Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಡಿಸೆಂಬರ್-2025 ತಿಂಗಳಲ್ಲಿ ಅಖಿಲ ಭಾರತ 88ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ ಕನ್ನಡದ ತೇರನ್ನು ಎಳೆಯಲು ಸಿದ್ಧರಾಗೋಣ: ಕಸಾಪ ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ ಕರೆ

ಬಳ್ಳಾರಿ,ಏ.15 : ಬರುವ ಡಿಸೆಂಬರ್ ತಿಂಗಳಲ್ಲಿ ಬಳ್ಳಾರಿಯಲ್ಲಿ ಅಖಿಲ ಭಾರತ 88ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗುತ್ತಿದ್ದು, ಕನ್ನಡದ ನಾಡು-ನುಡಿ, ಭಾಷಾಭಿಮಾನ, ಕನ್ನಡದ ಅಸ್ಮಿತೆಯನ್ನು ಇನ್ನಷ್ಟು ಬೆಳೆಸುವ ನಿಟ್ಟಿನಲ್ಲಿ ಕನ್ನಡದ ತೇರನ್ನು ಎಳೆಯಲು ನಾವೆಲ್ಲರೂ ಸಿದ್ಧರಾಗೋಣ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾದ ನಾಡೋಜ ಡಾ.ಮಹೇಶ್ ಜೋಶಿ ಕರೆ ನೀಡಿದರು.

ಅವರು, ಮಂಗಳವಾರದAದು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡೀಯೋ ಕಾನ್ಫರೆನ್ಸ್ ಹಾಲ್‌ನಲ್ಲಿ ಅಖಿಲ ಭಾರತ 88ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಯ ಕುರಿತು ಪೂರ್ವಭಾವಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಕನ್ನಡ ಸಾಹಿತ್ಯ ಸಮ್ಮೇಳನಗಳು ಕನ್ನಡಿಗರಿಗೆ ಮತ್ತು ಸಾಹಿತ್ಯ ಪ್ರೇಮಿಗಳಿಗೆ ಹಬ್ಬ. ಕನ್ನಡದ ಇತಿಹಾಸವನ್ನು ಪ್ರಚುರಪಡಿಸುವುದು ಮತ್ತು ಭಾಷೆಯನ್ನು ಬೆಳೆಸುವುದು ಸಮ್ಮೇಳನದ ಮುಖ್ಯ ಉದ್ದೇಶವಾಗಿದೆ.

ಮುಖ್ಯವಾಗಿ ಸಮ್ಮೇಳನಗಳಲ್ಲಿ ಕನ್ನಡ ನಾಡು ನುಡಿಗೆ ಸಂಬAಧಿಸಿದAತೆ, ಭಾಷೆ ಬೆಳವಣಿಗೆ, ಗಡಿ ಭಾಗದ ಶಾಲಾ ವಿಚಾರಗಳ ಸಂಬAಧಿಸಿದAತೆ ಹಲವು ನಿರ್ಣಯಗಳನ್ನು ತೆಗೆದುಕೊಂಡು ಸರ್ಕಾರದ ಮುಂದಿಡಲಾಗುತ್ತದೆ ಎಂದು ಅವರು ತಿಳಿಸಿದರು.
ಅಖಂಡ ಬಳ್ಳಾರಿ ಜಿಲ್ಲೆಯಲ್ಲಿ ಈಗಾಗಲೇ 5 ಸಾಹಿತ್ಯ ಸಮ್ಮೇಳನಗಳು ನಡೆದಿವೆ. ಈ ಹಿಂದೆ 1920 ರಲ್ಲಿ ಮೊದಲ ಬಾರಿಗೆ ಅಖಂಡ ಜಿಲ್ಲೆಯ ಹೊಸಪೇಟೆಯಲ್ಲಿ ರೊದ್ದ ಶ್ರೀನಿವಾಸ ರಾವ್ ಅವರ ಅಧ್ಯಕ್ಷತೆಯಲ್ಲಿ 6 ನೇ ಸಮ್ಮೇಳನ ನಡೆಯಿತು.

ಎರಡನೇ ಬಾರಿಗೆ  ಬಾರಿಗೆ 1926 ರ ಮೇ 22 ರಿಂದ 24 ರ ವರೆಗೆ ಮೂರು ದಿನಗಳ ಕಾಲ 12 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಳ್ಳಾರಿ ನಗರದಲ್ಲಿ ನಡೆದಿತ್ತು. ಇದರ ಅಧ್ಯಕ್ಷತೆಯನ್ನು ವಚನ ಪಿತಾಮಹ ಫಕೀರಪ್ಪ ಗುರುಬಸಪ್ಪ ಹಳಕಟ್ಡಿ (ಫ.ಗು.ಹಳಕಟ್ಟಿ) ಅವರು ವಹಿಸಿದ್ದರು.

