Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ತರಾತುರಿಯಲ್ಲಿ ಜರುಗಿದ ಗಣರಾಜ್ಯೋತ್ಸವ ಅಚರಣೆ

ಕೊಟ್ಟೂರು; ಗಣರಾಜ್ಯೋತ್ಸವವನ್ನು ರಾಷ್ಟ್ರೀಯ ಹಬ್ಬವನ್ನಾಗಿ ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ರಾಜ್ಯೋತ್ಸವದಂದು ಎಲ್ಲಾ ಶಾಲಾ ಮಕ್ಕಳ ನೃತ್ಯ ಹಾಗು ಹಾಡಿನ ಮುಖಾಂತರ ಸಾರ್ವಜನಿಕರಿಗೆ ಮನರಂಜನೆಯನ್ನು ಕೊಡುವ ಹಬ್ಬವಾಗಿದೆ.ಪಟ್ಟಣದ ತಾಲೂಕಿನ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ 75 ನೇ ಗಣರಾಜ್ಯೋತ್ಸವ ಕಾಯ೯ಕ್ರಮ ಹಮ್ಮಿಕೊಳ್ಳಲಾಗಿತ್ತು.ಈ ಕಾಯ೯ಕ್ರಮದಲ್ಲಿ ಪಿಎಸ್ಐ ಗೀತಾಂಜಲಿ ಶಿಂಧೆ ಹಾಗೂ ಇಲಾಖೆಯ ಸಿಬ್ಬಂದಿಗಳು ಮತ್ತು ತಾಲೂಕಿನ ಎಲ್ಲಾ ವಿಧ್ಯಾಥಿ೯ಗಳು ಪಥಸಂಚಲನ ನಡೆಸಿದರು.

ಈ ರಾಷ್ಟ್ರೀಯ ಹಬ್ಬದಂದು, ಕಾಯ೯ಕ್ರಮದ ಕೇಂದ್ರ ಬಿಂದು ತಾಲೂಕು ದಂಡಾಧಿಕಾರಿಗಳಾದ ಅಮರೇಶ ಜಿ ಕೆ ರವರು ಆಗಿರುತ್ತಾರೆ. ಈ ಹಬ್ಬದಂದು ರಾಷ್ಟ್ರಗೀತೆ ನಾಡಗೀತೆ ಹಾಗೂ ರೈತ ಗೀತೆಯನ್ನು ಹಾಡುವ ಸಂಪ್ರದಾಯವಿದೆ. ರಾಷ್ಟ್ರಗೀತೆ ಹಾಗೂ ನಾಡಗೀತೆಯನ್ನು ಹಾಡಿ ಶಾಸಕರಾದ ಕೆ ನೇಮಿರಾಜ್ ನಾಯ್ಕ್ ರವರು ವಿಧಾನಸಭಾ ಕ್ಷೇತ್ರ ಹಗರಿಬೊಮ್ಮನಹಳ್ಳಿಯಲ್ಲಿ, ಇವರು ಮತ್ತೊಂದು ತಾಲೂಕಿನ ಕಾರ್ಯಕ್ರಮಕ್ಕೆ ಹೋಗುವ ಸಲುವಾಗಿ ರೈತ ಗೀತೆಯನ್ನು ಹಾಡಲಿಕ್ಕೆ ಹೇಳಿದರು, ತದನಂತರ ಅದನ್ನು ನಿಲ್ಲಿಸಿ, ರೈತ ಸಂಕುಲಕ್ಕೆ ಅವಮಾನ ಮಾಡಿದಂತೆ ಆಗಿದೆ ಎಂದು ಅಲ್ಲಿನ ರೈತ ಸಂಘಟನೆಯ ಮುಖಂಡರುಗಳು ಬೇಸರ ವ್ಯಕ್ತಪಡಿಸಿದ್ದಾರೆ.

