Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ವಿದ್ಯಾರ್ಥಿ ಬಸ್ ಪಾಸ್; ಆನ್‍ಲೈನ್ ಮೂಲಕ ಅರ್ಜಿ ಆಹ್ವಾನ

ಬಳ್ಳಾರಿ,ಜೂ.01 : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ ವತಿಯಿಂದ 2024-25ನೇ ಸಾಲಿನ ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್‍ಬಾನ್ ಅವರು ತಿಳಿಸಿದ್ದಾರೆ.
ವಿದ್ಯಾರ್ಥಿ ಬಸ್ ಪಾಸ್ ವಿತರಣೆಯನ್ನು ಸಂಪೂರ್ಣವಾಗಿ ಗಣಕೀಕೃತಗೊಳಿಸಲು ಸರ್ಕಾರದ ನಿರ್ದೇಶನವಿದ್ದು, ಕಳೆದ ಸಾಲಿನಂತೆ ಪ್ರಸಕ್ತ ಸಾಲಿನಲ್ಲಿಯೂ ಸಹ ಸಂಪೂರ್ಣ ಗಣಕೀಕೃತವಾಗಿ ವಿದ್ಯಾರ್ಥಿ ಪಾಸ್‍ಗಳನ್ನು ವಿತರಣೆ ಮಾಡಲಾಗುವುದು. ಈ ಸಂಬಂಧ ಶಾಲಾ-ಕಾಲೇಜು ವಿದ್ಯಾರ್ಥಿಗಳು ಪಾಸ್‍ಗಳನ್ನು ಆನ್‍ಲೈನ್ ಮೂಲಕ ಸೇವಾಸಿಂಧು ಪೋರ್ಟಲ್ (URL-sevasindhu.karnataka.gov.in) ಮೂಲಕ ಅರ್ಜಿ ಸಲ್ಲಿಸಿ, ಕರ್ನಾಟಕ-ಒನ್ [K-one] ಕೇಂದ್ರಗಳ ಮುಖಾಂತರ ಪಾಸ್ ಪಡೆಯಲು ಅವಕಾಶ ನೀಡಲಾಗಿದೆ.
ಬಳ್ಳಾರಿ ವಿಭಾಗದ ವ್ಯಾಪ್ತಿಯ ಬಳ್ಳಾರಿ ನಗರದಲ್ಲಿ 02 ಕೇಂದ್ರಗಳು ಮತ್ತು ಸಿರುಗುಪ್ಪ, ಕುರುಗೋಡು, ಕಂಪ್ಲಿ, ಸಂಡೂರು ಭಾಗದ ಕರ್ನಾಟಕ-ಒನ್ ಕೇಂದ್ರಗಳಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಬಸ್ ಪಾಸ್ ವಿತರಣೆ ಮಾಡಲು ಗುರುತಿಸಿಲಾಗಿದೆ.
*ಕರ್ನಾಟಕ-1 ಕೇಂದ್ರಗಳ ವಿವರ:*
ಬಳ್ಳಾರಿ ನಗರದ ಹಳೇ ತಾಲ್ಲೂಕು ಕಚೇರಿ ಕಾಂಪೌಂಡ್ ಆವರಣದ ಭೂಮಿ ಕೇಂದ್ರದ ಕರ್ನಾಟಕ-ಒನ್ ಕೇಂದ್ರ ಹಾಗೂ ದುರ್ಗಮ್ಮ ಗುಡಿ ಹತ್ತಿರದ ಹಳೇ ಕಪ್ಪಗಲ್ ರಸ್ತೆಯ ಬಂಗಾರ ಸಿದ್ದಪ್ಪ ಕಾಂಪ್ಲೆಕ್ಸ್‍ನ ಕರ್ನಾಟಕ-ಒನ್ ಕೇಂದ್ರ, ಸಿರುಗುಪ್ಪ ಪಟ್ಟಣದ ಪಾರ್ವತಿ ನಗರದ ಕರ್ನಾಟಕ-ಒನ್ ಕೇಂದ್ರ, ಕುರುಗೋಡಿನ ಗಟ್ಟಿ ಕಾಂಪ್ಲೆಕ್ಸ್‍ನ ಕರ್ನಾಟಕ-ಒನ್ ಕೇಂದ್ರ, ಕಂಪ್ಲಿಯ ಚಂದ್ರಕಲಾ ಟಾಕೀಸ್ ಹತ್ತಿರದ ಕರ್ನಾಟಕ-ಒನ್ ಕೇಂದ್ರ ಮತ್ತು ಸಂಡೂರಿನ ಪುರಸಭೆ ಬಸ್ ನಿಲ್ದಾಣ ಎದುರುಗಡೆಯ ಶ್ರೀನಿವಾಸ ಕಾಂಪ್ಲೆಕ್ಸ್‍ನ ಕರ್ನಾಟಕ-ಒನ್ ಕೇಂದ್ರ.
ಈ ಮೇಲಿನ ಕೇಂದ್ರಗಳಲ್ಲಿ ಕರ್ನಾಟಕ-ಒನ್ [K-one] ಕೇಂದ್ರಗಳಲ್ಲಿ ಜೂನ್ 03 ರಿಂದ ವಿದ್ಯಾರ್ಥಿ ಬಸ್ ಪಾಸ್ ಪಡೆಯಬಹುದಾಗಿದೆ.
