Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಶಿಲಾಯುಗದ ಸ್ಮಾರಕಗಳ ಪ್ರದರ್ಶನ ಹಾಗೂ ಪುಸ್ತಕ ಪ್ರದರ್ಶನ ಕಾರ್ಯಕ್ರಮ

ಸುವರ್ಣವಾಹಿನಿ ಸುದ್ದಿ
ಬಳ್ಳಾರಿ,ಜ,೧೭: ತಾಲ್ಲೂಕಿನ ಮೋಕದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಸ್ವಾಮಿ ವಿವೇಕಾನಂದರ ೧೬೧ನೇ ಜಯಂತಿಯ ಯುವ ಸಪ್ತಾಹ ಅಭಿಯಾನದ ಅಂಗವಾಗಿ ಪ್ರಾಚೀನ, ರಾಷ್ಟ್ರೀಯ, ಅಂತಾರಾಷ್ಟ್ರೀಯ ನಾಣ್ಯ ಮತ್ತು ಶಿಲಾಯುಗದ ಸ್ಮಾರಕಗಳ ಪ್ರದರ್ಶನ ಹಾಗೂ ಪುಸ್ತಕಗಳ ಪ್ರದರ್ಶನ ಕಾರ್ಯಕ್ರಮ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಜ,೧೬ ರಂದು ಹಮ್ಮಿಕೊಳ್ಳಲಾಗಿದ್ದ ನಾಣ್ಯ,ನೋಟುಗಳ ಪ್ರದರ್ಶನದ ಸಂಪನ್ಮೂಲ ವ್ಯಕ್ತಿ ಕರ್ನಾಟಕ ಯುವ ನಾಣ್ಯ ಸಂಗ್ರಹಕಾರ ಹಾಗೂ ಪ್ರದರ್ಶಕರು ಆದ ಶ್ರೀ ಶಾಂತಕುಮಾರ್.ಬಿ ಗೋಟೂರು ಇವರು ಮೂಲತಃ ಕೃಷಿಕ ವೃತ್ತಿಯನ್ನವಲಂಬಿಸಿದ್ದರೂ, ನಾಣ್ಯ, ನೋಟುಗಳ ಸಂಗ್ರಹಿಸುವಲ್ಲಿ ಹವ್ಯಾಸ ಬೆಳೆಸಿಕೊಂಡು ಪ್ರಾಚೀನ, ರಾಷ್ಟ್ರೀಯ, ಅಂತಾರಾಷ್ಟ್ರೀಯ ನಾಣ್ಯ ನೋಟುಗಳ ಸಂಗ್ರಹ ಮಾಡಿದ ಬಗೆ, ಆಸಕ್ತಿ, ಐತಿಹಾಸಿಕ ಪ್ರಜ್ಞೆಯ ಬಗ್ಗೆ ತಿಳಿಸುತ್ತಾ ಯುವಶಕ್ತಿಗಳಾದ ನಾವು ಇಂತಹ ಅಭಿರುಚಿಯನ್ನು ಬೆಳೆಸಿಕೊಂಡು ದೇಶದ ಸಂಸ್ಕೃತಿ, ಸಂಪತ್ತನ್ನು ಸಂರಕ್ಷಸುವುದು ನಮ್ಮೆಲ್ಲರ ಹೊಣೆ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಅದೇ ರೀತಿಯಾಗಿ ಇನ್ನೊರ್ವ ಸಂಪನ್ಮೂಲ ವ್ಯಕ್ತಿಗಳಾದ ಶ್ರೀ ಮನೋಹರ್ ಸಿ.ಎಂ ಇವರು ತೆಕ್ಕಲಕೋಟೆ ಭಾಗದಲ್ಲಿ ದೊರೆಕಿರುವ ಶಿಲಾಯುಗದ ವಸ್ತುಗಳನ್ನು ಪ್ರದರ್ಶಿಸಿ ವಿದ್ಯಾರ್ಥಿಗಳು ಐತಿಹಾಸಿಕ, ಪಾರಂಪರಿಕ ಪ್ರಜ್ಞೆಯನ್ನು ಬೆಳೆಸಿಕೊಂಡಾಗ ನಮ್ಮ ಸಂಸ್ಕೃತಿ , ಸಂಪ್ರದಾಯ ಮುಂದಿನ ಪೀಳಿಗೆಗೆ ಕೊಡುಗೆಯಾಗಿ ನೀಡಲು ಸಾಧ್ಯವೆಂದು ಸಾರಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ. ಕಲಾವತಿ ಬಿ.