Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ರಾಷ್ಟ್ರೀಯ ಸುದ್ದಿ

ಪ್ರೇಮಿಗಳ ದಿನ ಬೆಂಗಳೂರಿನಲ್ಲಿ ಮದ್ಯ ಮಾರಾಟ ನಿಷೇಧ; ಉದ್ಯಮಿಗಳ ಅಸಮಾಧಾನ

ಬೆಂಗಳೂರು: ಫೆಬ್ರವರಿ 14ರ ಪ್ರೇಮಿಗಳ ದಿನಾಚರಣೆಯಂದು ಬೆಂಗಳೂರಿನ ಕೆಲವು ಭಾಗಗಳಲ್ಲಿ ಮದ್ಯಪಾನಕ್ಕೆ ನಿಷೇಧ ಹೇರಲಾಗಿದ್ದು, ಈ ಬೆಳವಣಿಗೆಗೆ ಆಹಾರ ಮತ್ತು ಪಾನೀಯ (ಎಫ್ & ಬಿ) ಉದ್ಯಮ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಫೆಬ್ರವರಿ 16 ರಂದು ವಿಧಾನ ಪರಿಷತ್ ಉಪಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಫೆಬ್ರವರಿ 14ರ ಸಂಜೆ 5ರಿಂದ ಫೆಬ್ರವರಿ 16ರ ಮಧ್ಯರಾತ್ರಿವರೆಗೆ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿರುವ ಪ್ರದೇಶಗಳನ್ನು ಹೊರತುಪಡಿಸಿ ಉಳಿದ ಕಡೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಈ ಸಂಬಂಧ ನಗರ ಪೊಲೀಸ್ ಆಯುಕ್ತರು ಫೆ.6ರಂದು ಆದೇಶ ಹೊರಡಿಸಿದ್ದಾರೆ.

ನ್ಯಾಷನಲ್ ರೆಸ್ಟೊರೆಂಟ್ಸ್ ಅಸೋಸಿಯೇಷನ್ ​​ಆಫ್ ಇಂಡಿಯಾ (NRAI) ಹಾಗೂ ಪಾಪ್ಯೂಲರ್ ನೈಬರ್ ಹುಡ್ ಪಬ್-1522 ಸಂಸ್ಥಾಪಕ ಚೇತರ್ ಹೆಗಡೆ ಎಂಬುವವರು ಮಾತನಾಡಿ, ಈ ನಿರ್ಧಾರ ಉದ್ಯಮದಲ್ಲಿ ಶೇ.10-15ರಷ್ಟು ನಷ್ಟವನ್ನು ತಂದೊಡ್ಡಲಿದೆ. ಪ್ರೇಮಿಗಳ ದಿನದಂದು ಹೆಚ್ಚೆಚ್ಚು ಜನರು ರೆಸ್ಟೋರೆಂಟ್ ಗಳಿಗೆ ಬರುತ್ತಾರೆ. ಇದಕ್ಕಾಗಿಯೇ ನಾವು ತಿಂಗಳಾನುಗಟ್ಟಲೆಯಿಂದ ಸಿದ್ಧತೆಗಳ ಆರಂಭಿಸಿದ್ದೆವು. ಆದರೆ, ಸರ್ಕಾರ ಈ ನಿರ್ಧಾರ ನಮಗೆ ನಷ್ಟವನ್ನು ತಂದೊಡ್ಡಲಿದೆ. ಗ್ರಾಹಕರ ಉತ್ಸಾಹವನ್ನು ಕಡಿಮೆ ಮಾಡಲಿದೆ ಎಂದು ಹೇಳಿದ್ದಾರೆ.

