Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಜಕೀಯ ಸುದ್ದಿ

ವರ್ಗಾವಣೆಗಳಿಗೆ ಜಾತಿ ಬಳಕೆ ಸಹಿಸಲಸಾಧ್ಯ: ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜ,೧೭: ವರ್ಗಾವಣೆಗಳಿಗೆ ಪೊಲೀಸ್ ಅಧಿಕಾರಿಗಳು ಹಾತೊರೆಯುವುದು, ಜಾತಿ ಬಳಸುವುದು ಅತ್ಯಂತ ಕೆಟ್ಟದ್ದು ಮತ್ತು ಸಹಿಸಲಸಾಧ್ಯ. ಹಾಗೆ ಮಾಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳಿಗೆ ಕಿವಿ ಮಾತು ಹೇಳಿದರು.

ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನಮ್ಮದು ಜಾತ್ಯತೀತ ರಾಷ್ಟ್ರ. ನಾವುಗಳೇ ನಮ್ಮ ಸಂವಿಧಾನದ ಆಶಯಗಳನ್ನು ಬಲಪಡಿಸಬೇಕು. ಪೊಲೀಸ್ ಅಧಿಕಾರಿಗಳು ಜಾತಿ ಕಾರ್ಡ್ ಬಳಸಿ ವರ್ಗಾವಣೆ ಪಡೆಯುವುದು ತೀರಾ ಅನುಚಿತವಾಗಿದ್ದು, ಇಂತಹ ನಡೆಯನ್ನು ಸಹಿಸಲಸಾಧ್ಯ ಎಂದು ಹೇಳಿದರು.
ಆಧುನಿಕ ತಂತ್ರಜ್ಞಾನದ ಬಳಕೆಯಿಂದ ಅಪರಾಧ ಪ್ರಕರಣಗಳಿಗೆ ಕಡಿವಾಣ ಸಾಧ್ಯವಿದೆ. ಕರ್ನಾಟಕ ನಾಮಕರಣಗೊಂಡು, ಏಕೀಕರಣದ ೫೦ ವರ್ಷದ ನೆನಪಿಗಾಗಿ ಸುವರ್ಣ ಪೊಲೀಸ್ ಭವನ ಕಟ್ಟಡ ನಿರ್ಮಾಣಕ್ಕೆ ಬಜೆಟ್ ನಲ್ಲಿ ಹಣ ನೀಡಲಾಗುವುದು. ಖಾಲಿ ಇರುವ ಪೊಲೀಸ್ ಹುದ್ದೆಗಳನ್ನೂ ಭರ್ತಿ ಮಾಡಲಾಗುವುದು. ಕಾನೂನು ಮತ್ತು ಸುವ್ಯವಸ್ಥೆ ಜಾರಿಯಲ್ಲಿರಬೇಕು. ಕಾನೂನು ಸುವ್ಯವಸ್ಥೆ ಉತ್ತಮವಾದಾಗ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ. ಹೂಡಿಕೆಯ ಹರಿವು ಕಾನೂನು ಸುವ್ಯವಸ್ಥೆಯ ಮೇಲೆ ಅವಲಂಬಿತವಾಗಿರುತ್ತದೆ. ಹೂಡಿಕೆಗಳು ಹೆಚ್ಚಾದಾಗ ಉದ್ಯೋಗಾವಕಾಶಗಳು ಹೆಚ್ಚು. ಉದ್ಯೋಗ ಸೃಷ್ಟಿಯಾಗುತ್ತದೆ, ಆಗ ರಾಜ್ಯದ ಆರ್ಥಿಕ ಬೆಳವಣಿಗೆ ಹೆಚ್ಚುತ್ತದೆ.ಈ ಎಲ್ಲ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಪೊಲೀಸ್ ಅಧಿಕಾರಿಗಳು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸುಧಾರಿಸಬೇಕು,’’ ಎಂದು ಸಲಹೆ ನೀಡಿದರು.
ಕಳ್ಳತನ ಹೆಚ್ಚಾಗ್ತಾ ಇದೆ ಎಂದರೆ ಗಸ್ತು ವ್ಯವಸ್ಥೆ, ಹೋಯ್ಸಳ ಸಿಬ್ಬಂದಿ ಮತ್ತು ಠಾಣಾಧಿಕಾರಿಗಳು ವೈಫಲ್ಯರಾಗಿದ್ದಾರೆ ಎಂದೇ ಅರ್ಥ. ಇದೇ ಸ್ಥಿತಿ ಮುಂದುವರೆದರೆ ಡಿಸಿಪಿಗಳನ್ನು ಕರ್ತವ್ಯಲೋಪಕ್ಕೆ ಹೊಣೆ ಮಾಡಲಾಗುವುದು ಎಂದು ಎಚ್ಚರಿಕೆಯನ್ನು ಇದೇ ಸಂದರ್ಭದಲ್ಲಿ ನೀಡಿದರು.
ಹಿಂದಿನ ವರ್ಷಗಳಿಗೆ ಹೋಲಿಸಿದರೆ ೨೦೨೩ ರಲ್ಲಿ ಸ್ವಲ್ಪ ಸುಧಾರಣೆಯಾಗಿದ್ದರೂ, ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆಯ ದರಗಳು ತೃಪ್ತಿಕರವಾಗಿಲ್ಲ ಎಂದು ಅವರು ಅಧಿಕಾರಿಗಳಿಗೆ ತಿಳಿಸಿದರು. ಅಂತಹ ಪ್ರಕರಣಗಳಲ್ಲಿ ಅಪರಾಧದ ರಾಷ್ಟ್ರೀಯ ಸರಾಸರಿ ಶೇಕಡಾ ೩೩ ರಷ್ಟಿದೆ ಮತ್ತು ಈ ವರ್ಷ ರಾಜ್ಯದ ಅಂಕಿಅAಶಗಳು ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಿವೆ ಎಂದು ಪೊಲೀಸ್ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು. ಚಾರ್ಜ್ಶೀಟ್‌ಗಳನ್ನು ಸಲ್ಲಿಸಲು ವಿಳಂಬವಾದರೆ ಶಿಕ್ಷೆಯ ಪ್ರಮಾಣವು ಕಡಿಮೆಯಾಗುತ್ತದೆ, ಅಂತಹ ಪ್ರಕರಣಗಳಲ್ಲಿ ೬೦ ದಿನಗಳಲ್ಲಿ ಅದನ್ನು ಸಲ್ಲಿಸಬೇಕಾಗುತ್ತದೆ. ಒಮ್ಮೆ ಎಫ್‌ಐಆರ್‌ಗಳನ್ನು ನೋಂದಾಯಿಸಿದ ನಂತರ, ಹೆಚ್ಚಿನ ಶಿಕ್ಷೆಯ ಪ್ರಮಾಣವನ್ನು ಖಚಿತಪಡಿಸಿಕೊಳ್ಳಲು ಪರಿಣಾಮಕಾರಿ ತನಿಖೆಯನ್ನು ತೆಗೆದುಕೊಳ್ಳಬೇಕು. ಗುಣಮಟ್ಟದ ತನಿಖೆಯಾಗದಿದ್ದಲ್ಲಿ ಶಿಕ್ಷೆಯ ಪ್ರಮಾಣ ಕುಸಿಯುತ್ತದೆ ಮತ್ತು ಅಪರಾಧದ ಪ್ರಮಾಣವನ್ನು ಹೆಚ್ಚಿಸಲು ಪೊಲೀಸ್ ಅಧಿಕಾರಿಗಳು ಪೊಲೀಸ್ ಠಾಣೆಗಳಲ್ಲಿನ ಪೊಲೀಸರಿಗೆ ಮೇಲ್ವಿಚಾರಣೆ ಮತ್ತು ಮಾರ್ಗದರ್ಶನ ನೀಡಬೇಕು ಎಂದು ಅವರು ಅಧಿಕಾರಿಗಳಿಗೆ ಸಲಹೆ ನೀಡಿದರು.

