಆಡಳಿತ ಮಂಡಳಿಯ ಅಧ್ಯಕ್ಷರು ಪಲ್ಲೇದ ಪ್ರಭುಲಿಂಗ, ಪ್ರಾಂಶುಪಾಲರಾದ ಬಿ. ಶ್ರೀಶೈಲಗೌಡರವರು ಮತ್ತು ಎಲ್ಲಾ ವಿಭಾಗದ ಮುಖ್ಯಸ್ಥರು , ಸಿಬ್ಬಂದಿಗಳು ಹಾಜರಿದ್ದರು. ಕಾರ್ಯಕ್ರಮದ ನಿರೂಪಣೆ ಮತ್ತು ವಂದನಾರ್ಪಣೆಯನ್ನು ಕನ್ನಡ ಉಪನ್ಯಾಸಕರಾದ .ಎ.ಎಂ.ಪಿ.ವೀರೇಶಸ್ವಾಮಿಯವರು ನಡೆಸಿಕೊಟ್ಟರು.