ಜನರು ವ್ಯಾಲೆಂಟೈನ್ಸ್ ಡೇಗಾಗಿ ಎದುರುನೋಡುತ್ತಿರುತ್ತಾರೆ. ಟೇಬಲ್‌ಗಳನ್ನು ಬುಕ್ ಮಾಡುತ್ತಾರೆ. ಈಗಾಗಲೇ ನಾವು ಪ್ರೇಮಿಗಳ ದಿನಕ್ಕಾಗಿ ಸಾಕಷ್ಟು ಸಿದ್ಧತೆಗಳನ್ನು ನಡೆಸಿದ್ದೆವು. ದುಬಾರಿ ಬೆಲೆಗಳ ಮದ್ಯಗಳನ್ನು ಸಂಗ್ರಹಿಸಿಟ್ಟಿದ್ದೆವು. ಇತರ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಮದ್ಯದ ಮೇಲಿನ ತೆರಿಗೆಗಳು ತುಂಬಾ ಹೆಚ್ಚಿವೆ. ಈ ತೆರಿಗೆ ಈಗಾಗಲೇ ನಮಗೆ ಸಾಕಷ್ಟು ಹೊರೆಯಾಗಿದೆ. ಇದೀಗ ಮದ್ಯ ನಿಷೇಧ ಗಾಯದ ಮೇಲೆ ಬರೆ ಎಳೆದಂತೆ ಮಾಡುತ್ತದೆ ಎಂದು ತಿಳಿಸಿದ್ದಾರೆ.

ಎನ್‌ಆರ್‌ಎಐ ಜಂಟಿ ಕಾರ್ಯದರ್ಶಿ ಹಾಗೂ ಜನಪ್ರಿಯ ಬಾರ್ ವಾಟ್ಸನ್‌ ಮಾಲೀಕ ಅಮಿತ್ ರಾಯ್ ಅವರು ಮಾತನಾಡಿ, ಈ ನಿರ್ಧಾರ ಅಸಮಂಜಸವಾದದ್ದು. ಇದರಿಂದ ಯಾರಿಗೂ ಸಹಾಯವಾಗುವುದಿಲ್ಲ. ಪ್ರೇಮಿಗಳ ದಿನಾಚರಣೆಗಾಗಿ ಡಿಜೆ. ವಿಶೇಷ ಮೆನು ಸೇರಿದಂತೆ ಹಲವು ಸಿದ್ಧತೆಗಳನ್ನು ನಡೆಸಿದ್ದೆವು. ಇದೀಗ ಎಲ್ಲವೂ ನಷ್ಟವಾದಂತಾಗಿದೆ ಎಂದು ಹೇಳಿದ್ದಾರೆ.

“ಪ್ರೇಮಿಗಳ ದಿನದಂದು ಮದ್ಯ ಮಾರಾಟವನ್ನು ನಿಷೇಧಿಸುತ್ತಿರುವುದು ಇದೇ ಮೊದಲಾಗಿದೆ. ಬೆಂಗಳೂರು ಅತೀ ಹೆಚ್ಚು ಯುವಕರನ್ನು ಹೊಂದಿರುವ ನಗರವಾಗಿದ್ದು, ಜನರು ಈ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲು ಇಷ್ಟಪಡುತ್ತಾರೆ ಎಂದು ಲೀಸರ್ ಎಂಟರ್‌ಟೈನ್‌ಮೆಂಟ್‌ನ ನರೇನ್ ಬೆಲಿಯಪ್ಪ ಎಂಬುವವರು ಹೇಳಿದ್ದಾರೆ.

ಆಹಾರ ಮತ್ತು ಉದ್ಯಮ ಕ್ಷೇತ್ರದಿಂದ ಬರುತ್ತಿರುವ ಆದಾಯ ಎಷ್ಟಿದೆ ಎಂಬುದು ಸರ್ಕಾರಕ್ಕೆ ಚೆನ್ನಾಗಿ ತಿಳಿದಿದೆ. ಇದೀಗ ಉದ್ಯಮಕ್ಕಾಗುವ ನಷ್ಟದ ಬಗ್ಗೆ ತಿಳಿದು ಎಚ್ಚರಗೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.

 

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?