ನಂತರದ 12 ವರ್ಷಗಳ ನಂತರ  ಮೂರನೇ ಬಾರಿಗೆ 1938 ರ ಡಿ.29 ರಿಂದ 31 ರ ವರೆಗೆ 23 ನೇ ಕನ್ನಡ ಸಾಹಿತ್ಯ ಸಮ್ಮೇಳನ ರಂಗನಾಥ್ ದಿವಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆದಿತ್ತು. ನಾಲ್ಕನೇ ಬಾರಿಗೆ ಹರಪನಹಳ್ಳಿಯಲ್ಲಿ 1947 ರಲ್ಲಿ ಸಿ.ಕೆ.ವೆಂಕಟರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆಯಿತು. ಬಳಿಕ 11 ವರ್ಷಗಳ ನಂತರ 1958 ರ ಜ. 18 ರಿಂದ 20 ರ ವರೆಗೆ ವಿನಾಯಕ್ ಕೃಷ್ಣ ಗೋಕಾಕ್ ಅವರ ಅಧ್ಯಕ್ಷತೆಯಲ್ಲಿ ಬಳ್ಳಾರಿ ನಗರದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ 5 ನೇ ಬಾರಿಗೆ ನಡೆಯಿತು. ಈಗ 67 ವರ್ಷದ ಬಳಿಕ ಮರಳಿ ಸಾಹಿತ್ಯ ಸಮ್ಮೇಳನದ ಆತಿಥ್ಯ ದೊರೆತಿದೆ. 2025 ರ ಡಿಸೆಂಬರ್ ಮಾಹೆಯಲ್ಲಿ ಆಖಿಲ ಭಾರತ 88ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಅವರು ತಿಳಿಸಿದರು.

ಇಂದಿನ ಪೀಳಿಗೆಗೆ ಮತ್ತು ಯುವಸಮುದಾಯಕ್ಕೆ ಕನ್ನಡ ಸಾಹಿತ್ಯ ಬಗೆಗಿನ ಅರಿವು ಮೂಡಿಸುವ ಉದ್ದೇಶದಿಂದ ರಾಜ್ಯ ಸರ್ಕಾರ, ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತು, ಜಿಲ್ಲಾಡಳಿತ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಇವರುಗಳ ಸಂಯುಕ್ತಾಶ್ರಯದಲ್ಲಿ ಡಿಸೆಂಬರ್ ಮಾಹೆಯಲ್ಲಿ ಬಳ್ಳಾರಿಯಲ್ಲಿ ಅದ್ದೂರಿಯಾಗಿ ಆಯೋಜಿಸಲಾಗುತ್ತಿದೆ ಎಂದರು.

ಡಿಸೆAಬರ್ ತಿಂಗಳಲ್ಲಿ ವಾತಾವರಣ ಮತ್ತು ಹವಮಾನವು ಚೆನ್ನಾಗಿರುವುದರಿಂದ ಆಯೋಜನೆಗೆ ಯಾವುದೇ ರೀತಿಯಲ್ಲಿ ತೊಂದರೆಯಾಗುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಶಯದಂತೆ ಸಾಹಿತ್ಯ ಸಮ್ಮೇಳನದಲ್ಲಿ ವಿವಿಧ ವಿಶ್ವ-ವಿದ್ಯಾಲಯಗಳ ವಿದ್ಯಾರ್ಥಿಗಳು, ಶಾಲಾ-ಕಾಲೇಜು, ವಸತಿ ನಿಲಯಗಳ ಮಕ್ಕಳು ಸೇರಿದಂತೆ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ಹೇಳಿದರು.

ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಭೇಟಿ ನೀಡುತ್ತಿರುವ ಪರಿಷತ್ತಿನ ಪದಾಧಿಕಾರಿಗಳು, ವಿದ್ಯಾರ್ಥಿಗಳಿಗೆ ಸಮ್ಮೇಳನ ಕುರಿತು ಮನವರಿಕೆ ಮಾಡಿಕೊಡುವ ಮೂಲಕ ಸಮ್ಮೇಳನದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.

ಬಳ್ಳಾರಿಯಲ್ಲಿ ಡಿಸೆಂಬರ್ ತಿಂಗಳಲ್ಲಿ ಆಯೋಜಿಸಲಾಗುತ್ತಿರುವ ಅಖಿಲ ಭಾರತ 88ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬಳ್ಳಾರಿ ಜಿಲ್ಲೆಯ ಮೊದಲ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಸರ್ ಥಾಮಸ್ ಮುನ್ರೋ ಅವರ ಕುಟುಂಬಸ್ಥರನ್ನು ವಿಶೇಷ ಆಹ್ವಾನಿತರನ್ನಾಗಿ ಆಹ್ವಾನಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ನಾಡೋಜ ಡಾ.ಮಹೇಶ್ ಜೋಶಿ ಅವರು ತಿಳಿಸಿದರು.

ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮಾತನಾಡಿ, ಜಿಲ್ಲೆಯಲ್ಲಿ ಆಯೋಜಿಸಲಾಗುತ್ತಿರುವ ಅಖಿಲ ಭಾರತ 88ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅದ್ದೂರಿಯಾಗಿ ಮತ್ತು ಅಚ್ಚು-ಕಟ್ಟಾಗಿ ಆಯೋಜಿಸುವ ಕುರಿತು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ ಶೋಭಾರಾಣಿ, ಕನ್ನಡ ಸಾಹಿತ್ಯ ಪರಿಷತ್ತಿನ ಕೋಶಾಧ್ಯಕ್ಷ ಪಟೇಲ್ ಪಾಂಡು, ಜಿಲ್ಲಾಧ್ಯಕ್ಷ ಡಾ.ನಿಷ್ಠಿ ರುದ್ರಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?