ಜಿ ಅವರು ಕುವೆಂಪು ಅವರ ಕಲ್ಕಿ ಕವಿತೆಯಂತೆ ಯುವಶಕ್ತಿ ಕನಸಿನಲ್ಲೂ ಉತ್ಸಾಹದಿಂದ ಕಾರ್ಯನ್ಮುಖರಾದಾಗ ಅಸಾಧ್ಯವಾದುದು ಯಾವುದು ಇಲ್ಲ. ಎಂದು ಹೇಳಿ ವಿದ್ಯಾರ್ಥಿಗಳು ಯಾವುದಾದರೊಂದು ಉತ್ತಮ ಅಭಿರುಚಿಯನ್ನು ಬೆಳೆಸಿಕೊಂಡಾಗ ಅವನ ಜೀವನ ಪರಿಪೂರ್ಣ ಎಂದು ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು. ಅದೇ ರೀತಿಯಾಗಿ ಇಂದು ಅಂದರೆ ಜ.೧೭ ರಂದು ಪುಸ್ತಕಗಳ ಪ್ರದರ್ಶನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು ಪ್ರಾಂಶುಪಾಲರಾದ ಡಾ. ಇಸ್ಮಾಯಿಲ್ ಮಕಂದಾರ್ ಅವರು ಉದ್ಘಾಟಿಸಿ ವಿದ್ಯಾರ್ಥಿಗಳು ಪುಸ್ತಕಗಳನ್ನು ಗೆಳೆಯರನ್ನಾಗಿ ಮಾಡಿಕೊಳ್ಳುವ ಹವ್ಯಾಸ ಬೆಳೆಸಿಕೊಳ್ಳಿ, ಪುಸ್ತಕಗಳು ಮನುಷ್ಯನನ್ನು ಸಂಪತ್ಭರಿತವಾಗಿ ರೂಪಿಸುತ್ತವೆ ಎಂದು ಮಾತನಾಡಿ ಪ್ರೇರಿಪಿಸಿದರು. ಪುಸ್ತಕ ಪ್ರದರ್ಶನದಲ್ಲಿ ವೈವಿಧ್ಯಮಯ ಪುಸ್ತಕಗಳನ್ನು ಅವಲೋಕಿಸಿದ ವಿದ್ಯಾರ್ಥಿಗಳು ಸಾರ್ಥಕ ಭಾವದ ಅಭಿಪ್ರಾಯ ಹಂಚಿಕೊAಡು ಸಂತಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಎನ್ ಎಸ್ ಎಸ್ ನ ಕಾರ್ಯಕ್ರಮಾಧಿಕಾರಿಗಳಾದ
ಬಕಾಡೆ ಪಂಪಾಪತಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರೆ, ವಿದ್ಯಾರ್ಥಿನಿ ಕು. ಶ್ವೇತಾ ಪ್ರಾರ್ಥನೆ ಮಾಡಿದರು. ಉಪನ್ಯಾಸಕ ಡಾ. ಬೋರಯ್ಯ ಕಾರ್ಯಕ್ರಮವನ್ನು ನಿರೂಪಿಸಿದರು. ಕಾಲೇಜಿನ ಪ್ರಾಧ್ಯಾಪಕರುಗಳಾದ ಕು. ಅಮಲ್, ಪ್ರವೀಣ ಎ.ಎಂ.ಪಿ, ಆದರ್ಶ ಕೆ.ಎನ್, ಮಹಮದ್ ಅಸ್ಲಾಂ, ಗ್ರಂಥಪಾಲಕ ಪಂಪಾಪತಿ, ಶ್ರೀನಿವಾಸ್, ನವೀನ್, ಹರೀಶ್, ಮನೋಹರ್ , ಆನಂದ್ ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?