Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಹಂಪಿ ಉತ್ಸವದಲ್ಲಿ ಎತ್ತುಗಳ ಪ್ರದರ್ಶನ: 52 ಜೋಡೆತ್ತುಗಳು ಭಾಗಿ

ಹೊಸಪೇಟೆ (ವಿಜಯನಗರ) ಫೆಬ್ರವರಿ 02 : ಇದೇ ಮೊದಲ ಬಾರಿಗೆ ಹಂಪಿ ಉತ್ಸವದಲ್ಲಿ ಆಯೋಜಿಸಲಾದ ಎತ್ತುಗಳ ಪ್ರದಶನ ಜನಮನ ಸೂರೆಗೊಂಡಿದೆ. ರೈತರ ಸಂಗಾತಿ, ಉಳುಮೆ ಸಹಕಾರಿಯಾಗಿರುವ ವಿವಿಧ ದೇಶಿ ತಳಿಯ ಎತ್ತುಗಳು ಪ್ರದರ್ಶನದ ಆಕರ್ಷಣೆ ಎನಿಸಿದವು.
ಕಮಲಾಪುರ ಪಟ್ಟಣದ ಹಂಪಿ ಅಭಿವೃದ್ಧಿ ಪ್ರಾಧಿಕಾರದ ಹಿಂಭಾಗದ ಆವರಣದಲ್ಲಿ ಇ0ದು ನಡೆದ ಎತ್ತುಗಳ ಪ್ರದರ್ಶನಕ್ಕೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಗೋ ಪೂಜೆ ಮಾಡುವ ಮೂಲಕ ಚಾಲನೆ ನೀಡಿದರು.
ಸುಮಾರು 52 ಜೊತೆ ಎತ್ತುಗಳು ಈ ಪ್ರದರ್ಶನದಲ್ಲಿ ಪಾಲ್ಗೊಂಡಿದ್ದವು. ಹಳ್ಳಿಕಾರ್, ಅಮೃತ್ ಮಹಲ್, ಕಿಲಾರ್ ಸೇರಿದಂತೆ ಹಲವು ದೇಶಿ ತಳಿಯ ಎತ್ತುಗಳು ರೈತರ ಮನಗೆದ್ದವು. ಹೊಸಪೇಟೆ ನಗರದ ಬಂಡಿ ಕೃಷ್ಣಪ್ಪ ಅವರ ಜೋಡೆತ್ತುಗಳು ಚಾಂಪಿಯನ್ ಆಫ್ ಚಾಂಪಿಯನ್ ಪ್ರಶಸ್ತಿಗೆ ಭಾಜನವಾಗಿ ಮೊದಲ ಸ್ಥಾನಗಳಿಸಿದವು. ಹೊಸಪೇಟೆ ತಾಲ್ಲೂಕಿನ ನಲ್ಲಾಪುರ ಗ್ರಾಮದ ರೈತ ಹನುಮಂತಪ್ಪ ಮುದಿಯಪ್ಪನವರ ಜೋಡೆತ್ತುಗಳು ದ್ವಿತೀಯ ಸ್ಥಾನಗಳಿಸಿದರೆ, ವೆಂಕಟಾಪುರ ಗ್ರಾಮದ ರೈತ ಹುಲಿಗೇಶ್ ಅವರ ಜೋಡೆತ್ತುಗಳು ಮೂರನೇ ಸ್ಥಾನಗಳಿಸಿದವು.
ಚಾಂಪಿಯನ್ ಆಫ್ ಚಾಂಪಿಯನ್ ಪ್ರಶಸ್ತಿಗೆ ಭಾಜನವಾದ ಜೋಡೆತ್ತುಗಳಿಗೆ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ವೈಯಕ್ತಿಕವಾಗಿ ರೂ.50 ಸಾವಿರ ಬಹುಮಾನ ನೀಡಿದ್ದು, ವಿಶೇಷವಾಗಿತ್ತು.
ಈ ಸಂದರ್ಭದಲ್ಲಿ ವಿಜಯನಗರ ಶಾಸಕರಾದ ಹೆಚ್.ಆರ್.ಗವಿಯಪ್ಪ, ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀಹರಿ ಬಾಬು ಬಿ.ಎಲ್., ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಜಂಟಿ ನಿರ್ದೇಶಕರಾದ ಡಾ.ಕೃಷ್ಣಮೂರ್ತಿ, ಉಪನಿರ್ದೇಶಕರಾದ ಡಾ.ಕೊಮಾಮೂರ್ತಿ, ಜಾನುವಾರು ಸಂವರ್ಧನ ಕೇಂದ್ರದ ಡಾ.ರವಿಪ್ರಕಾಶ್ ಸೇರಿದಂತೆ ಜನಪ್ರತಿನಿಧಿಗಳು, ಹಲವು ಗಣ್ಯರು, ರೈತರು, ಸಾರ್ವಜನಿಕ ರು ಉಪಸ್ಥಿತರಿದ್ದರು. ಎತ್ತುಗಳ ಪ್ರದರ್ಶನದ ನಿರ್ಣಾಯಕರಾಗಿ ಡಾ.ಎಸ್.ಎಸ್.ಪಾಟೀಲ್ ಹಾಗೂ ಡಾ.ಮಂಜುನಾಥ ಕಾರ್ಯನಿರ್ವಹಿಸಿದರು.

 

 

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?