Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಶಿಕ್ಷಣ ಮತ್ತು ಗುರಿಯಿಂದ ಆರ್ಥಿಕ ಅಭಿವೃದ್ಧಿ ಸಾಧಿಸಲು ಸಾಧ್ಯ

ಸುವರ್ಣವಾಹಿನಿ ಸುದ್ದಿ
ಕಾರಟಗಿ,ಜ,೧೭: ಪಟ್ಟಣದ ಪ್ರತಿಷ್ಠಿತ ವಿದ್ಯಾ ಸಂಸ್ಥೆಗಳಲ್ಲಿ ಒಂದಾದ ಶ್ರೀ ಶಾರದಾ ಇಂಟರ್ನ್ಯಾಷನಲ್ ಶಾಲೆಯ ಮಕ್ಕಳಿಗೆ ಸಮಾಜದಲ್ಲಿ ಪ್ರಮುಖ ಪಾತ್ರ ವಹಿಸಿದ ವ್ಯಕ್ತಿಗಳೊಂದಿಗೆ ಸಂವಾದ ಹಾಗೂ ಶಿಕ್ಷಣದ ಮಹತ್ವ ಕುರಿತು ಪ್ರತ್ಯಕ್ಷ ಮನವರಿಕೆಯನ್ನು ವಿದ್ಯಾ ಸಂಸ್ಥೆಯಿAದ ಮಾಡಲಾಯಿತು.
ಕೂಲಿ ಕಾರ್ಮಿಕರ ಜೀವನ ಶೈಲಿ ಹಾಗೂ ಶಿಕ್ಷಣ ಪಡೆದು ಉನ್ನತ ಹುದ್ದೆಯಲ್ಲಿರುವ ಜೀವನ ಶೈಲಿಯ ಕುರಿತು ವಿದ್ಯಾರ್ಥಿಗಳಿಗೆ ಶಿಕ್ಷಣದ ಮಹತ್ವ ತಿಳಿಸಲು ನೇರವಾಗಿ ಪ್ರಮುಖರ ಮನೆಗಳಿಗೆ ತೆರಳಿ ವಿಶೇಷ ಸಂವಾದ ನಡೆಸುವ ಮೂಲಕ ವಿಶಿಷ್ಟ ಕಾರ್ಯಕ್ರಮವನ್ನು ವಿದ್ಯಾ ಸಂಸ್ಥೆ ಹಮ್ಮಿಕೊಂಡಿತ್ತು. ದಿನಗೂಲಿ ಕಾರ್ಮಿಕರ ಮನೆಗೆ ಭೇಟಿ : ಶಾಲಾ ವಿದ್ಯಾರ್ಥಿಗಳು ದಿನಗೂಲಿ ಕಾರ್ಮಿಕರ ಮನೆಗೆ ಭೇಟಿ ನೀಡಿ ಅವರೊಂದಿಗೆ ಸಂವಾದ ನಡೆಸಿದರು. ಸಣ್ಣ ಗುಡಿಸಲಿನಲ್ಲಿ ನಿಮ್ಮ ಜೀವನ ಸಾಗುತ್ತಿದೆ ಇದಕ್ಕೆ ಪ್ರಮುಖ ಕಾರಣ ಹಾಗೂ ಶಿಕ್ಷಣದ ಮಹತ್ವದ ಕುರಿತು ಚರ್ಚೆ ಪ್ರಾರಂಭವಾಯಿತು. ಮಕ್ಕಳಿಗೆ ಪ್ರತ್ಯುತ್ತರ ಎನ್ನುವ ರೀತಿಯಲ್ಲಿ ದಿನಗೂಲಿ ಕಾರ್ಮಿಕರು ಉತ್ತರಿಸಿದರು. ಬಡತನ ಮತ್ತು ಶಿಕ್ಷಣದಿಂದ ವಂಚಿತರಾಗಿದ್ದ ಕಾರಣಕ್ಕೆ ನಾವು ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತೇವೆ. ಉತ್ತಮ ಶಿಕ್ಷಣವನ್ನು ಹೊಂದಿದ್ದರೆ ಉತ್ತಮ ಉದ್ಯೋಗವನ್ನು ಹೊಂದುತ್ತಿದ್ದೆವು. ಕುಟುಂಬದವರ ಜೊತೆಗೆ ಆರ್ಥಿಕವಾಗಿ ಸದೃಢರಾಗುತ್ತಿದ್ದೆವು ಆದರೆ ಶಿಕ್ಷಣವನ್ನು ಪಡೆಯದ ಕಾರಣ ಆರ್ಥಿಕ ಸಮಸ್ಯೆಯನ್ನು ಎದುರಿಸುತಿದ್ದೇವೆ ಎಂದರು.
