Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಬಳ್ಳಾರಿ: ಮತದಾರರ ಪಟ್ಟಿ ಪರಿಷ್ಕರಣೆಗೆ ಹೊಸ ವೇಳಾಪಟ್ಟಿ ಆ.24ರಂದು ಕರಡು ಪಟ್ಟಿ ಪ್ರಕಟ; ಸೆ.23ರವರೆಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ಬಳ್ಳಾರಿ,ಆ.11 : ಭಾರತ ಚುನಾವಣಾ ಆಯೋಗವು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದ್ದು, ಬಳ್ಳಾರಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆ ಚುರುಕುಗೊಳ್ಳಲಿದೆ.

ಜಿಲ್ಲೆಯ 1,227 ಮತಗಟ್ಟೆಗಳಿಗೆ ಸಂಬಂಧಿಸಿದಂತೆ ಎಸ್ಐಆರ್ ವ್ಯಾಪ್ತಿಯಲ್ಲಿ ಬರುವ ಮತದಾರರ ಮಾಹಿತಿಯನ್ನು ಪರಿಶೀಲಿಸುವ ಕಾರ್ಯ ನಡೆಯುತ್ತಿದ್ದು, ಪರಿಷ್ಕೃತ ವೇಳಾಪಟ್ಟಿಯಂತೆ ಆ.24ರಂದು ಕರಡು ಮತದಾರರ ಪಟ್ಟಿ ಪ್ರಕಟವಾಗಲಿದೆ. ಕರಡು ಪಟ್ಟಿ ಪ್ರಕಟವಾದ ದಿನದಿಂದ ಸೆ.23ರವರೆಗೆ ಸಾರ್ವಜನಿಕರು ಅಹವಾಲು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ.

*ಐದು ಕ್ಷೇತ್ರಗಳಲ್ಲಿ 12.29 ಲಕ್ಷಕ್ಕೂ ಹೆಚ್ಚು ಮತದಾರರು:

ಬಳ್ಳಾರಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 12,27,958 ಮತದಾರರು ಇದ್ದಾರೆ.

ಈ ಪೈಕಿ ಬಳ್ಳಾರಿ ನಗರ ಕ್ಷೇತ್ರದಲ್ಲಿ 2,79,144.

ಬಳ್ಳಾರಿ ಗ್ರಾಮೀಣ ಕ್ಷೇತ್ರದಲ್ಲಿ 2,51,325.

ಸಿರುಗುಪ್ಪ ಕ್ಷೇತ್ರದಲ್ಲಿ 2,28,277.

ಕಂಪ್ಲಿ ಕ್ಷೇತ್ರದಲ್ಲಿ 2,28,666 ಹಾಗೂ ಸಂಡೂರು ಕ್ಷೇತ್ರದಲ್ಲಿ 2,42,174 ಮತದಾರರಿದ್ದಾರೆ.

SIR ಪ್ರಕ್ರಿಯೆಯಲ್ಲಿ Absentee, Shifted, Dead, Duplicate ಹಾಗೂ Others ವಿಭಾಗಗಳಿಗೆ ಸೇರಿದ ಮತದಾರರ ಮಾಹಿತಿಯನ್ನು ಗುರುತಿಸಿ ಪರಿಶೀಲಿಸಲಾಗುತ್ತಿದೆ. ಈ ಪಟ್ಟಿಗೆ ಸಂಬಂಧಿಸಿದ ಮಾಹಿತಿ ಸಾರ್ವಜನಿಕರ ಪರಿಶೀಲನೆಗೆ ಲಭ್ಯವಾಗುವಂತೆ ಮಾಡಲಾಗಿದೆ.

*ಆ.17ರವರೆಗೆ BLOಗಳಿಗೆ ಮಾಹಿತಿ ನೀಡಲು ಅವಕಾಶ:*

SIR ಪಟ್ಟಿಯಲ್ಲಿ ಹೆಸರು ಇರುವ ಅಥವಾ ಈ ಪಟ್ಟಿಗೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ಹೊಂದಿರುವವರು ತಮ್ಮ ವ್ಯಾಪ್ತಿಯ ಮತಗಟ್ಟೆಯ BLO (ಮತಗಟ್ಟೆ ಮಟ್ಟದ ಅಧಿಕಾರಿ)ಗಳಿಗೆ ಮಾಹಿತಿ ನೀಡಬಹುದಾಗಿದೆ. ನಿಯಮಾನುಸಾರ ಪರಿಶೀಲನೆ ನಡೆಸಿ, ಸಂಬಂಧಪಟ್ಟ ಮತದಾರರ ದಾಖಲೆಗಳನ್ನು ಡಿಜಿಟೈಸ್ ಮಾಡುವ ಕಾರ್ಯಕ್ಕೆ ಆ.17ರವರೆಗೆ ಕಾಲಾವಕಾಶ ನೀಡಲಾಗಿದೆ.

*ಹೊಸದಾಗಿ ಹೆಸರು ಸೇರ್ಪಡೆಗೂ ಅವಕಾಶ:*

ಕರಡು ಮತದಾರರ ಪಟ್ಟಿ ಪ್ರಕಟವಾದ ಬಳಿಕ ಆ.24ರಿಂದ ಸೆ.23ರವರೆಗೆ ಹೊಸದಾಗಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಕೊಳ್ಳಲು ಅವಕಾಶವಿದೆ. ಅರ್ಹ ಮತದಾರರು ನಮೂನೆ-6, ನಿಗದಿಪಡಿಸಿರುವ ದಾಖಲೆಗಳು ಹಾಗೂ ಘೋಷಣಾ ನಮೂನೆಯನ್ನು ಸಲ್ಲಿಸಿ ನೋಂದಣಿ ಮಾಡಿಸಿಕೊಳ್ಳಬಹುದು.

ಜಿಲ್ಲೆಯ SIR ಪಟ್ಟಿಯನ್ನು ಜಿಲ್ಲಾಡಳಿತದ ಅಧಿಕೃತ ವೆಬ್‌ಸೈಟ್ ಹಾಗೂ ಮುಖ್ಯ ಚುನಾವಣಾಧಿಕಾರಿಗಳ ಕರ್ನಾಟಕದ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಸಾರ್ವಜನಿಕರು ಪಟ್ಟಿಯನ್ನು ಪರಿಶೀಲಿಸಿ ತಮ್ಮ ಹೆಸರು ಹಾಗೂ ವಿವರಗಳನ್ನು ಖಚಿತಪಡಿಸಿಕೊಳ್ಳಬಹುದಾಗಿದೆ.

ಅರ್ಹ ಮತದಾರರು ಹೆಚ್ಚಿನ ಆಸಕ್ತಿ ವಹಿಸಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಾಯಿಸಿಕೊಳ್ಳುವ ಮೂಲಕ ಸುಭದ್ರ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೆ. ನಾಗೇಂದ್ರ ಪ್ರಸಾದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?