Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಇದೇ ಫೆಬ್ರವರಿ ಕಿಷ್ಕಿಂದ ವಿಶ್ವವಿದ್ಯಾಲಯ ಪ್ರಾರಂಭ

ಸುವರ್ಣವಾಹಿನಿ ಸುದ್ದಿ
ಬಳ್ಳಾರಿ,ಜ,೧೮: ನೂತನ ಕಿಷ್ಕಿಂದ ವಿಶ್ವವಿದ್ಯಾಲಯವು ೨೦೨೩-೨೪ರ ಶೈಕ್ಷಣಿಕ ವರ್ಷದಿಂದ ಕಾರ್ಯನಿರ್ವಹಿಸಲು ಪ್ರಾರಂಭಿಸಿದೆ ಎಂದು ಸದರಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಟಿ.ಎನ್.ನಾಗಭೂಷಣರವರು ತಿಳಿಸಿದರು.
ನಗರದ ಸಿರುಗುಪ್ಪ ರಸ್ತೆ ಪ್ರದೇಶದಲ್ಲಿರುವ ಕಿಷ್ಕಿಂದ ವಿಶ್ವವಿದ್ಯಾಲಯದಲ್ಲಿ ಬೆಳಿಗ್ಗೆ ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಪ್ರೊ.ಟಿ. ಎನ್.ನಾಗಭೂಷಣರವರು ಪ್ರಸ್ತುತ ವಿಶ್ವವಿದ್ಯಾಲಯವು ಬಿ.ಟೆಕ್ ಪದವಿಯಲ್ಲಿ ಕಂಪ್ಯೂಟರ್ಸ್, ಎಲೆಕ್ಟಾçನಿಕ್ಸ್ ಮತ್ತು ಎಲೆಕ್ರಟ್ರಿಕಲ್ಸ್ (ಅSಅ, ಇಅಇ & ಇಇಇ) ಈ ಮೂರು ಕೋರ್ಸ್ಗಳನ್ನು ಮತ್ತು ಬಿಸಿಎ ಪದವಿ ಒಳಗೊಂಡAತೆ ನಾಲ್ಕು ಪದವಿ ಕಾರ್ಯಕ್ರಮಗಳನ್ನು ನೀಡುತ್ತಿದೆ ಎಂದರು. ಇದೇ ಫೆಬ್ರವರಿ ೨೦೨೪ರಿಂದ ಪ್ರಾರಂಭವಾಗುವ ಎರಡು ಸ್ನಾತಕೋತ್ತರ ಪದವಿಗಳಾದ ಎಂ.ಬಿ.ಎ ಮತ್ತು ಎಂ.ಸಿ.ಎ ಕಾರ್ಯಕ್ರಮಗಳು ಆರಂಭಗೊಳ್ಳಲಿವೆ. ಪ್ರಸ್ತುತಬಿ.ಐ.ಟಿ.ಎಂ ಮತ್ತು ಬಿ.ಬಿ.ಸಿ ಕ್ಯಾಂಪಸ್ಗಳಲ್ಲಿ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ. ಸಿಂಧಿಗೇರಿ ಬಳಿ ೫೦ ಎಕರೆ ಪ್ರದೇಶದಲ್ಲಿ ಮುಖ್ಯ ಕ್ಯಾಂಪಸ್ ಬರುತ್ತಿದ್ದು, ೫೦೦೦ ಚದರ ಮೀಟರ್ ವಿಸ್ತೀರ್ಣದ ಅಕಾಡೆಮಿಕ್ ಬ್ಲಾಕ್ ನಿರ್ಮಾಣ ಕಾಮಗಾರಿ ಆರಂಭವಾಗಿದೆ. ಮಾರ್ಚ್ ೨೦೨೫ರ ಅಂತ್ಯದ ವೇಳೆಗೆ ವಿದ್ಯಾರ್ಥಿಗಳ ಹಾಸ್ಟೆಲ್ಗಳು ಮತ್ತು ವಿದ್ಯಾರ್ಥಿ ಸೌಕರ್ಯಗಳ ಕಟ್ಟಡಗಳು ಸಿದ್ಧವಾಗಲಿವೆ. ಜುಲೈ ೨೦೨೫ರಿಂದ ಶೈಕ್ಷಣಿಕ ಚಟುವಟಿಕೆಗಳನ್ನು ಹೊಸ ಕ್ಯಾಂಪಸ್ಗೆ ವರ್ಗಾಯಿಸಲಾಗುತ್ತದೆ ಎಂದರು.