ಇAಜಿನಿಯರ್ ಮನೆಗೆ ಶಾಲಾ ಮಕ್ಕಳ ಭೇಟಿ : ಇತ್ತೀಚಿನ ದಿನಮಾನದಲ್ಲಿ ಉತ್ತಮ ಶಿಕ್ಷಣದಿಂದ ಉದ್ಯೋಗ ಲಭಿಸಿ ಆರ್ಥಿಕವಾಗಿ ಸದೃಢರಾಗಬಹುದು ಎನ್ನುವುದಕ್ಕೆ ಉತ್ತಮ ಉದಾಹರಣೆಯಾಗಿ ವಿದ್ಯಾರ್ಥಿಗಳನ್ನು, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ವಿಶ್ವನಾಥ್ ಅವರ ಮನೆಗೆ ಕರೆದುಕೊಂಡು ಹೋಗಿ ಅವರೊಂದಿಗೆ ಮನಬಿಚ್ಚಿ ಮಾತನಾಡಲಾಯಿತು. ನಂತರ ಮಕ್ಕಳೊಂದಿಗೆ ಸಂವಾದ ನಡೆಸಿ ಮಾತನಾಡಿದ ಇಂಜಿನಿಯರ್ ಎಲ್ಲದಕ್ಕೂ ಶಿಕ್ಷಣ ಮುಖ್ಯವಾಗಿದೆ. ಶಿಕ್ಷಣವನ್ನು ಪಡೆಯುತ್ತಾ ಉತ್ತಮ ಗುರಿಯನ್ನು ಇಟ್ಟುಕೊಂಡಿರಬೇಕು. ಶಿಕ್ಷಣದೊಂದಿಗೆ ಗುರಿ ಮುಟ್ಟಲು ಶ್ರಮಿಸಬೇಕು. ಉತ್ತಮ ಉದ್ಯೋಗ ದೊರೆತರೆ ದೊಡ್ಡ ಮನೆ, ಶ್ರೀಮಂತಿಕೆ, ಆರ್ಥಿಕ ಅಭಿವೃದ್ಧಿ ಹೊಂದಲು ಸಾಧ್ಯ. ಪ್ರತಿಯೊಬ್ಬ ವಿದ್ಯಾರ್ಥಿಯು ಉತ್ತಮ ಜೀವನ ಸಾಧಿಸಲು ಶಿಕ್ಷಣ ಮತ್ತು ಗುರಿ ಪ್ರಮುಖವಾದವು ಎಂದು ತಿಳಿಸಿದರು.

ಪುರಸಭೆ ಅಧಿಕಾರಿ, ವೈದ್ಯರು, ಶಿಕ್ಷಕರ ಭೇಟಿ ಮಾಡಿದ ವಿದ್ಯಾರ್ಥಿಗಳು : ನಂತರ ವಿದ್ಯಾರ್ಥಿಗಳು ಪುರಸಭೆಯ ಮುಖ್ಯ ಅಧಿಕಾರಿಯದ ಸುರೇಶ್ ಶೆಟ್ಟರ್, ಸುರಕ್ಷಾ ಆಸ್ಪತ್ರೆಯ ವೈದ್ಯರು, ಮೈಲಾಪುರ ಸರ್ಕಾರಿ ಶಾಲೆಯ ಶಿಕ್ಷಕರನ್ನು ಭೇಟಿ ಮಾಡಿ ಶಿಕ್ಷಣ ಮತ್ತು ಉದ್ಯೋಗದ ಕುರಿತು ಚರ್ಚಿಸಿದರು.
