Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಷ್ಟ್ರೀಯ ಸುದ್ದಿ

ನೇಪಾಳದಲ್ಲಿ ಮತ್ತೆ ಹಿಂದೂ ರಾಷ್ಟ್ರದ ಕೂಗು, ಎಲ್ಲೆಡೆ ಪ್ರತಿಭಟನೆ

ನೇಪಾಳವನ್ನು ಹಿಂದೂ ರಾಷ್ಟ್ರವನ್ನಾಗಿ ಘೋಷಿಸಬೇಕು ಎಂದು ಮತ್ತೆ ಆಗ್ರಹಗಳು ಕೇಳಿಬರುತ್ತಿವೆ, ನೇಪಾಳಿ ಕಾಂಗ್ರೆಸ್​ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆಗಳು ಕೂಡ ನಡೆಯುತ್ತಿವೆ. ಜತೆಗೆ ರಾಜಪ್ರಭುತ್ವವನ್ನು ಮರುಸ್ಥಾಪಿಸುವ ಕುರಿತು ಕೂಗು ಕೇಳಿಬರುತ್ತಿದೆ.

ನೇಪಾಳ(Nepal)ವನ್ನು ಹಿಂದೂ ರಾಷ್ಟ್ರ(Hindu Nation)ವನ್ನಾಗಿ ಘೋಷಿಸಬೇಕೆಂದು ನೇಪಾಳಿ ಕಾಂಗ್ರೆಸ್​ ಪಕ್ಷವು ಮತ್ತೆ ಬೇಡಿಕೆಯನ್ನಿಟ್ಟಿದೆ. ಈ ಹಿನ್ನೆಲೆಯಲ್ಲಿ ನೇಪಾಳಿ ಕಾಂಗ್ರೆಸ್​ ಪಕ್ಷವು ಹಿಂದೂ ರಾಷ್ಟ್ರ ಹಾಗೂ ರಾಜ ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸಲು ಒತ್ತಾಯಿಸಿ ಕಠ್ಮಂಡುವಿನಲ್ಲಿ ಮೆರವಣಿಗೆ ನಡೆಸಿತು. ಪ್ರಧಾನಿ ಪುಷ್ಪ ಕಮಲ್ ದಹಲ್ ಅವರಿಗೆ 40 ಅಂಶಗಳ ಕಾರ್ಯಸೂಚಿಯನ್ನು ಸಲ್ಲಿಸಿದೆ. ದೇಶವು ನಿರ್ಣಾಯಕ ಹಂತವನ್ನು ತಲುಪಿದೆ ಆದ್ದರಿಂದ ನಮಗೆ ರಾಜಕೀಯ ಪಕ್ಷಗಳ ನಡುವೆ ಹೊಸ ತಿಳಿವಳಿಕೆ ಮತ್ತು ಒಪ್ಪಂದದ ಅಗತ್ಯವಿದೆ ಎಂದು ರಾಷ್ಟ್ರೀಯ ಪ್ರಜಾತಂತ್ರ ಪಕ್ಷದ ಅಧ್ಯಕ್ಷ ರಾಜೇಂದ್ರ ಹೇಳಿದ್ದಾರೆ

ನಾವು ಹಿಂದೂ ರಾಷ್ಟ್ರ ಮತ್ತು ರಾಜಪ್ರಭುತ್ವದ ಮರುಸ್ಥಾಪನೆಗೆ ಒತ್ತಾಯಿಸಿದ್ದೇವೆ. ಹಣದುಬ್ಬರವನ್ನು ಕೊನೆಗೊಳಿಸಲು, ಸಾರ್ವಜನಿಕ ಜೀವನವನ್ನು ಸರಾಗಗೊಳಿಸಲು, ಫೆಡರಲ್ ರಚನೆಯನ್ನು ರದ್ದುಗೊಳಿಸಲು, ಭ್ರಷ್ಟಾಚಾರ ನಿಯಂತ್ರಣ, ಉತ್ತಮ ಆಡಳಿತಕ್ಕೆ ಕರೆ ನೀಡಿದ್ದೇವೆ ಎಂದು ಪಕ್ಷದ ವಕ್ತಾರ ಮೋಹನ್ ಶ್ರೇಷ್ಠಾ ಹೇಳಿದ್ದಾರೆ.

ನೇಪಾಳದ 81 ಪ್ರತಿಶತ ನಾಗರಿಕರು ಹಿಂದೂಗಳಾಗಿರುವುದರಿಂದ ಇತ್ತೀಚಿಗೆ ಮುಕ್ತಾಯಗೊಂಡ ವಸಂತ ಪಂಚಮಿ ಆಚರಣೆ ಸೇರಿದಂತೆ ಪ್ರಧಾನಿಯಿಂದ ರಾಷ್ಟ್ರಪತಿಗಳವರೆಗೆ ಎಲ್ಲಾ ವಿಧಿವಿಧಾನಗಳಲ್ಲಿ ಪಾಲ್ಗೊಂಡಿದ್ದರಿಂದ ಹಿಂದೂ ರಾಷ್ಟ್ರ ಮರುಸ್ಥಾಪನೆಗಾಗಿ ಧ್ವನಿ ಎತ್ತುತ್ತಿದೆ.

