Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜ್ಯ ಸುದ್ದಿ

ಮಹಾಯೋಗಿ ವೇಮನ ತತ್ವಗಳು ಇಂದಿಗೂ ಆದರ್ಶ: ಸಚಿವ ಬಿ.ನಾಗೇಂದ್ರ

ಸುವರ್ಣವಾಹಿನಿ ಸುದ್ದಿ
ಬಳ್ಳಾರಿ,ಜ.೧೯: ಮಹಾಯೋಗಿ ವೇಮನ ತತ್ವಗಳು ಇಂದಿಗೂ ಆದರ್ಶವಾಗಿದ್ದು, ಅವರ ತತ್ವಗಳನ್ನು ಅಳವಡಿಸಿಕೊಂಡವರು ರೆಡ್ಡಿ ಸಮಾಜದವರು ಎಂದು ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜ್ಕುಮಾರ್ ರಸ್ತೆಯ ಬಿಡಿಎಎ ಫುಟ್ಬಾಲ್ ಮೈದಾನದ ಸಭಾಂಗಣದಲ್ಲಿ ಏರ್ಪಡಿಸಿದ್ದ ಮಹಾಯೋಗಿ ವೇಮನ ಜಯಂತಿ ವೇದಿಕೆ ಕಾರ್ಯಕ್ರಮವನ್ನು ವೇಮನರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ರೆಡ್ಡಿ ಸಮುದಾಯದವರು ಆರ್ಥಿಕವಾಗಿ ಸಬಲರು. ಸಂಕಷ್ಟದಲ್ಲಿರುವ ಜನರಿಗೆ ತಕ್ಷಣ ಆರ್ಥಿಕವಾಗಿ ನೆರವಾಗುವ ಸಹಾಯ ಮನೋಭಾವನೆ ಮತ್ತು ನಾಯಕತ್ವದ ಗುಣಗಳನ್ನು ರೆಡ್ಡಿ ಸಮುದಾಯವರು ಹೊಂದಿದ್ದಾರೆ ಎಂದರು.
ರೆಡ್ಡಿ ಸಮುದಾಯ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಾಗುವುದು ಎಂದು ತಿಳಿಸಿದ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು, ನಗರದಲ್ಲಿ ನಿರ್ಮಿಸುತ್ತಿರುವ ರೆಡ್ಡಿ ಸಮುದಾಯ ಭವನಕ್ಕೆ ನನ್ನ ವೈಯಕ್ತಿಕವಾಗಿ ರೂ.೧೫ ಲಕ್ಷ ನೀಡುತ್ತೇನೆ. ನನ್ನ ರಾಜಕೀಯ ಬೆಳವಣಿಗೆಗೆ ಇತರೆ ಸಮಾಜಗಳಂತೆ ರೆಡ್ಡಿ ಸಮುದಾಯದವರ ಸಹಕಾರ ಇದೆ ಎಂದರು.
ಇದೇ ಸಂದರ್ಭದಲ್ಲಿ ನಗರದ ತಾಳೂರು ರಸ್ತೆಗೆ ಮಹಾಯೋಗಿ ವೇಮನರ ಹೆಸರು ನಾಮಕರಣ ಮಾಡುವ ಕುರಿತು ಸಾಮಾನ್ಯ ಸಭೆಯಲ್ಲಿ ಚರ್ಚಿಸಲಾಗುವುದು ಮತ್ತು ಬಳ್ಳಾರಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಮೆಣಸಿನಕಾಯಿ ಮಾರುಕಟ್ಟೆಗೂ ಹೇಮರೆಡ್ಡಿ ಮಲ್ಲಮ್ಮನ ಹೆಸರು ಇಡಲು ರಾಜ್ಯ ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಮಾತನಾಡಿ, ಶಾಸಕರ ಅನುದಾನದಲ್ಲಿ ರೆಡ್ಡಿ ಜನ ಸಂಘದ ಸುತ್ತುಗೋಡೆ ನಿರ್ಮಾಣಕ್ಕೆ ರೂ.೨೦ ಲಕ್ಷ ನೀಡಲಾಗಿದೆ. ಅದೇರೀತಿಯಾಗಿ ರೆಡ್ಡಿ ಜನ ಸಂಘ ಆವರಣದಲ್ಲಿ ನಿರ್ಮಿಸುವ ಕಲ್ಯಾಣ ಮಂಟಪ ನಿರ್ಮಾಣಕ್ಕೆ ವೈಯಕ್ತಿಕವಾಗಿ ರೂ.೫೦ ಲಕ್ಷ ನೀಡಲಾಗುವುದು ಎಂದು ಘೋಷಣೆ ಮಾಡಿದರು.
ರೆಡ್ಡಿ ಜನಾಂಗದವರ ಕುಲಕಸುಬು ಕೃಷಿ ಆಗಿದ್ದು, ಕಷ್ಟದಲ್ಲಿ ಸಹಾಯ ಮಾಡುವ ಗುಣವುಳ್ಳವರು. ಪ್ರಸ್ತುತ ದಿನಗಳಲ್ಲಿ ನಮ್ಮ ಸಮುದಾಯದವರು ಹಳ್ಳಿ ತ್ಯಜಿಸಿ ಪಟ್ಟಣಕ್ಕೆ ಬಂದು ಜೀವನ ಮಾಡುತ್ತಿದ್ದಾರೆ. ರೆಡ್ಡಿ ಸಮುದಾಯದ ಯುವಕರು ಹಳ್ಳಿಗಳಲ್ಲಿ ಜಮೀನು ಖರೀದಿಸಿ, ಕೃಷಿ ಚಟುವಟಿಕೆ ಕೈಗೊಂಡು ನಮ್ಮ ಕುಲ ಕಸುಬನ್ನು ಮುಂದುವರಿಸಬೇಕೆAದು ಸಮುದಾಯದ ಯುವಕರಿಗೆ ಕಿವಿಮಾತು ಹೇಳಿದರು.
ಇದೇ ಸಂದರ್ಭದಲ್ಲಿ ಸರ್ಕಾರವು ರೆಡ್ಡಿ ಅಭಿವೃದ್ಧಿ ಪ್ರಾಧಿಕಾರ ರಚಿಸಬೇಕು ಎಂದು ಮನವಿ ಮಾಡಿದರು.
ಚಳ್ಳಕೆರೆ ತಾಲೂಕಿನ ಚಿಕ್ಕಹಳ್ಳಿ ಬೇಡರೆಡ್ಡಿಹಳ್ಳಿಯ ಕನ್ನಡ ಉಪನ್ಯಾಸಕ ಭೀಮರೆಡ್ಡಿ ಎಸ್.ಬಿ ಅವರು ವಿಶೇಷ ಉಪನ್ಯಾಸದಲ್ಲಿ ಮಾತನಾಡಿ, ಜನಸಾಮಾನ್ಯರ ಕವಿಯಾದ ಯೋಗಿ ವೇಮನರು ಜಾತೀಯತೆ, ಅಂಧ ಶ್ರದ್ಧೆ, ಮೇಲು-ಕೀಳುಗಳನ್ನು ತಮ್ಮ ಕಾವ್ಯದ ಮೂಲಕ ಧಿಕ್ಕರಿಸಿದವರು ಮತ್ತು ಅಪೂರ್ವ ಸಮಾಜ ಸುಧಾರಕರು ಎಂದು ತಿಳಿಸಿದರು.


