Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಷ್ಟ್ರೀಯ ಸುದ್ದಿ

ಶೂದ್ರರಿಗೆ-ದಲಿತರಿಗೆ-ಮಹಿಳೆಯರಿಗೆ RSS ಗರ್ಭಗುಡಿಯೊಳಗೆ ಪ್ರವೇಶವನ್ನೇ ಕೊಡಲ್ಲ: ಸಿ.ಎಂ.ಸಿದ್ದರಾಮಯ್ಯ

ಮೈಸೂರು ಏ 3: ನನ್ನನ್ನು ರಾಷ್ಟ್ರಪತಿ, ಪ್ರಧಾನಮಂತ್ರಿ ಮಾಡ್ತೀನಿ ಅಂದ್ರೂ ನಾನು ಬಿಜೆಪಿ ಕಡೆ ತಲೆ ಹಾಕಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ನುಡಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ‌ ನಡೆದ ಪರಿಶಿಷ್ಟ ಜಾತಿ, ವರ್ಗಗಳ ಕಾರ್ಯಕರ್ತರು ಮತ್ತು ಮುಖಂಡರ ಸಭೆಯಲ್ಲಿ ಲೋಕಸಭಾ ಅಭ್ಯರ್ಥಿ ಎಂ.ಲಕ್ಷ್ಮಣ್ ಪರ ಮತಯಾಚಿಸಿ ಮಾತನಾಡಿದರು.

ನಮಗೆ ಸೈದ್ಧಾಂತಿಕ ಸ್ಪಷ್ಟತೆ ಇದ್ದಾಗ ಮಾತ್ರ ರಾಜಕೀಯ ಶಕ್ತಿ ಬರುತ್ತದೆ. BJP-RSS ಕಡೆ ತಲೆ ಹಾಕಬೇಡಿ.
ಶೂದ್ರರಿಗೆ-ದಲಿತರಿಗೆ-ಮಹಿಳೆಯರಿಗೆ RSS ಗರ್ಭಗುಡಿಯೊಳಗೆ ಪ್ರವೇಶವನ್ನೇ ಕೊಡಲ್ಲ. ಮೋದಿ ಪ್ರಧಾನಿಯಾದರೆ ದೇಶ ತೊರೆಯುತ್ತೇನೆ ಎಂದಿದ್ದ ದೇವೇಗೌಡರು‌ ಈಗ ಮೋದಿಗೂ‌ ತಮಗೂ‌ ಅವಿನಾಭಾವ ಸಂಬಂಧ ಇದೆ ಎನ್ನುತ್ತಿದ್ದಾರೆ. ರಾಜಕಾರಣಿಯಾದವರಿಗೆ ಸೈದ್ಧಾಂತಿಕ ಸ್ಪಷ್ಟತೆ ಇರಬೇಕು ಎಂದರು.

 

BJP ಮತ್ತು RSS ಸಾಮಾಜಿಕ ನ್ಯಾಯದ ವಿರೋಧಿ. ಹೀಗಾಗಿ ಮೀಸಲಾತಿಯನ್ನು ಇಷ್ಟ ಪಡುವುದಿಲ್ಲ. ಮೀಸಲಾತಿ ಎನ್ನುವುದು ಭಿಕ್ಷೆಯಲ್ಲ. ಅದು ಶೋಷಿತ ಜನ ಸಮುದಾಯಗಳ ಹಕ್ಕು. ಎಲ್ಲಿಯವರೆಗೆ ಜಾತಿ ವ್ಯವಸ್ಥೆ ಇರುತ್ತದೋ ಅಲ್ಲಿಯವರೆಗೂ ಮೀಸಲಾತಿ ಇದ್ದೇ ಇರಬೇಕು ಎಂದರು

ಸ್ವಾತಂತ್ರ್ಯ ಪೂರ್ವದಲ್ಲಿ , ಬ್ರಿಟೀಷರಿಗೂ ಮೊದಲು ಓದುವ ಹಕ್ಕು ನಮಗೆ ಅಂದರೆ ಶೂದ್ರರಿಗೆ ಇತ್ತಾ ? ಮಹಿಳೆಯರಿಗೆ ಇತ್ತಾ? ಪತಿ ಮೃತಪಟ್ಟ ತಕ್ಷಣ ಪತ್ನಿ ಕೂಡ ಬೆಂಕಿಗೆ ಆಹುತಿ ಆಗಬೇಕಿತ್ತು. ಇಂಥಾ ಮನುಸ್ಮೃತಿ ಪ್ರೇರಿತ ಅಮಾನವೀಯ ಪದ್ಧತಿ ರದ್ದಾಗಿದ್ದು ನಮ್ಮ ಸಂವಿಧಾನದಿಂದ. ಹೀಗಾಗಿ ಈ ಸಂವಿಧಾನ ಬದಲಾಯಿಸಿ ಮತ್ತೆ ಮನುಸ್ಮೃತಿ ತರಬೇಕು ಎನ್ನುವುದು ಅವರ ಹುನ್ನಾರ. ಇದನ್ನು ಸರಿಯಾಗಿ ಅರ್ಥ ಮಾಡಿಕೊಳ್ಳಿ ಎಂದು ಕರೆ ನೀಡಿದರು.

