ಬಳ್ಳಾರಿ,ಮೇ 05 : ಜಿಲ್ಲೆಯ ಐದೂ ತಾಲೂಕುಗಳಲ್ಲಿ ಕೃಷಿಗೆ ಹೆಚ್ಚಿನ ಉತ್ತೇಜನ ನೀಡಲು ಮಿಶ್ರ ಬೆಳೆ ಪದ್ಧತಿ ಅಳವಡಿಸಿಕೊಳ್ಳುವ ಕುರಿತು ರೈತರಿಗೆ ವಿಶೇಷ ಕಾರ್ಯಕ್ರಮ ಆಯೋಜಿಸಿ ಮಾಹಿತಿ ಒದಗಿಸಬೇಕು. ಈ ಕುರಿತು ಕೃಷಿ, ತೋಟಗಾರಿಕೆ ಅಧಿಕಾರಿಗಳು ವಿಶೇಷ ಕ್ರಮ ವಹಿಸಬೇಕು ಎಂದು ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದರು ಹಾಗೂ ಜಿಲ್ಲಾ ಮಟ್ಟದ ದಿಶಾ ಸಮಿತಿಯ ಅಧ್ಯಕ್ಷರೂ ಆದ ಈ.ತುಕಾರಾಮ್ ಅವರು ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯತ್ ವತಿಯಿಂದ ಸಂಡೂರಿನ ನಂದಿಹಳ್ಳಿ ಪಿ.ಜಿ.ಹಳ್ಳಿ ಕೇಂದ್ರದ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಜಿಲ್ಲಾ ಅಭಿವೃದ್ಧಿ ಸಮನ್ವಯ ಉಸ್ತುವಾರಿ ಸಮಿತಿ “ದಿಶಾ” ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ವಿವಿಧೆಡೆ ಕೆಲ ರೀತಿಯ ಬೆಳೆ ಬೆಳೆಯುತ್ತಾರೆ. ವೈಜ್ಞಾನಿಕ ಕೃಷಿ ಪದ್ಧತಿ ಅಳವಡಿಸಿಕೊಂಡು ಮಣ್ಣಿನ ಗುಣವನ್ನಾಧರಿಸಿ ರೈತರು ಬೆಳೆ ತೆಗೆಯಬೇಕು. ವಿವಿಧ ರೀತಿಯ ಸರ್ವ ರೀತಿಯ ಬೆಳೆ ಬೆಳೆಯಲು ಒಂದು ಮಾಸ್ಟರ್ ಪ್ಲಾನ್ ಮಾಡಬೇಕು. ಜಿಲ್ಲೆಯ ಯಾವ ಯಾವ ತಾಲೂಕಿನಲ್ಲಿ ಯಾವ ರೀತಿಯ ಮಣ್ಣು ಇದೆ. ಯಾವ ಕಡೆಗೆ ಯಾವ ರೀತಿ ಬೆಳೆಯುತ್ತಾರೆ ಎಂಬುದರ ಬಗ್ಗೆ ಅಧ್ಯಯನ ನಡೆಸಲು ಲ್ಯಾಬ್ ಆರಂಭಿಸುವ ಮೂಲಕ ಸಮಗ್ರ ವರದಿ ಸಂಗ್ರಹಿಸಬೇಕು. ಯಾವ ಮಣ್ಣಿನಲ್ಲಿ ಯಾವ ರೀತಿ ಬೆಳೆ ಬೆಳೆದರೆ ಹೆಚ್ಚು ಲಾಭವಾಗುತ್ತದೆ ಎಂಬುದರ ಬಗ್ಗೆ ಜಿಲ್ಲೆಯ ರೈತರಿಗೆ ಹೊಸದೊಂದು ಮಾರ್ಗದರ್ಶಿ ಯೋಜನೆ ರೂಪಿಸೋಣ ಎಂದು ಸಂಸದರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅನ್ನಭಾಗ್ಯ ಯೋಜನೆಯಡಿ ರಾಜ್ಯ ಸರ್ಕಾರದ ನಿರ್ದೇಶನದಂತೆ 10 ಕೆ.ಜಿ ಅಕ್ಕಿ ವಿತರಿಸಲಾಗುತ್ತಿದೆ. ಆದರೆ ಜಿಲ್ಲೆಯಲ್ಲಿ ಹೆಚ್ಚಾಗಿ ಅಕ್ರಮ ಪಡಿತರ ಸಾಗಾಣೆ ಸಂಬAಧಿಸಿದAತೆ ಪ್ರಕರಣಗಳು ದಾಖಲಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಮುಲಾಜಿಲ್ಲದೇ ಅಂತಹವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಿಗೆ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಈ ಬಾರಿಯ ಎಸ್ ಎಸ್ ಎಲ್ ಸಿ ವಾರ್ಷಿಕ ಫಲಿತಾಂಶವು ಕುಸಿತಗೊಂಡಿದ್ದು, ಬೇಸರದ ಸಂಗತಿಯಾಗಿದೆ. ಮಕ್ಕಳಿಗೆ ಪ್ರಾಥಮಿಕ ಹಂತದ ಶಿಕ್ಷಣ ಬಹುಮುಖ್ಯವಾಗಿದ್ದು, ಗುಣಮಟ್ಟದ ಮೌಲ್ಯಾಧಾರಿತ ಶಿಕ್ಷಣ ಒದಗಿಸಬೇಕು. ಇದಕ್ಕೆ ಶಿಕ್ಷಕರು ಹೆಚ್ಚಿನ ಶ್ರಮ ವಹಿಸಬೇಕು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮಾತನಾಡಿ, ಶಿಕ್ಷಣ ಎಂದರೆ ಕೇವಲ ಕಟ್ಟಡವಲ್ಲ, ವೆಚ್ಚಧಾರಿತ ಉಪಕರಣಗಳಲ್ಲ, ಬದಲಾಗಿ ಮಕ್ಕಳ ಶೈಕ್ಷಣಿಕ ಬೆಳವಣಿಯಾಗಿದೆ. ಹಾಗಾಗಿ ಶಿಕ್ಷಕರು ಈ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದರು.

ಸಭೆಯಲ್ಲಿ ಕೇದ್ರದ ಬಿಎಸ್ಎನ್ಎಲ್, ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ, ರೈಲ್ವೆ ಇಲಾಖೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಸಂಬAಧಿಸಿದ ಅಧಿಕಾರಿಗಳು ಪೂರಕ ಮಾಹಿತಿ ನೀಡದೇ ಇರುವ ಕುರಿತು ಸಂಸದರು ಅಸಮಾಧಾನ ವ್ಯಕ್ತಪಡಿಸಿದರು.
ಸರ್ಕಾರಿ ಸೇವೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವುದು ಜನಪ್ರತಿನಿಧಿಗಳ ಆದ್ಯ ಕರ್ತವ್ಯವಾಗಿದೆ ಎಂದು ಮನವರಿಕೆ ಮಾಡಿದರು.
ಸಭೆಯಲ್ಲಿ ಜಲ ಜೀವನ್ ಮಿ಼ಷನ್, ಸ್ವಚ್ಛ ಭಾರತ್ ಮಿಷನ್, ಪ್ರಧಾನಮಂತ್ರಿ ಆವಾಸ್ ಯೋಜನೆ ಸೇರಿದಂತೆ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು.
ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ತಹಸೀಲ್ದಾರರು ಮತ್ತು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.