Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಉತ್ಸವಗಳಿಂದ ಜನರ ಉತ್ಸಾಹ ಹೆಚ್ಚುತ್ತದೆ: ಡಾ. ಹನುಮಂತಪ್ಪ ಅಂಡಗಿ

ಸುವರ್ಣವಾಹಿನಿ ಸುದ್ದಿ
ಕೊಪ್ಪಳ,ಜ,೧೮: ಉತ್ಸವಗಳಿಗೆ ಮನಸ್ಸನ್ನು ಅರಳಿಸುವ ಶಕ್ತಿ ಇದೆ. ದೈನಂದಿನ ಬದುಕಿನ ಜಂಜಾಟಗಳನ್ನು ಮರೆಸಿ ಸಂಬAಧ, ಬಾಂಧವ್ಯಗಳು ವೃದ್ಧಿಯಾಗುವುದರ ಮೂಲಕ ಉತ್ಸವಗಳಿಂದ ಜನರ ಉತ್ಸಾಹ ಹೆಚ್ಚುತ್ತದೆ. ಉತ್ಸವಗಳಿಂದ ನಮ್ಮ ಸಂಸ್ಕೃತಿಯ ಹಿರಿಮೆಯನ್ನು, ಪರಂಪರೆಯ ಶ್ರೇಷ್ಠತೆಯನ್ನು ಇಂದಿನ ಪೀಳಿಗೆಗೆ ತಿಳಿಸಿಕೊಡುವ ಸಾರ್ಥಕ ಕೆಲಸವಾಗುತ್ತದೆ. ಉತ್ಸವಗಳಿಂದ ಯುವ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಕಲ್ಪಿಸಿಕೊಡಲು ಸಾಧ್ಯವಾಗುತ್ತದೆ. ಸಾಹಸಿ ಸಂಘಟಕರಾದ ಮಹೇಶ ಬಾಬು ಸುರ್ವೆ ಅವರು ಕಳೆದ ೨೦ ವರ್ಷಗಳಿಂದಲೂ ಸಹ ಈ ಉತ್ಸವವನ್ನು ಆಚರಿಸಿಕೊಂಡು ಬಂದಿರುವ ಅವರ ಸಾಹಸವನ್ನು ಮೆಚ್ಚಲೇಬೇಕು ಎಂದು ಕೊಪ್ಪಳ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ.ಹನುಮಂತಪ್ಪ ಅಂಡಗಿ ಚಿಲವಾಡಗಿ ಹೇಳಿದರು.

ಅವರು ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಇಟಗಿಯ ಮಹಾದೇವ ದೇವಾಲಯದ ಆವರಣದಲ್ಲಿ ಇಟಗಿ ಉತ್ಸವದ ಸಾಂಸ್ಕೃತಿಕ ಸಮಿತಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ೨೦ನೇ ಬಾರಿಗೆ ಹಮ್ಮಿಕೊಂಡ ಇಟಗಿ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಇಟಗಿ ಉತ್ಸವ ಸಮಿತಿಯ ಗೌರವಾಧ್ಯಕ್ಷರಾದ ಎಂ.ಬಿ. ಅಳವಂಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮೂರನೇ ಯುವ ಸಾಂಸ್ಕೃತಿಕ ಸಮ್ಮೇಳನದ ಅಧ್ಯಕ್ಷರಾದ ಕುದಾನ್ ಮುಲ್ಲಾ, ಉತ್ಸವದ ಸಂಚಾಲಕರಾದ ಮಹೇಶಬಾಬು ಸುರ್ವೆ, ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷರಾದ ಅಂದಪ್ಪ ಹುರುಳಿ, ತಾಲೂಕ ಅಧ್ಯಕ್ಷರಾದ ಮಂಜುನಾಥ ಛಬ್ಬಿ, ಗೌರವ ಅಧ್ಯಕ್ಷರಾದ ಮಲ್ಲಿಕಾರ್ಜುನ ಹುಳುಗಣ್ಣವರ ರೈತ ಮುಖಂಡರಾದ ಬಸನಗೌಡ ಪಾಟೀಲ, ವಜೀರಸಾಬ ತಳಕಲ, ಇಟಗಿ ಗ್ರಾಮ ಘಟಕದ ಅಧ್ಯಕ್ಷರಾದ ಬಸಪ್ಪ ಮಂಡಲಗಿರಿ, ರೈತ ಮುಖಂಡರಾದ ಬಸಪ್ಪ ಹೊಂಬಳ, ಹುಚ್ಚಪ್ಪ ಸಣ್ಣ ನಿಂಗಣ್ಣವರ, ವೀರಯ್ಯ ಕಳ್ಳಿಮಠ, ಪೀರಪ್ಪ ಲಮಾಣಿ, ಹನುಮಪ್ಪ ಸಣ್ಣ ನಿಂಗಣ್ಣವರ, ಲಕ್ಕಪ್ಪ ಗುಳಗಣ್ಣವರ, ಮಹದೇವಪ್ಪ ಕೌದಿ, ಈರಪ್ಪ ಗುಳಗಣ್ಣನವರ, ಹನುಮಂತ ಸುಣಗಾರ, ಕಂಡೆಪ್ಪ ಲಮಾಣಿ, ಬಸವರಾಜ ಪೂಜಾರ, ಮಹದೇವಪ್ಪ ಗೊಂಡಬಾಳ, ಭರಮಪ್ಪ ಹಿರೇನಿಂಗಣ್ಣವರ, ಶರಣಯ್ಯ ಕೋಮಾರ, ಶರಣಪ್ಪ ಹೊಂಬಳ, ಶಿವಪ್ಪ ಗುಳಗಣ್ಣವರ, ಬಸವರಾಜ ಚೌಡಿ, ನಿಂಗಪ್ಪ ಕರೆ ಬಾಲಪ್ಪನವರ, ಚಂದ್ರಪ್ಪ ಹಡಪದ, ಅನೀಲ ಹುಜರತ್ತಿ, ಲಕ್ಷ್ಮಪ್ಪ ಕೋರಿ, ಗದಿಗೆಪ್ಪ ಕೋರಿ, ವೀರನಗೌಡ ಸಾದರ, ಚೆನ್ನಪ್ಪ ಮಂಡಲಗೇರಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?