ಕಿಷ್ಕಿAದ ವಿಶ್ವವಿದ್ಯಾಲಯವು ಯು.ಜಿ.ಸಿ.ಯ ನಿಯಮಗಳಲ್ಲಿ ವ್ಯಾಖ್ಯಾನಿಸಿದಂತೆ ಎಲ್ಲಾ ರೀತಿಯ ವಿದ್ಯಾರ್ಥಿ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಿಸುವ ವಿವಿಧ ಸಮಿತಿಗಳನ್ನು ಸ್ಥಾಪಿಸಿದೆ. ವಿಶ್ವವಿದ್ಯಾಲಯವನ್ನು ಆಷ್ಯೆ (ಂISಊಇ) ಸರಕಾರದ ಜಾಲ ತಾಣದಲ್ಲಿ ಸೇರಿ ಸಲಾಗಿದ್ದು, ಯು.ಜಿ.ಸಿ.ಯ ಕಾಯಿದೆ ೧೯೫೬ರ ಸೆಕ್ಷನ್ ೨ಎಫ್ ಸ್ಥಾನವನ್ನು ಪಡೆದುಕೊಂಡಿದೆ ಎಂದರು. ಶೈಕ್ಷಣಿಕ ರಂಗದಲ್ಲಿ ಕಿಷ್ಕಿಂದ ವಿಶ್ವವಿದ್ಯಾಲಯವನ್ನು ಕೌಶಲ್ಯ ಮತ್ತು ಜ್ಞಾನ ಕೇಂದ್ರಿತವಾಗಿ ಬಹು-ಶಿಸ್ತಿನ ವಿಶ್ವವಿದ್ಯಾಲಯವಾಗಿ ಅಭಿವೃದ್ಧಿಪಡಿಸಲು ಸಕಲ ರೀತಿಯಲ್ಲಿ ಸಜ್ಜುಗೊಳಿಸಲಾಗುತ್ತಿದೆ ಎಂದು ಅವರು ಹೇಳಿದರು.
ವಿಶ್ವವಿದ್ಯಾಲಯದ ವಿಶಿಷ್ಟ ಲಕ್ಷಣಗಳು: ಕಿಷ್ಕಿಂದ ವಿಶ್ವವಿದ್ಯಾಲಯಕ್ಕೆ ಪ್ರವೇಶ ಪಡೆಯುವ ಪ್ರತಿಯೊಬ್ಬ ವಿದ್ಯಾರ್ಥಿಯು ವಿಶ್ವವಿದ್ಯಾನಿಲಯದಲ್ಲಿ ಶಿಕ್ಷಣವನ್ನು ಪಡೆಯಬೇಕು ಮತ್ತು ಸಮಾಜಕ್ಕೆ ಉಪಯುಕ್ತವಾಗುವಂತೆ ವಿದ್ಯಾರ್ಥಿಯನ್ನುಸಜ್ಜುಗೊಳಿಸಲಾಗುವುದು, ವಿಶ್ವವಿದ್ಯಾನಿಲಯವು ಪ್ರಾಜೆಕ್ಟ್ ಆಧಾರಿತ ಕಲಿಕೆಗೆ ಒತ್ತು ನೀಡುತ್ತದೆ. ಇಲ್ಲಿ ವಿದ್ಯಾರ್ಥಿಗಳು ಮೊದಲಿನಿಂದಲೂ ಯೋಜನೆಗಳು ಮತ್ತು ಸಂಶೋಧನೆಗಳಲ್ಲಿ ತೊಡಗಿಸಿಕೊಳ್ಳುತ್ತಾರೆ. ಇದು ಪದವಿಪೂರ್ವ ಮತ್ತು ಪದವೀಧರ ವಿದ್ಯಾರ್ಥಿಗಳಿಗೆ ನೈಜ ಪ್ರಪಂಚದ ಸಮಸ್ಯೆಗಳನ್ನು ಪರಿಹರಿಸಲು ತಮ್ಮ ಕೌಶಲ್ಯಗಳನ್ನು ಅನ್ವಯಿಸಲು ಅನುವು ಮಾಡಿಕೊಡುತ್ತದೆ, ವಿಶ್ವವಿದ್ಯಾನಿಲಯವು ವಿದ್ಯಾರ್ಥಿಗಳಿಗೆ ಜ್ಞಾನ ಮತ್ತು ಕೌಶಲ್ಯವನ್ನು ಪಡೆಯಲು ಅನುವು ಮಾಡಿಕೊಡಲು ``ತೊಡಗಿಸಿಕೊಳ್ಳಲು’’ ಅಧ್ಯಾಪಕರನ್ನು