Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜಕೀಯ ಸುದ್ದಿ

ಬೆಳಗಾವಿಯಿಂದ ಜಗದೀಶ ಶೆಟ್ಟರ್ ಅಖಾಡಕ್ಕೆ?, ಟಿಕೆಟ್ ಆಕಾಂಕ್ಷಿಗಳಲ್ಲಿ ತೀವ್ರ ನಿರಾಸೆ

ಬೆಳಗಾವಿ(ಜ.26):  ಕಾಂಗ್ರೆಸ್ ತೊರೆದು ಮರಳಿ ಬಿಜೆಪಿ ಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರ ರಾಜಕೀಯ ನಡೆ ಬೆಳಗಾವಿ ಕಮಲ ಪಾಳಯ ಟಿಕೆಟ್‌ ಆಕಾಂಕ್ಷಿಗಳಿಗೆ ಶಾಕ್‌ ಕೊಟ್ಟಿದೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಿಂದದಲೇ ಜಗದೀಶ್‌ ಶೆಟ್ಟರ್‌ ಸರ್ಧಿಸುವ ಸಾಧ್ಯತೆಗಳಿವೆ ಎನ್ನುವ ಮಾತುಗಳು ಮೊದಲಿನಿಂದಲೂ ಕೇಳಿಬರುತ್ತಿದ್ದವು. ಇದಕ್ಕೆ ಪುಷ್ಟಿ ನೀಡುವಂತೆ ಇದೀಗ ಶೆಟ್ಟರ್ ಅವರು ಕಾಂಗ್ರೆಸ್ ತೊರೆದು ಮರಳಿ ಬಿಜೆಪಿ ಸೇರಿದ್ದಾರೆ. ಹಾಗೆ ನೋಡಿದರೆ ಬೆಳಗಾವಿ ಲೋಕಸಭಾ ಕ್ಷೇತ್ರ ಬಿಜೆಪಿ ಭದ್ರಕೋಟೆಯಾಗಿದೆ. ಈ ಕ್ಷೇತ್ರದಲ್ಲಿ ಬಿಜೆಪಿ ತನ್ನಕೋಟೆಯನ್ನು ಮತ್ತಷ್ಟು ಭದ್ರಗೊಳಿಸಲು ಸಿದ್ಧತೆ ನಡೆಸಿತ್ತು. ಪ್ರಬಲ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸಿತ್ತು. ಇದೀಗ ಮಾಜಿ ಸಿಎಂ ಜಗದೀಶ ಶೆಟ್ಟರ್ ಮರಳಿ ಬಿಜೆಪಿ ಸೇರ್ಪಡೆಯಾಗಿರುವುದು ಉತ್ತರ ಕರ್ನಾಟಕದಲ್ಲಿ ಬಿಜೆಪಿಗೆ ಶಕ್ತಿ ತುಂಬಿದಂತಾಗಿದೆ. ಮಾತ್ರವಲ್ಲ, ಬೆಳಗಾವಿಗೂ ಅದು ವರದಾನವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಕಳೆದ ವಿಧಾನಸಭೆ ಚುನಾವಣೆ ವೇಳೆ ಟಿಕೆಟ್ ನಿರೀಕ್ಷೆ ಹುಸಿಯಾಗಿರುವ ಹಿನ್ನೆಲೆಯಲ್ಲಿ ಜಗದೀಶ ಶೆಟ್ಟರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು, ಕಾಂಗ್ರೆಸ್‌ನಿಂದ ಸ್ಪರ್ಧಿಸಿ, ಪರಾಭವಗೊಂಡಿದ್ದರು. ಆದರೂ ಕಾಂಗ್ರೆಸ್ ಪಕ್ಷ ಜಗದೀಶ ಶೆಟ್ಟರ್ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಆಯ್ಕೆ ಮಾಡಿತ್ತು. ಆದರೆ, ರಾಜಕಾರ ಣದಲ್ಲಿ ನಡೆದ ಕ್ಷಿಪ್ರ ಬೆಳವಣಿಗೆಯೊಂದರಲ್ಲಿ ಶೆಟ್ಟರ್ ಕಾಂಗ್ರೆಸ್ ತೊರೆದು ಅಧಿಕೃತವಾಗಿ ಬಿಜೆಪಿಗೆ ಮರಳಿ ದ್ದಾರೆ. ಈ ಬೆಳವಣಿಗೆಯಿಂದ ಬೆಳಗಾವಿ ಜಿಲ್ಲಾ ರಾಜಕೀಯ ಲೆಕ್ಕಾಚಾರಗಳೆಲ್ಲವೂ ಬದಲಾಗುವ ಸಾಧ್ಯತೆಗಳಿವೆ.