2008 ರಲ್ಲಿ ರಾಜಪ್ರಭುತ್ವದ ಅಂತ್ಯ ನೇಪಾಳ ಅಧಿಕೃತವಾಗಿ 28 ಮೇ 2008 ರಂದು ಗಣರಾಜ್ಯವಾಯಿತು. ನಂತರ ನೇಪಾಳದ ಸಂವಿಧಾನ ಸಭೆಯ ಮೊದಲ ಸಭೆ ನಡೆಯಿತು, ಅದರ ನಂತರ ಶಾ ರಾಜರ 240 ವರ್ಷಗಳ ರಾಜಪ್ರಭುತ್ವವು ಕೊನೆಗೊಂಡಿತು. ನೇಪಾಳವು ಜಾತ್ಯತೀತ ರಾಷ್ಟ್ರವಾಗಿದ್ದರೂ, ಅದು ತನ್ನ ಹಿಂದೂ ಪೂರ್ವಜರ ಬಗ್ಗೆ ಹೆಮ್ಮೆಪಡುತ್ತದೆ. ಪ್ರಸ್ತುತ ನೇಪಾಳದ ಪ್ರಧಾನಿ ಪುಷ್ಪ ಕಮಲ್ ದಹಾಲ್ ಮತ್ತು ಅಧ್ಯಕ್ಷ ರಾಮಚಂದ್ರ ಪೌಡೆಲ್ ಕೂಡ ಹಿಂದೂ ರಾಷ್ಟ್ರದ ಬಗ್ಗೆ ಚರ್ಚೆಯನ್ನು ಬಯಸುತ್ತಿದ್ದಾರೆ ಎಂದು ಹೇಳಲಾಗಿದೆ.

ಜನರ ಹೋರಾಟದ ಫಲವಾಗಿ 2006ರಲ್ಲಿ ರಾಜಪ್ರಭುತ್ವ ಕೊನೆಗೊಂಡ ಬಳಿಕ 2008ರಲ್ಲಿ ಅಧಿಕಾರಕ್ಕೆ ಬಂದ ಸರ್ಕಾರ ನೇಪಾಳವನ್ನು ಜಾತ್ಯತೀತ ರಾಷ್ಟ್ರ ಎಂದು ಘೋಷಿಸಿತ್ತು.

2015ರಲ್ಲಿ ಏನಾಗಿತ್ತು? ನೇಪಾಳವನ್ನು ಹಿಂದು ರಾಷ್ಟ್ರ ಎಂದು ಘೋಷಿಸಬೇಕು ಎನ್ನುವ ಪ್ರಸ್ತಾಪವನ್ನು ಸಂವಿಧಾನ ಸಭೆ ಭಾರಿ ಬಹುಮತದೊಂದಿಗೆ ತಿರಸ್ಕರಿಸಿತ್ತು. ಈ ದೇಶ ಧರ್ಮನಿರಪೇಕ್ಷವಾಗಿಯೇ ಉಳಿದುಕೊಳ್ಳಲಿದೆ ಎಂದು ಹೇಳಿತ್ತು.

ಸಂವಿಧಾನಕ್ಕೆ ತಿದ್ದುಪಡಿ ತಂದು ಹಿಂದುರಾಷ್ಟ್ರ ಎಂದು ಘೋಷಿಸಬೇಕು ಎಂದು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಪಕ್ಷ ಮಂಡಿಸಿದ್ದ ನಿರ್ಣಯದ ಪರವಾಗಿ ಕೇವಲ 21 ಮತಗಳು ಮಾತ್ರ ಬಿದ್ದವು. ಉಳಿದ 580 ಮಂದಿ ಸಂಸದರು ಅದಕ್ಕೆ ಸಹಮತ ವ್ಯಕ್ತಪಡಿಸಿರಲಿಲ್ಲ. ಪ್ರತಿಭಟನೆ ಹಿಂದು ರಾಷ್ಟ್ರ ಎಂದು ನಾಮಕಾರಣ ಮಾಡುವ ಪ್ರಸ್ತಾಪ ಬಿದ್ದು ಹೋಗಿದ್ದನ್ನು ಪ್ರತಿಭಟಿಸಿ, ಇಲ್ಲಿನ ಹೊಸ ಬಾಣೇಶ್ವರ ಪ್ರದೇಶದಲ್ಲಿ ಹಿಂದು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ವಾಹನಗಳನ್ನು ಜಖಂ ಗೊಳಿಸಿದ್ದರು.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?