*ಅರ್ಜಿ ಸಲ್ಲಿಸುವ ವಿಧಾನ:*
ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆನ್‍ಲೈನ್ ಸೇವಾಸಿಂಧು ಪೋರ್ಟಲ್ ಐಡಿ (URL-sevasindhu.karnataka.gov.in) ಆಗಿದ್ದು, ಆನ್‍ಲೈನ್ ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಇರುವುದಿಲ್ಲ.
ವಿದ್ಯಾರ್ಥಿಗಳು ಕರ್ನಾಟಕ-ಒನ್, ಗ್ರಾಮ-ಒನ್ ಮತ್ತು ಬೆಂಗಳೂರು-ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಗಳ ಮೂಲಕವು ಅರ್ಜಿ ಸಲ್ಲಿಸಬಹುದಾಗಿದೆ. ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸರ್ಕಾರದ ಆದೇಶದಂತೆ ರೂ.30/- ಸೇವಾ ಶುಲ್ಕವನ್ನು ಕೇಂದ್ರಗಳ ಸಿಬ್ಬಂದಿಗಳು ಪಡೆಯಲು ಅವಕಾಶವಿದೆ. ಸ್ಯಾಟ್ಸ್, ಯುಯುಸಿಎಂಎಸ್, ಪಿಯುಇ (SATS/ UUCMS / PUE) ಸಂಖ್ಯೆಯನ್ನು ಹೊಂದಿರದ ವಿದ್ಯಾರ್ಥಿಗಳು ವಾಸಸ್ಥಳ ವಿಳಾಸ ಹಾಗೂ ಇತರೆ ಮಾಹಿತಿ ಬಗ್ಗೆ ವಿದ್ಯಾ ಸಂಸ್ಥೆಯ ಮುಖ್ಯಸ್ಥರಿಂದ ಧೃಡೀಕರಣ ಪತ್ರ ಪಡೆದು ಕಡ್ಡಾಯವಾಗಿ ಸಲ್ಲಿಸಬೇಕು. ವಿದ್ಯಾರ್ಥಿ ಬಸ್ ಪಾಸ್ ವಿತರಿಸಲು ಗರಿಷ್ಠ ಪ್ರಯಾಣ ಮಿತಿ 60 ಕಿ.ಮೀ ಆಗಿರುತ್ತದೆ.
*ವಿದ್ಯಾರ್ಥಿ ರಿಯಾಯಿತಿ ಬಸ್ ಪಾಸ್ ದರಗಳ ವಿವರ:*
ಪ್ರಾಥಮಿಕ ಶಾಲೆ (10 ತಿಂಗಳು): ಸಾಮಾನ್ಯ ವಿದ್ಯಾರ್ಥಿಗಳಿಗೆ ರೂ.150, ಎಸ್‍ಸಿ ಮತ್ತು ಎಸ್‍ಟಿ ವಿದ್ಯಾರ್ಥಿಗಳಿಗೆ ರೂ.150.
ಪ್ರೌಢ ಶಾಲೆ ಬಾಲಕರು (10 ತಿಂಗಳು): ಸಾಮಾನ್ಯ ವಿದ್ಯಾರ್ಥಿಗಳಿಗೆ ರೂ.750, ಎಸ್‍ಸಿ ಮತ್ತು ಎಸ್‍ಟಿ ವಿದ್ಯಾರ್ಥಿಗಳಿಗೆ ರೂ.150.
ಕಾಲೇಜು ಮತ್ತು ಡಿಪ್ಲೋಮಾ (10 ತಿಂಗಳು): ಸಾಮಾನ್ಯ ವಿದ್ಯಾರ್ಥಿಗಳಿಗೆ ರೂ.1,050, ಎಸ್‍ಸಿ ಮತ್ತು ಎಸ್‍ಟಿ ವಿದ್ಯಾರ್ಥಿಗಳಿಗೆ ರೂ.150.
ಐಟಿಐ (12 ತಿಂಗಳು): ಸಾಮಾನ್ಯ ವಿದ್ಯಾರ್ಥಿಗಳಿಗೆ ರೂ.1,310, ಎಸ್‍ಸಿ ಮತ್ತು ಎಸ್‍ಟಿ ವಿದ್ಯಾರ್ಥಿಗಳಿಗೆ ರೂ.160.
ವೃತ್ತಿಪರ ಕೋರ್ಸ್‍ಗಳು (10 ತಿಂಗಳು): ಸಾಮಾನ್ಯ ವಿದ್ಯಾರ್ಥಿಗಳಿಗೆ ರೂ.1,550, ಎಸ್‍ಸಿ ಮತ್ತು ಎಸ್‍ಟಿ ವಿದ್ಯಾರ್ಥಿಗಳಿಗೆ ರೂ.150.
ಸಂಜೆ ಕಾಲೇಜು ಮತ್ತು ಪಿ.ಹೆಚ್.ಡಿ(10 ತಿಂಗಳು): ಸಾಮಾನ್ಯ ವಿದ್ಯಾರ್ಥಿಗಳಿಗೆ ರೂ.1,350, ಎಸ್‍ಸಿ ಮತ್ತು ಎಸ್‍ಟಿ ವಿದ್ಯಾರ್ಥಿಗಳಿಗೆ ರೂ.150.
ಈ ಮೇಲಿನ ದರದಂತೆ ವಿದ್ಯಾರ್ಥಿಯು ಕೆ-ಒನ್ ಪಾಸ್ ಕೌಂಟರ್‍ಗಳಲ್ಲಿ ಪಾವತಿಸಿ ವಿದ್ಯಾರ್ಥಿ ಬಸ್ ಪಾಸ್‍ಗಳನ್ನು ಪಡೆಯಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?