ಸಿದ್ಧಪಡಿಸುತ್ತದೆ. ಇದರಿಂದಾಗಿ ಅವರು ಪ್ರವೀಣರಾಗುತ್ತಾರೆ ಮತ್ತು ಜಾಗತಿಕ ಪರಿಸರಕ್ಕೆ ನಿರಂತರವಾಗಿ ಬದಲಾಗುತ್ತಿರುವ ಚಾಣಾಕ್ಷ ಎಂಜಿನಿಯರ್ಗಳನ್ನಾಗಿ ರೂಪಿಸಲಾಗುವುದು, ತಂತ್ರಜ್ಞಾನ ಮತ್ತು ಸಮಾಜದ ಪ್ರಭಾವ ಮತ್ತು ವೃತ್ತಿಜೀವನದ ಗುರಿಗಳು ಬದಲಾಗುತ್ತಿರುವ ಕುರಿತು ವಿದ್ಯಾರ್ಥಿಗೆ ಮಾರ್ಗದರ್ಶನ ನೀಡಲಾಗುವುದು, ಸಂಶೋಧನೆ ಮತ್ತು ನಾವೀಣ್ಯತೆ ವಿಶ್ವವಿದ್ಯಾಲಯದಲ್ಲಿ ಸಂತೋಷದಾಯಕ ಕಲಿಕೆಯ ಭಾಗವಾಗಿದೆ, ಮುಂಬರುವ ವರ್ಷಗಳಲ್ಲಿ ಬಹುಶಿಸ್ತಿನ ವಿಶ್ವವಿದ್ಯಾಲಯವನ್ನು ಮಾಡಲು ವಿಶ್ವವಿದ್ಯಾಲಯವು ಕ್ರಮೇಣ ಹೊಸ ಕೋರ್ಸ್ಗಳನ್ನು ಪರಿಚಯಿಸಲು ಯೋಜಿಸಿದೆ, ಡಿಜಿಟಲ್ ಪ್ಲಾಟ್ಫಾರ್ಮ್ ‘ ಡಿಜಿಯಲ್ಲಿ’ (ಆIಉII) ಆಡಳಿತ ಮತ್ತು ಶೈಕ್ಷಣಿಕ (ಬೋಧನೆ, ಕಲಿಕೆ ಮತ್ತು ಮೌಲ್ಯಮಾಪನ) ಚಟುವಟಿಕೆಗಳ ನಿಯೋಜನೆಯು ಕಿಷ್ಕಿಂದ ವಿಶ್ವವಿದ್ಯಾಲಯದ ಗಮನಾರ್ಹ ವೈಶಿಷ್ಟ÷್ಯಗಳಲ್ಲಿ ಒಂದಾಗಿದೆ. ಎಲ್ಲಾ ಪ್ರಕ್ರಿಯೆಗಳು ಸ್ವಯಂಚಾಲಿತವಾಗಿದ್ದು, ಪಾರದರ್ಶಕತೆ ವಿಶ್ವವಿದ್ಯಾಲಯದ ವಿಶಿಷ್ಟ ಲಕ್ಷಣವಾಗಿದೆ, ವಿಶ್ವವಿದ್ಯಾಲಯವು ಸುಂದರ ಕಲಿಕೆಯ ವಾತಾವರಣವನ್ನು ಸೃಷ್ಟಿಸಲು, ಜವಾಬ್ದಾರರಾಗಿರುವ ವಿವಿಧ ಹುದ್ದೆಗಳಿಗೆ ನುರಿತ ಅಧ್ಯಾಪಕರನ್ನು ನೇಮಕ ಮಾಡುವ ಪ್ರಕ್ರಿಯೆಯಲ್ಲಿದೆ, ವಿಶ್ವವಿದ್ಯಾಲಯವು ಗುಣಮಟ್ಟದ ಶಿಕ್ಷಣದೊಂದಿಗೆ ವಿದ್ಯಾರ್ಥಿಗಳ ಆಕಾಂಕ್ಷೆಗಳನ್ನು ಪೂರೈಸುವ ಭರವಸೆ ನೀಡುತ್ತದೆ ಎಂದರು. ಪತ್ರಿಕಾ ಗೋಷ್ಠಿಯಲ್ಲಿ ಡಾ.ಟಿ.ಎನ್.ನಾಗಭೂಷಣ, ಡಾ. ಎಸ್.ಎ.ಪಾಟೀಲ್,ಈರಣ್ಣ ಇನ್ನಿತರರು ಉಪಸ್ಥಿತರಿದ್ದರು.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?