Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಮನರಂಜನೆ ಸುದ್ದಿ

ಕರಿಮಣಿ ಮಾಲೀಕ ನಾನಲ್ಲಂತಿ, ಅಂತು ಇಂತು ಮುಗಿಸ್ಯಾಕ ನಿಂತಿ ನೀ ನನ್ನ ಸಂತಿ

ಇತ್ತೀಚಿಗೆ ಸೋಷಿಯಲ್ ಮೀಡಿಯಾದಲ್ಲಿ ʼಕರಿಮಣಿ ಮಾಲೀಕ ನೀನಲ್ಲʼ ಹಾಡು ಬಹಳ ಟ್ರೆಂಡಿಂಗ್ ನಲ್ಲಿದೆ. ಎಲ್ಲಿ ನೋಡಿದ್ರೂ ಕರಿಮಣಿ ಮಾಲೀಕ ರೀಲ್ಸ್ ವಿಡಿಯೋಗಳೇ ಕಾಣಸಿಗುತ್ತಿವೆ. ಈ ನಡುವೆ ಇಲ್ಲೊಂದು ಜಾನಪದ ಶೈಲಿಯ ʼಕರಿಮಣಿ ಮಾಲೀಕ ನಾನಲ್ಲಂತಿʼ ಎಂಬ ಹಾಡು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಉತ್ತರ ಕರ್ನಾಟಕ ಶೈಲಿಯ ಜಾನಪದ ಸೊಗಡಿನ ಈ ಹಾಡಿಗೆ ನೆಟ್ಟಿಗರು ಮನಸೋತಿದ್ದಾರೆ.

ಯಾವುದಾದರೂ ಒಳ್ಳೆಯ ಕ್ರಿಯೇಟಿವ್ ಕಂಟೆಂಟ್​​​ಗಳಿದ್ದರೆ, ಅಂತಹ ವಿಷಯಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟೆ ವೈರಲ್ ಆಗುತ್ತವೆ. ಹೀಗೆ ಸಾಮಾಜಿಕ ಜಾಲತಾಣದಲ್ಲಿ ದಿಢೀರನೇ ಜನಪ್ರಿಯರಾದವರು ಸಾಕಷ್ಟು ಜನರಿದ್ದಾರೆ.  ಸದ್ಯ ಇದೇ ರೀತಿ ಜಾನಪದ ಹಾಡುಗಾರ ಶಬ್ಬೀರ್ ಡಾಂಗೆ ಅವರು ʼಕರಿಮಣಿ ಮಾಲೀಕ ನಾನಲ್ಲಂತಿʼ ಎಂಬ ಉತ್ತರ ಕರ್ನಾಟಕ ಶೈಲಿಯ ಜಾನಪದ ಸೊಗಡಿನ ಗೀತೆಯನ್ನು ಹಾಡುವ ಮೂಲಕ ಸುದ್ದಿಯಲ್ಲಿದ್ದಾರೆ.

ಇಂದು ಜಾಗತೀಕರಣದ ಪ್ರಭಾವದಿಂದಾಗಿ ಜೀವನದ ಮೌಲ್ಯವನ್ನು ಪಸರಿಸುವಂತಹ, ಅರ್ಥಗರ್ಭಿತವಾದ ಜಾನಪದ ಗೀತೆಗಳು ಕಣ್ಮರೆಯಾಗುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ಶಬ್ಬೀರ್ ಡಾಂಗೆ ಅವರ ಕಂಠಸಿರಿಯಲ್ಲಿ ಮೂಡಿಬಂದ ಉತ್ತರ ಕರ್ನಾಟಕ ಶೈಲಿಯ ಜಾನಪದ ಗೀತೆಯು ಇದೀಗ ನೆಟ್ಟಿಗರ ಮನ ಗೆದ್ದಿದೆ. ಈ ಹಿಂದೆ ʼಅನ್ಯಾಯಕಾರಿ ಬ್ರಹ್ಮ ಈ ಸುಂದರನ ಸನ್ಯಾಸಿ ಮಾಡಬಹುದೇʼ ಎಂಬ ಜಾನಪದ ಹಾಡು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಇದೀಗ ʼಕರಿಮಣಿ ಮಾಲೀಕ ನಾನಲ್ಲಂತಿʼ ಹಾಡು ಸದ್ದು ಮಾಡುತ್ತಿದೆ.