ಆಂಧ್ರಪ್ರದೇಶದ ಗುಂಟೂರ ಜಿಲ್ಲೆಯ ಕೊಂಡವೀಡು ಗ್ರಾಮದಲ್ಲಿ ಕ್ರಿ.ಶ. ೧೪೧೨ರಲ್ಲಿ ತಂದೆ ಕುಮಾರ ಗಿರಿರೆಡ್ಡಿ ಹಾಗೂ ತಾಯಿ ರಾಣಿ ಮಲ್ಲಮಾಂಬೆ ಇವರ ಮಗನಾಗಿ ಜನಿಸಿದವರು. ಮಹಾಯೋಗಿ ವೇಮನರು ಸರಳತೆಯಿಂದ ಬದುಕಿ, ಸಂತ ಜೀವನಕ್ಕೆ ಮಾದರಿ ಎನಿಸಿದ್ದರು ಎಂದು ಹೇಳಿದರು.
ಕಾರ್ಯಕ್ರಮ ಆರಂಭಕ್ಕೂ ಮುನ್ನ ಲಕ್ಷ್ಮೀ ಪವನ್ ಕುಮಾರ್ ಮತ್ತು ತಂಡದಿAದ ಸುಗಮ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮೇಯರ್ ಬಿ.ಶ್ವೇತ, ಉಪಮೇಯರ್ ಬಿ.ಜಾನಕಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ, ಸಹಾಯಕ ಆಯುಕ್ತ ಹೇಮಂತ್ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಮಹಾನಗರ ಪಾಲಿಕೆಯ ಸದಸ್ಯರು, ಸಮಾಜದ ಮುಖಂಡರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.


*ಸಂಭ್ರಮದ ಮೆರವಣಿಗೆ:*
ಮಹಾಯೋಗಿ ವೇಮನ ಜಯಂತಿಯ ಅಂಗವಾಗಿ ನಗರದ ಡಾ.ರಾಜ್ಕುಮಾರ್ ರಸ್ತೆಯ ರೆಡ್ಡಿ ಜನ ಸಂಘ ಭವನದ ಆವರಣದಿಂದ ಆಯೋಜಿಸಿದ್ದ ಮೆರವಣಿಗೆಗೆ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಚಾಲನೆ ನೀಡಿದರು.
ಮೆರವಣಿಗೆಯಲ್ಲಿ ವೀರಗಾಸೆ, ಡೊಳ್ಳುಕುಣಿತ, ಕಂಸಾಳೆ ವಾದ್ಯ ಸೇರಿದಂತೆ ಇತರೆ ಸಾಂಸ್ಕೃತಿಕ ಕಲಾತಂಡಗಳು ಮೆರಗು ನೀಡಿದವು.
ಮೆರವಣಿಗೆಯು ರೆಡ್ಡಿ ಜನ ಸಂಘ ಭವನದ ಆವರಣದಿಂದ ಆರಂಭವಾಗಿ ಇಂದಿರಾ ವೃತ್ತದ ಮೂಲಕ ಬಿಡಿಎಎ ಫುಟ್ಬಾಲ್ ಮೈದಾನದ ವೇದಿಕೆ ಸಭಾಂಗಣಕ್ಕೆ ತಲುಪಿತು.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?