Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಶಿಕ್ಷಣ ಸುದ್ದಿ

ಸಣ್ಣ ಅವಕಾಶವನ್ನೂ ಬಳಸಿಕೊಂಡು ಉನ್ನತ ಸ್ಥಾನ ಪಡೆದುಕೊಳ್ಳಿ:  ಕುಲಸಚಿವ ರುದ್ರೇಶ್

ಬಳ್ಳಾರಿ: ಸಣ್ಣ ಅವಕಾಶ ಸಹಕಾರವನ್ನೇ ಬಳಸಿಕೊಂಡು ಉತ್ತಮ ವಿದ್ಯಾಭ್ಯಾಸ ಮಾಡಿ ಉನ್ನತ ಸ್ಥಾನ ಪಡೆದುಕೊಳ್ಳಿ ಎಂದು ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವ ವಿದ್ಯಾಲಯದ ಕುಲಸಚಿವ ಎಸ್.ಎನ್.ರುದ್ರೇಶ್  ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಅವರಿಂದು ನಗರದ ಪತ್ರಿಕಾ ಭವನದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಮ್ಮಿಕೊಂಡಿದ್ದ 2025 ನೇ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಸಮಾರಂದ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಿದ್ದರು.

ಅಂಬೇಡ್ಕರ್ ಅವರಿಗೆ ಪೇಶ್ವೆ ಅವರು ಮಾಡಿದ ಸಹಾಯದಿಂದ ಈ ದೇಶದ ಸಂವಿಧಾನ ರಚನೆಯ ಮಹಾನ್ ವ್ಯಕ್ತಿಯಾದರು. ನಾನು  ಸಹ ಕೂಲಿ ಮಾಡಿಕೊಂಡು ಬದುಕಿದಾತ, ನಮ್ಮೂರಿನ‌ ಬಸವೇಗೌಡ ಅವರು  ನೀಡಿದ ಆರ್ಥಿಕ ಸಹಕಾರದಿಂದ  ನಾನು ಸ್ನಸತಕೋತ್ತರ  ವಿದ್ಯಾಭ್ಯಾಸ ಮಾಡಿ  ಉನ್ನತ ಹುದ್ದೆ ಪಡೆಯಲು ಸಹಕಾರಿಯಾಯ್ತು.
ವಿಧ್ಯೆಯ ಸಂಧರ್ಭದಲ್ಲಿ ದೊರೆಯುವ ಚಿಕ್ಕ ಮೊತ್ತವೂ ಪ್ರೋತ್ಸಾಹದಾಯಕವಾದುದು ಎಂದು ಅರಿತು ಮತ್ತಷ್ಟು ನಿಮಗಮ ಸಾಧನೆಗೆ ಮುಂದಾಗಿ ಎಂದು ಪ್ರತಿಭಾ ಪುರಸ್ಕಾರಕ್ಕೆ ಭಾಜನರಾದ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಇಂತಹ ಕಾರ್ಯ ಮಾಡಿದ ಪತ್ರಕರ್ತರ ಸಂಘದ ಕಾರ್ಯ ಶ್ಲಾಘನೀಯ ಎಂದ ಅವರು, ಸಣ್ಣ ಮೆಟ್ಟಿಲು ಏರುತ್ತಲೇ ದೊಡ್ಡ ಸ್ಥಾನಕ್ಕೆ ಹೋಗಬೇಕು ಎಂಬುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಜಾತಿಯತೆ ಮಾಡಿ, ಅಂದರೆ ನಿಮ್ಮದೇ ಜಾತಿಯ ಬಡಜನರ ವಿದ್ಯಾಭ್ಯಾಸಕ್ಕೆ ಸಹಕಾರ ಮಾಡಿ ಎಂದರು.

ಜೆ.ಕೆ.ಟ್ರಸ್ಟ್ ಮುಖ್ಯಸ್ಥ ಜೋಳದರಾಶಿ ತಿಮ್ಮಪ್ಪ ಮಾತನಾಡಿ ದುಡ್ಡಿಗೆ ದೊಡ್ಡಪ್ಪ ವಿದ್ಯೆ, ಕಳ್ಳತನ ಮಾಡದ್ದು ವಿದ್ಯೆ, ಅದಕ್ಕಾಗಿ ವಿದ್ಯಾರ್ಥಿಗಳ ಪುಸ್ಕಾರವೂ ಅವರ ಭವಿಷ್ಯಕ್ಕೆ ಸಹಕಾರಿಯಾಗಲಿ. ನಮ್ಮ ಟ್ರಸ್ಟ್ ನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವುದು ಮತ್ತು ಪೆನ್ನು ಪ್ಯಾಡ್ ನೀಡಿ ಸಹಕರಿಸುವ ಕಾರ್ಯಮಾಡುತ್ತಿದೆಂದು ತಿಳಿಸಿದರು.
ಅಧ್ಯಕ್ಷತೆವಹಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ  ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಎನ್.ವೀರಭದ್ರಗೌಡ, ನಮ್ಮ ಸಂಘದ ಸದಸ್ಯರ ಮಕ್ಕಳ ವಿದ್ಯಾಭ್ಯಾಸವನಗನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಮಾಡುತ್ತಿದೆ. ರಾಜ್ಯಮಟ್ಟದ ಕಾರ್ಯಕ್ರಮ ಈ ತಿಂಗಳ 21 ರಂದು ಚಾಮರಾಜನಗರದ ಮಲೆ ಮಾದೇಶ್ವರ ಬೆಟ್ಟದ ದೇವಸ್ಥಾನದಲ್ಲಿ ನಡೆಯಲಿದೆಂದು ತಿಳಿಸಿದರು.

ವೇದಿಕೆಯಲ್ಲಿ ಪತ್ರಕರ್ತರ ಸಂಘದ ಅಡಾಕ್ ಸಮಿತಿ ಸದಸ್ಯ ಕೆ.ಮಲ್ಲಯ್ಯ ಇದ್ದರು.

ವಿದ್ಯಾರ್ಥಿಗಳಾದ ಪಿ.ದಿವ್ಯಾಶ್ರೀ, ಕೆ.ಎಂ.ಕಾಂಚನಾ, ನಾಗಾಂಬಿಕ ಹೆಚ್.ಎಂ., ಪಿ.ಅಸ್ಮಿತ ಚೌದರಿ
ಸಂಡೂರಿನ  ಕಾರ್ತಿಕ್ ಬಿ, ಸಂಜನಾ ಬಿ.ಬಿ,  ಬಿ.ಹೇಮಂತಕುಮಾರ್,  ಎಂ.ಯಶವಂತಕುಮಾರ್, ಕೆ.ಸಹನಾ ತೆಕ್ಕಲಕೋಟೆ ಇವರನ್ನು ಸನ್ಮಾನಿಸಿ ಗೌರವಿಸಲಾಯ್ತು.ಮತ್ತೋರ್ವ ಸದಸ್ಯ ವೆಂಕೋಬಿ ಸಂಗನಕಲ್ಲು ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು.
ಸಂಘದ ಸದಸ್ಯ ಪತ್ರಕರ್ತರು, ವಿದ್ಯಾರ್ಥಿಗಳ ಪಾಲಕ ಪೋಷಕರು ಪಾಲ್ಗೊಂಡಿದ್ದರು.‌

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?