ಇತ್ತೀಚಿಗೆ ರಿಯಲ್ ಸ್ಟಾರ್ ಉಪೇಂದ್ರ ನಟನೆಯ ʼಉಪೇಂದ್ರʼ ಚಿತ್ರದ ಕರಿಮಣಿ ಮಾಲೀಕ ನೀನಲ್ಲ ಹಾಡು ಸೋಷಿಯಲ್ ಮಿಡಿಯಾದಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿತ್ತು. ಎಲ್ಲಿ ನೋಡಿದ್ರೂ ಈ ಹಾಡಿನದ್ದೇ ಹವಾ. ಹೀಗಿರುವಾಗ ಈ ನಡುವೆ ಕರಿಮಣಿ ಮಾಲೀಕನ ಉತ್ತರ ಕರ್ನಾಟಕ ಶೈಲಿಯ ಜಾನಪದ ಸೊಗಡಿನ ಹಾಡೊಂದು ಕೂಡಾ ವೈರಲ್ ಆಗುತ್ತಿವೆ.  ಜಾನಪದ ಗಾಯಕ ಶಬ್ಬೀರ್ ಡಾಂಗೆ (@shabbir_dange_official_) ಅವರ ಕಂಠಸಿರಿಯಲ್ಲಿ ಮೂಡಿಬಂದಿರುವ ಈ ಹಾಡಿನ ರೀಲ್ಸ್ ವಿಡಿಯೋವನ್ನು  ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ವೈರಲ್ ರೀಲ್ಸ್ ವಿಡಿಯೋದಲ್ಲಿ ಶಬ್ಬೀರ್ ಡಾಂಗೆ ಅವರು ಕರಿಮಣಿ ಮಾಲೀಕ ನಾನಲ್ಲಂತಿ. ಕರಿಮಣಿ ಮಾಲೀಕ ನಾನಲ್ಲಂತಿ ಅಂತೂ ಇಂತು ಮುಗಿಸ್ಯಾಕ ನಿಂತಿ ನನ್ನ ಸಂತಿ ಕರಿಮಣಿ ಮಾಲೀಕನ ಬದಲಿಸಬೇಕಂತಿ, ಎಷ್ಟು ದಿನದಿಂದ ಇಂತ  ಹೊಂಚಾಕಿ ಕುಂತಿ ಎಂಬ ಜಾನಪದ ಗೀತೆಯನ್ನು ಹಾಡುತ್ತಿರುವ ದೃಶ್ಯವನ್ನು ಕಾಣಬಹುದು.

ಎರಡು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 1 ಮಿಲಿಯನ್ ವೀಕ್ಷಣೆಗಳನ್ನು ಹಾಗೂ 1 ಲಕ್ಷಕ್ಕೂ ಅಧಿಕ ಲೈಕ್ಸ್ ಗಳನ್ನು ಪಡೆದುಕೊಂಡಿದೆ. ಹಾಗೂ ಹಲವಾರು ಕಮೆಂಟ್ಸ್ ಗಳೂ ಹರಿದು ಬಂದಿವೆ. ಒಬ್ಬ ಬಳಕೆದಾರರು ʼನಿಮ್ಮ ಈ ಸಾಹಿತ್ಯ ಮತ್ತು ಗಾಯನ ನೋಡಲು ನಿಮ್ಮ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ದಯವಿಟ್ಟು ನಿಮ್ಮ ಗಾಯನ ಕಲೆಯನ್ನು ಹೀಗೆ ಮುಂದುವರೆಸಿʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼನಿಮ್ಮ ಈ ಸುಮಧುರ  ಕಂಠಕ್ಕೆ ಯಾರ ದೃಷ್ಟಿಯೂ ಬೀಳದಿರಲಿʼ ಎಂದು ಹಾರೈಸಿದ್ದಾರೆ. ಮತ್ತೊಬ್ಬ ಬಳಕೆದಾರರು ʼಯಪ್ಪಾ ಕರಿಮಣಿ ರೀಲ್ಸ್ ನೋಡಿ ಸಾಕಾಗಿತ್ತು, ಈಗ ನಿಮ್ಮ ಹಾಡು ಕೇಳಿ ಬಹಳ ಸಂತೋಷವಾಯಿತು ಸರ್ʼ ಎಂದು ಕಮೆಂಟ್ ಮಾಡಿದ್ದಾರೆ. ಇನ್ನೂ ಅನೇಕರು ಶಬ್ಬೀರ್ ಡಾಂಗೆ ಅವರ ಈ ಹಾಡಿಗೆ ಭಾರಿ ಮೆಚ್ಚುಗೆಯನ್ನು ಸೂಚಿಸಿದ್ದಾರೆ.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?