ದುರ್ಬಲ ವರ್ಗಗಳು, ಮಹಿಳೆಯರು, ಮಕ್ಕಳು, ಎಸ್‌ಸಿ/ಎಸ್‌ಟಿಗಳು ಮತ್ತು ಒಂಟಿಯಾಗಿರುವವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅವರು ಅವರಿಗೆ ನಿರ್ದೇಶನ ನೀಡಿದರು. ರಾಜ್ಯಾದ್ಯಂತ ಬೀಟ್ ಪೋಲೀಸ್ ಬಿಗಿಗೊಳಿಸಬೇಕು, ಹೊಯ್ಸಳ ಗಸ್ತು ವಾಹನಗಳ ಮೇಲೆ ನಿಗಾ ಇಡಬೇಕು. ಸಂಸತ್ ಚುನಾವಣೆಗೆ ಮುನ್ನ ಕೋಮು ಸೌಹಾರ್ದತೆ ಕದಡಲು ಯತ್ನಿಸುವ ರೌಡಿಗಳು ಹಾಗೂ ನಿತ್ಯ ಅಪರಾಧಿಗಳನ್ನು ಪತ್ತೆ ಹಚ್ಚಿ ನಿಗಾ ವಹಿಸಿ ಕೋಮು ಘರ್ಷಣೆಯಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಇದಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಭಾಗವಹಿಸಿ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳದ ಮೊಬೈಲ್ ಲ್ಯಾಬ್, ವಿಧಿ ವಿಜ್ಞಾನ ಮೊಬೈಲ್ ಲ್ಯಾಬ್ ವಾಹನ, ಮೊಬೈಲ್ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್ ವಾಹನ ದ ಉನ್ನತೀಕರಣದ ಕಾರ್ಯಕ್ಷಮತೆಯನ್ನು ಪರಿಶೀಲಿಸಿದರು.

ಬಳಿಕ ಪೊಲೀಸ್ ಐಟಿ-ಗಿ೨, IಖಿPಂ ಸರಳ ಆಪ್ ,ಪೊಲೀಸ್ ಮಿತ್ರ ಚಾಟ್ ಬಾಟ್, ಅಉ ನೋಂದಣಿ ಪೋರ್ಟಲ್, ರಾಜ್ಯ ಪೊಲೀಸ್ ಕೃತಕ ಬುದ್ದಿ ಮತ್ತೆ ತಂತ್ರಾAಶ ಹಾಗೂ ಆರ್ಥಿಕ ಇಂಟೆಲಿಜೆನ್ಸ್ ತಂತ್ರಾAಶಗಳನ್ನು ಬಿಡುಗಡೆ ಮಾಡಿದರು.
ಜೊತೆಗೆ ಹೊತ್ತಿನಲ್ಲಿ ಸಂಕ್ಷಿಪ್ತ ಸೈಬರ್ ಅಪರಾಧ ಕೈಪಿಡಿಯನ್ನು ಲೋಕಾರ್ಪಣೆಗೊಳಿಸಿದರು, ಗೃಹ ಸಚಿವರಾದ ಜಿ.ಪರಮೇಶ್ವರ್, ಗೃಹ ಕಾರ್ಯದರ್ಶಿ ಉಮಾಶಂಕರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ತ್ರಿಲೋಕ್ ಚಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಮತ್ತು ನಸೀರ್ ಅಹಮದ್ ಅವರು ಉಪಸ್ಥಿತರಿದ್ದರು.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?