ಶೂದ್ರರಿಗೆ, ದಲಿತರಿಗೆ ಮತ್ತು ಮಹಿಳೆಯರಿಗೆ ಗರ್ಭಗುಡಿಯೊಳಗೆ ಬಿಟ್ಟುಕೊಳ್ಳಲ್ಲ. ನಂಜೇಗೌಡರು ಅಂತ ಹಿರಿಯ ಬಿಜೆಪಿ ನಾಯಕರು ಮತ್ತು ಈಗಿನ ಬಿಜೆಪಿ ನಾಯಕ ಗೂಳಿಹಟ್ಟಿ ಶೇಖರ್ ಅವರು ಕೂಡ ತಮ್ಮನ್ನು RSS ಗರ್ಭಗುಡಿಯೊಳಗೆ ಬಿಟ್ಟುಕೊಳ್ಳಲ್ಲ ಅಂತ ಬಹಿರಂಗವಾಗಿ ಹೇಳಿದ್ದಾರೆ. ಇದು ಸತ್ಯ. ಹೀಗಾಗಿ ಶೂದ್ರರನ್ನು ಕೇವಲ ಬಳಸಿಕೊಳ್ತಾರೆ ಅಷ್ಟೆ. ಆದ್ದರಿಂದ RSS ಕಡೆ ಶೂದ್ರರು, ದಲಿತರು, ಮಹಿಳೆಯರು ತಲೆ ಕೂಡ ಹಾಕಬಾರದು ಎಂದರು.

ಇಂಥಾ RSS ಜತೆ JDS ಸೇರಿಕೊಂಡಿದೆಯಲ್ಲಾ, ಇದನ್ನು ಟೀಕಿಸಬಾರದಾ? ದಲಿತರ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್ ನಲ್ಲಿ ಹಣ ಮೀಸಲಿಡುವ ಕಾನೂನನ್ನು ಜಾರಿಗೆ ತಂದಿದ್ದು ಕಾಂಗ್ರೆಸ್. ಅಭಿವೃದ್ಧಿ ಹಣದಲ್ಲಿ ಶೇ24.1% ಹಣ ಮೀಸಲಿಡಬೇಕು ಎನ್ನುವ ಕಾನೂನನ್ನು ಜಾರಿ ಮಾಡಿದ್ದು ನಮ್ಮ ಸರ್ಕಾರ. ಈ ಪ್ರಗತಿಪರ ಕಾನೂನನ್ನು ಇಡಿ ದೇಶದಲ್ಲಿ ಬಿಜೆಪಿಯ ಯಾವ ಸರ್ಕಾರವೂ ಜಾರಿ ಮಾಡಿಲ್ಲ. ಮಾಡಿರುವುದು ನಮ್ಮ ಕಾಂಗ್ರೆಸ್ ಸರ್ಕಾರ ಮಾತ್ರ. ಇದನ್ನೆಲ್ಲಾ ಜನ ಸಮುದಾಯ ತಿಳಿದುಕೊಳ್ಳಬೇಕು ಎಂದರು.

ಗುತ್ತಿಗೆಯಲ್ಲಿ ದಲಿತರಿಗೆ ಮೀಸಲಾತಿ ತಂದಿದ್ದು ನಮ್ಮ ಕಾಂಗ್ರೆಸ್ ಸರ್ಕಾರ. ಮಂಡಲ್ ವರದಿಯನ್ನು ವಿರೋಧಿಸಿದ್ದು, ಹಿಂದುಳಿದ ವರ್ಗಗಳಿಗೆ ಮೀಸಲಾತಿಯನ್ನು ವಿರೋಧಿಸಿದ್ದು ಇದೇ ಬಿಜೆಪಿ ತಾನೇ? SCP/ TSP ಕಾಯ್ದೆಯನ್ನು ಜಾರಿ ಮಾಡಿದ್ದು ಕಾಂಗ್ರೆಸ್ ಸರ್ಕಾರ. ಹೀಗಾಗಿ ನಿಮ್ಮನ್ನು ಭಾವನಾತ್ಮಕವಾಗಿ ಕೆರಳಿಸಿ, ನಿಮ್ಮ ಬದುಕಿಗೆ ಕೊಳ್ಞಿ ಇಡುವವರ ಜತೆ ಸೇರದೆ, ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರನ್ನು ಗೆಲ್ಲಿಸಿ ಎಂದು ಕರೆ ನೀಡಿದರು.

ಸಮಾಜಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ತನ್ವೀರ್ ಸೇಠ್ ಮತ್ತು ಲೋಕಸಭಾ ಅಭ್ಯರ್ಥಿ ಲಕ್ಷ್ಮಣ್ ಸೇರಿ ಹಲವು ನಾಯಕರು, ಕೆಪಿಸಿಸಿಯ ಎಸ್.ಸಿ/ಎಸ್.ಟಿ ವಿಭಾಗದ ಮುಖಂಡರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?