ರಾಷ್ಟ್ರೀಯ ಹಬ್ಬಗಳ ತಾಲೂಕು ಅಧ್ಯಕ್ಷರು ತಾಲೂಕಿನ ದಂಡಾಧಿಕಾರಿಯೇ ಆಗಿರುತ್ತಾರೆ ಇದಕ್ಕೆ ಈ ಕಾರ್ಯಕ್ರಮದ ಕೇಂದ್ರ ಬಿಂದುವಾದ ತಹಶೀಲ್ದಾರ್ ರವರನ್ನು ಮಾಧ್ಯಮ ಮಿತ್ರರರು ನಿರ್ಲಕ್ಷ ತೋರಿಸಿದ ಅಧಿಕಾರಿಗಳಿಗೆ ಯಾವ ರೀತಿ ಕ್ರಮ ಜರುಗಿಸುವಿರಿ? ಹಾಗೂ ಕಾರ್ಯಕ್ರಮದ ಸಂಘಟನಕಾರರಿಗೆ ಅಹ್ವಾನ ಪತ್ರಿಕೆ ನೀಡಿಲ್ಲ.ಈ ಕಾರ್ಯಕ್ರಮ ಗೊಂದಲಕ್ಕೆ ಈಡಾಗಿದೆ ಎಂದಲ್ಲ ವಿಚಾರಣೆ ನಡೆಸಿದಾಗ, ಹೌದು ಸ್ವಲ್ಪ ನೂನ್ಯತೆಗಳ ಆಗಿವೆ, ಇನ್ನು ಮುಂದೆ ಸರಿಪಡಿಸಿಕೊಂಡು ಹೋಗುತ್ತೇವೆ ಎಂದು ತಿಳಿಸಿದ್ದಾರೆ. ಇದೇ ರೀತಿ ಮುಂದುವರೆದರೆ ಅಧಿಕಾರಿಗಳ ವಿರುದ್ಧ ಮುಂದೆ ಇದಕ್ಕೆ ತಕ್ಕ ಉತ್ತರ ನೀಡಬೇಕಾಗುತ್ತದೆ ಎಂದು ಗುಡಿಯಾರ್ ಮಲ್ಲಿಕಾರ್ಜುನ್ ಸಿಪಿಐಎಂಎಲ್ ಲಿಬರೇಶನ್ ಪಕ್ಷದ ತಾಲೂಕು ಕಾರ್ಯದರ್ಶಿಗಳು ಎಚ್ಚರಿಸಿರುವರಂತೆ.

ಈ ಹಾಡನ್ನು ಹಾಡದಿರುವುದಕ್ಕೆ ಸಾರ್ವಜನಿಕರು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಇದರ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತರುತ್ತೇವೆ ಎಂದು ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ KS ಜಯಪ್ರಕಾಶ ನಾಯ್ಕ , ತಾಲ್ಲೂಕು ಅಧ್ಯಕ್ಷರಾದ ಮಂಜುನಾಥ, ಜಿಲ್ಲಾ ಮುಖಂಡರಾದ ಕೊಟ್ರಯ್ಯ, ನೀಲನ
ಕಂಠನ ಗೌಡ್ರು, ರಮೇಶ್ ನಾಯ್ಕ, ಸುರೇಶ್ ನಾಯ್ಕ ಮತ್ತು ಕೊಟ್ಟೂರು ತಾಲೂಕು ಎಸ್ ಡಿ ಎಂ ಸಿ ಅದ್ಯಕ್ಷರು ಕೆ.ಎಸ್ ಹರೀಶ್,. ಕರ್ನಾಟಕ ಮಾನವ ಹಕ್ಕುಗಳ ಜನ ಸೇವಾ ಸಂಸ್ಥೆ ತಾಲೂಕು ಅದ್ಯಕ್ಷರು ಬಿ.ಸತೀಶ್ ಮತ್ತು ತಾಲೂಕಿನ ಇನ್ನಿತರ ವಿವಿಧ ಸಂಘಟನೆಯ ಪಧಾದಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ವೆಂಕಟಸ್ವಾಮಿ ಸಿಪಿಐ,ಎ ನಸುರುಲ್ಲಾ ಪಟ್ಟಣ ಪಂಚಾಯತಿಯ ಮುಖ್ಯ ಅಧಿಕಾರಿಗಳು ಹಾಗೂ ಸದಸ್ಯರು ಶಶಿಧರ್ ಮೈದೂರ್ ಮತ್ತು ಅಜ್ಜಪ್ಪ ಎಲ್ಲಾ ಇಸಿಓ ಸಿಆರ್‌ಪಿ ಹಾಗೂ ಎಲ್ಲಾ ಶಾಲೆಯ ಶಿಕ್ಷಕರು ಮಕ್ಕಳು ಸಾರ್ವಜನಿಕರು ಸೇರಿದ್ದರು.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?