ಬಳ್ಳಾರಿ,ಏ.12: ನ್ಯಾಯಯುತವಾದ ಹಲವಾರು ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಫೆಡರೇಷನ್ ಆಫ್ ಕರ್ನಾಟಕ ಸ್ಟೇಟ್ ಲಾರಿ ಓನರ್ಸ್ ಆಂಡ್ ಏಜೆಂಟ್ ಅಸೋಸಿಯೇಷನ್ ವತಿಯಿಂದ ಏ.15ರಂದು ಬೆಳಿಗ್ಗೆ 6 ಗಂಟೆಯಿಂದ ಹಮ್ಮಿಕೊಂಡಿರುವ ಲಾರಿ ಸಂಚಾರದ ಅನಿರ್ದಿಷ್ಟ ಮುಷ್ಕರಕ್ಕೆ ಬಳ್ಳಾರಿ ಜಿಲ್ಲಾ ಲಾರಿ ಮಾಲೀಕರ ಸಂಘ ತನ್ನ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷರು ಹಾಗೂ ಬಳ್ಳಾರಿ ಮಹಾನಗರ ಪಾಲಿಕೆಯ ಸದಸ್ಯರಾದ ಮಿಂಚು ಶ್ರೀನಿವಾಸ್ರವರು ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿರುವ ಪತ್ರಿಕಾ ಭವನದಲ್ಲಿ ಇಂದು ಬೆಳಿಗ್ಗೆ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಲಾರಿ ಮಾಲೀಕರ ಜಿಲ್ಲಾಧ್ಯಕ್ಷರಾದ ಮಿಂಚು ಶ್ರೀನಿವಾಸ್ ಅವರು,ಮಾತನಾಡಿ
ಫೆಡರೇಷನ್ ಆಫ್ ಕರ್ನಾಟಕ ಸ್ಟೇಟ್ ಲಾರಿ ಓನರ್ಸ್ ಆಂಡ್ ಏಜೆಂಟ್ ಅಸೋಸಿಯೇಷನ್ ಅಧ್ಯಕ್ಷ ಡಾ.ಜಿ.ಆರ್.ಷಣ್ಮುಖಪ್ಪರವರ ನೇತೃತ್ವದಲ್ಲಿ ರಾಜ್ಯ ಸರ್ಕಾರಗಳ ನಮ್ಮ ಬೇಡಿಕೆಗಳ ಬಗ್ಗೆ ಸರ್ಕಾರಗಳು ಸಕಾರಾತ್ಮಕವಾಗಿ ಸ್ಪಂದಿಸದೇ ಇದ್ದಲ್ಲಿ, ಏ.15ರಂದು ಬೆಳಿಗ್ಗೆ 6 ಗಂಟೆಯಿಂದ ರಾಜ್ಯಾದ್ಯಂತ ಲಾರಿ ಮುಷ್ಕರಕ್ಕೆ ನಿರ್ಧರಿಸಿದ್ದು,
ಈ ಕಾರ್ಯಕ್ಕೆ ಬಳ್ಳಾರಿ ಜಿಲ್ಲಾ ಸಂಘವು ಸಹ ಬೆಂಬಲಿಸುತ್ತದೆ ಎಂದರು , ಹೆಚ್ಚಿಸಿರುವ ಡೀಸೆಲ್ ದರವನ್ನು ಹಿಂಪಡೆಯಬೇಕು. ದೇಶದ ಯಾವುದೇ ರಾಜ್ಯದಲ್ಲೂ
ರಾಜ್ಯ ಹೆದ್ದಾರಿ ಟೋಲ್ಗಳು ಇರುವುದಿಲ್ಲ. ಆದರೆ. ನಮ್ಮ ರಾಜ್ಯದಲ್ಲಿ ಮಾತ್ರ ಈ ಮಲತಾಯಿ ಧೋರಣೆ ತೋರಿ. ಯಾವುದೇ ವಾಹನದ ಚಾಲಕರಿಗೆ ಮೂಲಭೂತ ಸೌಕರ್ಯಗಳು ಹಾಗೂ ರಸ್ತೆ ಅಪಘಾತ ತಡೆಯುವುದಕ್ಕೆ ಕ್ರಮ ವಹಿಸದೇ, ಕೇವಲ ಟೋಲ್ಗಳಿಗೆ ಬಣ್ಣ ಬಳಿದು ಶುಲ್ಕ ವಸೂಲಿ ಮಾಡುತ್ತಿರುವುದು ಸಮಂಜಸವಾಗಿರುವುದಿಲ್ಲ. ಆದ್ದರಿಂದ ಈ ಕೂಡಲೇ ರಾಜ್ಯ ಹೆದ್ದಾರಿಗಳಲ್ಲಿ ಟೋಲ್ ಶುಲ್ಕವನ್ನು ಸಂಗ್ರಹಿಸುವುದನ್ನು ಕೂಡಲೇ
ಕೈ ಬಿಡಬೇಕು ಎಂದು ಒತ್ತಾಯಿಸಿದರು.
ನಗರದಲ್ಲಿ ಲಾರಿಗಳಿಗೆ ನೋ ಎಂಟ್ರಿ ಹೆಸರಿನಲ್ಲಿ ಲಾರಿ ಚಾಲಕರಿಗೆ ಪೊಲೀಸರಿಂದ ಮತ್ತು ಆರ್ಟಿಓಗಳಿಂದ ಆಗುತ್ತಿರುವ ಕಿರುಕುಳವನ್ನು ತಪ್ಪಿಸಬೇಕು ಎಂಬ ಬೇಡಿಕೆಗಳೂ ಸೇರಿದಂತೆ ಇತರೇ ನ್ಯಾಯಯುತವಾದ ಹಲವಾರು ಬೇಡಿಕೆಗಳನ್ನು ಈಡೇರಿಸಬೇಕೆಂದು ಲಾರಿ ಮಾಲೀಕರ ಮುಷ್ಕರ ನಡೆಸುತ್ತೇವೆ ಎಂದರು.
ಪತ್ರಿಕಾ ಗೋಷ್ಠಿಯಲ್ಲಿ ಬಳ್ಳಾರಿ ಜಿಲ್ಲಾ ಲಾರಿ ಮಾಲೀಕರ ಸಂಘದ ಕಾರ್ಯದರ್ಶಿ ಎಂ. ಮಹಬೂಬ್ ಭಾಷಾ ಪೆದ್ದನ್ನು, ವಿಶ್ವನಾಥ್ ,ಬಸವರಾಜ್ ,ಫಯಾಜ್, ಸಂತೋಷ್ ಸೇರಿದಂತೆ ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಲಾರಿ ಮಾಲೀಕರು ಉಪಸ್ಥಿತರಿದ್ದರು.