Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ವಿವಿಧೆಡೆ ಅಕ್ರಮ ಮದ್ಯ ವಶ : ಅಬಕಾರಿ ಉಪ ಆಯುಕ್ತ ಎನ್.ಮಂಜುನಾಥ

ಬಳ್ಳಾರಿ,ಏ.08 : ಲೋಕಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ನೀತಿ ಸಂಹಿತೆ ಜಾರಿ ಇರುವ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಲ್ಲಿ ವಿವಿಧೆಡೆ ಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯವನ್ನು ವಶಪಡಿಸಿಕೊಂಡು ಪ್ರಕರಣ  ದಾಖಲಿಸಕೊಳ್ಳಲಾಗಿದೆ ಎಂದು ಅಬಕಾರಿ ಉಪ ಆಯುಕ್ತ ಎನ್.ಮಂಜುನಾಥ ಅವರು ತಿಳಿಸಿದ್ದಾರೆ.
ಬಳ್ಳಾರಿ-ಸಿರುಗುಪ್ಪ ಮುಖ್ಯ ರಸ್ತೆಯಲ್ಲಿನ ತೆಕ್ಕಲಕೋಟೆ ಪಟ್ಟಣದ ಕ್ರಾಸ್ ಬಳಿ ದ್ವಿಚಕ್ರ ವಾಹನದ ಮೂಲಕ 25.920 ಲೀ. (ಅಂದಾಜು ಮೌಲ್ಯ ರೂ.51520) ಮದ್ಯವನ್ನು ಸಾಗಾಣೆ ಮಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡದು, ವಾಹನ ಜಪ್ತಿ ಮಾಡಲಾಗಿದೆ.
ಬಳ್ಳಾರಿ ತಾಲ್ಲೂಕಿನ ಶ್ರೀಧರಗಡ್ಡೆ ಗ್ರಾಮದಲ್ಲಿನ ಅನುಮಾಸ್ಪದ ಅಂಗಡಿಗೆ ದಾಳಿ ನಡೆಸಿ, ಅಕ್ರಮವಾಗಿ ಹೊಂದಿದ್ದ 17.280ಲೀ. (ಅಂದಾಜು ಮೌಲ್ಯ ರೂ. 7680) ಮದ್ಯವನ್ನು ಜಪ್ತಿ ಮಾಡಿ ಅಂಗಡಿ ಮಾಲೀಕನ್ನು ವಶಕ್ಕೆ ಪಡೆಯಲಾಗಿದೆ.
ಬಳ್ಳಾರಿ ನಗರದ ತಾಳೂರು ರಸ್ತೆಯ ಬಳಿ ದ್ವಿಚಕ್ರ ವಾಹನದಲ್ಲಿ ಸಾಗಿಸುತ್ತಿದ್ದ 8.640 ಲೀ (ಅಂದಾಜು ಮೌಲ್ಯ ರೂ.48840) ಮದ್ಯವನ್ನು ಜಪ್ತಿ ಮಾಡಿ ವಾಹನ ಸವಾರನನ್ನು ವಶಕ್ಕೆ ಪಡೆಯಲಾಗಿದೆ.
ಬಳ್ಳಾರಿ ನಗರದ ಸಿ.ಟಿ ಬಸ್ ನಿಲ್ದಾಣ ಮುಂಭಾಗದಲ್ಲಿ ಆಟೋದಲ್ಲಿ ಸಾಗಾಣೆ ಮಾಡುತ್ತಿದ್ದ 17.280 ಲೀಟರ್ ಮದ್ಯವನ್ನು (ಅಂದಾಜು ಮೌಲ್ಯ ರೂ. 157680) ಜಪ್ತಿ ಮಾಡಿ ಆಟೋ ಚಾಲಕನ್ನು ವಶಕ್ಕೆ ಪಡೆಯಲಾಗಿದೆ.
ಬಳ್ಳಾರಿ ತಾಲ್ಲೂಕಿನ ಗೋಡೆಹಾಳ್ ಗ್ರಾಮದಿಂದ ಚಾಗನೂರು ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ  ದ್ವಿಚಕ್ರ ವಾಹನ ಮೂಲಕ ಸಾಗಿಸುತ್ತಿದ್ದ 6.660 ಲೀ ಮದ್ಯವನ್ನು (ಅಂದಾಜು ಮೌಲ್ಯ ರೂ. 28831) ಜಪ್ತಿ ಮಾಡಿ ಬೈಕ್ ಸವಾರನನ್ನು ವಶಕ್ಕೆ ಪಡೆಯಲಾಗಿದೆ.