ಸರಕಾರಿ ಮತ್ತು ಗೌರವ ಹುದ್ದೆಗಳು ದೊರೆಯುವುದು ಸುಲಭವಲ್ಲ, ಅಧಿಕ ಪರಿಶ್ರಮ ಮತ್ತು ಗುರಿ ಬಹಳ ಪ್ರಮುಖವಾದವು, ಬಡತನದಲ್ಲೂ ಶ್ರಮಪಟ್ಟು ಓದಿದ ನಂತರವೇ ಉದ್ಯೋಗ ಬಂದಿದೆ. ವಿದ್ಯಾರ್ಥಿ ಜೀವನದಲ್ಲಿ ಅಧಿಕ ಪರಿಶ್ರಮ ಪಟ್ಟರೆ, ಮುಂದಿನ ದಿನಮಾನದಲ್ಲಿ ಉತ್ತಮ ಜೀವನ ಸಾಗಿಸಲು ಸಾಧ್ಯ. ಬಡತನದಿಂದ ಮುಕ್ತವಾಗಲು ಹಾಗೂ ಉತ್ತಮ ಹುದ್ದೆಯನ್ನು ಏರಲು ಶಿಕ್ಷಣ ಪ್ರಮುಖ ಪಾತ್ರವನ್ನು ವಹಿಸುತ್ತದೆ. ವಿದ್ಯೆ ಇಲ್ಲದವನ ಬಾಳು ಹದ್ದಿಗಿಂತಲೂ ಕೀಳು ಎನ್ನುವ ನಾನುಡಿಯಂತೆ ಪ್ರತಿಯೊಬ್ಬರೂ ಶಿಕ್ಷಣವಂತರಾಗಬೇಕು. ಸಾಮಾಜಿಕವಾಗಿ ರಾಜಕೀಯವಾಗಿ ಉನ್ನತ ಹುದ್ದೆಯನ್ನೇರಲು ಡಾಕ್ಟರ್ ಮತ್ತು ಇಂಜಿನಿಯರ್ ಶಿಕ್ಷಕರು ಇನ್ನಿತರ ಹುದ್ದೆಯನ್ನು ಪಡೆಯಲು ಉತ್ತಮ ಶಿಕ್ಷಣ ಗುರಿ ಅಗತ್ಯವಾಗಿದೆ ಎಂದು ಮನದಟ್ಟು ಮಾಡಿದರು. ನಂತರ ಅವರ ಮಾತಿಗೆ ಪ್ರತಿಕ್ರಿಯಿಸಿದ ವಿದ್ಯಾರ್ಥಿಗಳು ನಾನು ಉತ್ತಮ ಶಿಕ್ಷಣ ಪಡೆಯುವ ಮೂಲಕ ಉನ್ನತ ಹುದ್ದೆಯನ್ನು ಏರುತ್ತೇನೆ. ಶ್ರಮ ಮತ್ತು ಶ್ರದ್ಧೆಯಿಂದ ಶಿಕ್ಷಣ ಪಡೆದು ತಂದೆ ತಾಯಿ ಕಲಿತ ಶಾಲೆಗೆ ಗೌರವ ತರುವ ಮಗನಾಗುತ್ತೇನೆ ಎಂದು ಶಪಥ ಮಾಡಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ಶಾರದಾ ಮಲ್ಲಿಕಾರ್ಜುನ ಬೋಧಕ ಮತ್ತು ಬೋಧಕೇತರ ವರ್ಗ ಇದ್ದರು.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?