ಸಂಸದರಾಗಿದ್ದ ಸುರೇಶ ಅಂಗಡಿ ಅವರ ಆಕಾಲಿಕ ನಿಧನದ ಹಿನ್ನೆಲೆಯಲ್ಲಿ ಉಪಚುನಾವಣೆಯಲ್ಲಿ ತಮ್ಮ ಬೀಗರಾದ ಮಂಗಲ ಸುರೇಶ ಅಂಗಡಿ ಅವರ ಗೆಲುವಿಗೆ ಮಾಜಿ ಸಿಎಂ ಜಗದೀಶ ಶೆಟ್ಟರ್ ಪ್ರಮುಖ ಪಾತ್ರ ವಹಿಸಿದ್ದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರಿಂದ ಹಾಲಿ ಸಂಸದೆ ಮಂಗಲ ಅಂಗಡಿ ಅವರ ರಾಜಕೀಯ ನಡೆ ಕೂಡಡೋಲಾಯ ಮಾನವಾಗಿತ್ತು. ಮುಂಬರುವ ಲೋಕಸಭಾ ಚುನಾ ವಣೆಯಲ್ಲಿ ಮಂಗಲ ಅಂಗಡಿ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆಗಳು ಕ್ಷೀಣಿಸಿದ್ದವು. ಇದರಿಂದಾಗಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳ ಸಂಖ್ಯೆ ಯೂ ದೊಡ್ಡದಾ ಗಿತ್ತು. ಆದರೆ, ಶೆಟ್ಟರ್ ಮರಳಿ ಬಿಜೆಪಿ ಸೇರ್ಪಡೆಯಾಗಿದ್ದರಿಂದ ಹಾಲಿ ಸಂಸದೆ ಮಂಗಲ ಅಂಗಡಿ ಅವರಿಗೆ ಮತ್ತೆ ಬಲ ಬಂದಂತಾಗಿದೆ.

ಅಂಗಡಿ ಕುಟುಂಬ ಒಪ್ಪಿಗೆ ನೀಡಿದರೆ ಜಗದೀಶ ತಮ್ಮ ಬೀಗರಾದ ಮಾಜಿ ಸಿಎಂ ಜಗದೀಶ ಶೆಟ್ಟರ್ ಮರಳಿ ಬಿಜೆಪಿಗೆ ಸೇರ್ಪಡೆಯಾ ಗಿರುವುದು ಖುಷಿವಿಚಾರ. ಇದರಿಂದಾಗಿ ನಮಗೆ ಬಲ ಬಂದಂತಾಗಿದೆ. ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಿಂದ ಅಂಗಡಿ ಕುಟುಂಬಕ್ಕೆ ಬಿಜೆಪಿ ಟಿಕೆಟ್ ಸಿಕ್ಕೇ ಸಿಗುತ್ತದೆ ಎಂಬ ವಿಶ್ವಾಸವಿದೆ. ನಾವು ಯಾರಿಗೂ ಟಿಕೆಟ್ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ ಅಂತ ಸಂಸದೆ ಮಂಗಲ ಅಂಗಡಿ ತಿಳಿಸಿದ್ದಾರೆ.

ಮಾಜಿ ಸಿಎಂ ಜಗದೀಶ ಶೆಟ್ಟರ್ ಅದು ಬಿಜೆಪಿ ಸೇರಿರುವುದು ನಮ್ಮ ಕುಟುಂಬಕ್ಕೆ ಅಷ್ಟೇಯಲ್ಲ ಇಡೀ ಬಿಜೆಪಿ ಕಾರ್ಯಕರ್ತರಿಂಗ ಖುಷಿ ತಂದಿದೆ. ಈ ದಿನ ಉತ್ತರ ಕರ್ನಾಟಕ ಭಾಗಕ್ಕೆ ಶುಭ ದಿನ. ಸಂತೋಷದ ದಿನವಾಗಿದೆ. ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಿಂದ ನನ್ನ ಸ್ಪರ್ಧೆ ಕುರಿತು ಚರ್ಚೆ ಮಾಡಿಲ್ಲ. ಬೇರೆಯವರಿಗೆ ಟಿಕೆಟ್ ಕೊಟ್ಟರೂ ನಾವು ಕೆಲಸ ಮಾಡುತ್ತೇವೆ. ಟಿಕೆಟ್ ಹಂಚಿಕೆ ವಿಚಾರದಲ್ಲಿ ಪಕ್ಷದ ಹೈಕಮಂಡ್ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಜಗದೀಶ ಶೆಟ್ಟರ್ ಸೊಸೆ ಶ್ರದ್ಧಾ ಅಂಗಡಿ (ಶೆಟ್ಟರ್) ಹೇಳಿದ್ದಾರೆ.

ಶೆಟ್ಟರ್ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ, ಶೆಟ್ಟರ್ ಬೆಳಗಾವಿ ಚುನಾವಣಾ ಆಖಾಡಕ್ಕಿಳಿದರೆ ಆಗುವ ಲಾಭಗಳೇನು? ಹಾನಿಗಳೇನು? ಎನ್ನುವ ರಾಜಕೀಯ ಲೆಕ್ಕಾಚಾರಗಳು ಕೂಡ ಬಿಜೆಪಿಯಲ್ಲಿ ಶುರುವಾಗಿದೆ. ಏನೇ ಆಗಲಿ ಬೆಳಗಾವಿ ಕ್ಷೇತ್ರದಿಂದ ಅಂತಿಮವಾಗಿ ಯಾರಿಗೆ ಟಿಕೆಟ್ ಸಿಗುತ್ತದೆ ಎನ್ನುವುದನ್ನು ಕಾಯ್ದು ನೋಡಬೇಕು.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?