ಬಳ್ಳಾರಿ ತಾಲ್ಲೂಕಿನ ಗೋಡೆಹಾಳ್ ಗ್ರಾಮದಿಂದ ತೆಗ್ಗಿನಬೂದಿಹಾಳ್ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ದ್ವಿಚಕ್ರ ವಾಹನದ ಮುಖಾಂತರ ಸಾಗಾಟ ಮಾಡುತ್ತಿದ್ದ 4.320 ಲೀ ಮದ್ಯವನ್ನು (ಅಂದಾಜು ಮೌಲ್ಯ ರೂ. 22160) ಜಪ್ತಿ ಮಾಡಿ ವಾಹನ ಸವಾರನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಕಂಪ್ಲಿ ಪಟ್ಟಣದಿಂದ ಕೊಟ್ಟಾಲ್ ಕಡೆಗೆ ಹೋಗುವ ರಸ್ತೆಯ ಕಾಲುವೆ ಬಳಿ ದ್ವಿಚಕ್ರ ವಾಹನದಲ್ಲಿ 7.380 ಲೀ ಮದ್ಯವನ್ನು(ಅಂದಾಜು ಮೌಲ್ಯ ರೂ.48690) ಜಪ್ತಿ ಮಾಡಿ ಬೈಕ್ ಸವಾರರನ್ನು ವಶಕ್ಕೆ ಪಡೆದು ಪ್ರರಕರಣ ದಾಖಲಿಸಿಕೊಳ್ಳಲಾಗಿದೆ.
ಸಂಡೂರು ತಾಲ್ಲೂಕಿನ ವಿದ್ಯಾನಗರ ರೈಲ್ವೇ ಗೇಟ್ ಹತ್ತಿರ ದ್ವಿ ಚಕ್ರ ವಾಹನದ ಮೂಲಕ 7.290 ಲೀ ಮದ್ಯವನ್ನು(ಅಂದಾಜು ಮೌಲ್ಯ ರೂ.33240) ಜಪ್ತಿ ಮಾಡಿ ವಾಹನ ಸವಾರನ್ನು ವಶಕ್ಕೆ ಪಡೆದ  ಸಂಡೂರು  ವಲಯ ಅಬಕಾರಿ ಉಪ ನಿರೀಕ್ಷಕರು-2 ಇವರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಿರುಗುಪ್ಪ ನಗರದ ಹೊರ ವಲಯದ ಸಿರುಗುಪ್ಪ-ಆದೋನಿ ರಸ್ತೆಯಲ್ಲಿರುವ ತಾಯಮ್ಮ ಗುಡಿ ಬಳಿ ದ್ವಿಚಕ್ರ ವಾಹನದಲ್ಲಿ 17.280 ಲೀ. ಮದ್ಯವನ್ನು(ಅಂದಾಜು ಮೌಲ್ಯ ರೂ. 32700) ಜಪ್ತಿ ಮಾಡಿ ವಾಹನ ಸವಾರನ್ನು ವಶಕ್ಕೆ ಪಡೆದು, ಸಿರುಗುಪ್ಪ ವಲಯದ ಅಬಕಾರಿ ನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡಿದ್ದಾರೆ
ಬಳ್ಳಾರಿ ತಾಲ್ಲೂಕಿನ ಡಿ.ಕಗ್ಗಲ್ ಗ್ರಾಮದಲ್ಲಿ ಅನುಮಾನಸ್ಪದ ಅಂಗಡಿ ಮೇಲೆ ದಾಳಿ ನಡೆಸಿ, ಅಕ್ರಮವಾಗಿ ಹೊಂದಿದ್ದ 8.640ಲೀ. ಮದ್ಯವನ್ನು (ಅಂದಾಜು ಮೌಲ್ಯ ರೂ.4870) ಜಪ್ತಿ ಮಾಡಿ, ಅಂಗಡಿ ಮಾಲಿಕನ್ನು ವಶಕ್ಕೆ ಪಡೆದು ಬಳ್ಳಾರಿ ವಲಯ-2ನ ಅಬಕಾರಿ ಉಪ ನಿರೀಕ್ಷಕರು ಇವರು ಪ್ರಕರಣ ದಾಖಲು ಮಾಡಿಕೊಂಡಿರುತ್ತಾರೆ.
ಬಳ್ಳಾರಿ ನಗರದ ಕಣೇಕಲ್ ಬಸ್ ನಿಲ್ದಾಣದ ಸರ್ಕಲ್ ಮುಂಭಾಗ ತ್ರಿಚಕ್ರ ವಾಹನದ ಮೂಲಕ 17.280(ಅಂದಾಜು ಮೌಲ್ಯ ರೂ. 82680) ಲೀ. ಮದ್ಯವನ್ನು ಸಾಗಾಣಿಕೆ ಮಾಡುತ್ತಿದ್ದ ವಾಹನ ಸವಾರನ್ನು ವಶಕ್ಕೆ ಪಡೆದು ಮದ್ಯವನ್ನು ಜಪ್ತಿ ಮಾಡಿ, ಬಳ್ಳಾರಿ ವಲಯ-1ನ ಅಬಕಾರಿ ನಿರೀಕ್ಷಕರು ಪ್ರಕರಣ ದಾಖಲಿಸಿರುತ್ತಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?