Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಜಿಲ್ಲಾಡಳಿತದಿಂದ ‘ವಿಶ್ವ ಮಾನವೀಯ ದಿನ’ ಆಚರಣೆ, ಎಲ್ಲರೂ ಮಾನವೀಯ ಮೌಲ್ಯ ಅಳವಡಿಸಿಕೊಳ್ಳಬೇಕಿದೆ: ಎಡಿಸಿ ಮಹಮ್ಮದ್ ಝುಬೇರ್

ಬಳ್ಳಾರಿ,ಆ.19 : ಪ್ರಸ್ತುತ ದಿನಗಳಲ್ಲಿ ನಾವೆಲ್ಲರೂ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕಿದೆ ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ, ಕಾರ್ಮಿಕ ಇಲಾಖೆ, ಗೃಹ ರಕ್ಷಕ ದಳ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಅಪರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ‘ವಿಶ್ವ ಮಾನವೀಯ ದಿನಾಚರಣೆ’ ಅಂಗವಾಗಿ ವರ್ಚುವಲ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪ್ರಸ್ತುತ ಪ್ರಪಂಚದಲ್ಲಿ ನಡೆದಿದ್ದ ವಿವಿಧ ರಾಷ್ಟçಗಳ ನಡುವಿನ ಯುದ್ಧದ ಸಂದರ್ಭದಲ್ಲಿ ಊಟ, ವಸತಿ, ವೈದ್ಯಕೀಯ ಸೌಲಭ್ಯ ಸೇರಿದಂತೆ ಸಾಕಷ್ಟು ಪ್ರಭಾವ ಬೀರಿತ್ತು. ಆ ಸಂದರ್ಭದಲ್ಲಿ ಸಹಾಯ ಮಾಡಲು ಮಾನವೀಯ ಮೌಲ್ಯಗಳೇ ಪ್ರಮುಖ ಕಾರಣವಾದವು. ಹಾಗಾಗಿ ತಮ್ಮ ಸುತ್ತ ಮುತ್ತ ಏನೇ ಅವಘಡ ಸಂಭವಿಸಿದಾಗ ತುರ್ತು ಸಂದರ್ಭದಲ್ಲಿ ಕಷ್ಟದಲ್ಲಿರುವವರಿಗೆ ಸಹಾಯ ಮಾಡುವುದೇ ಮಾನವೀಯತೆ ಆಗಿದೆ ಎಂದು ತಿಳಿಸಿದರು.

ಮಾನವೀಯ ಮೌಲ್ಯಗಳು ಸ್ವಯಂ ಪ್ರೇರಿತರಾಗಿ ಅಳವಡಿಸಿಕೊಳ್ಳಬೇಕಿದೆ. ಪ್ರವಾಹ, ಅನಿರೀಕ್ಷಿತ ಕಟ್ಟಡ ಕುಸಿತದ ಸಂದರ್ಭದಲ್ಲಿ, ಯುದ್ಧದ ಸಂದರ್ಭದಲ್ಲಿ ತಕ್ಷಣ ಭಾಗವಹಿಸಿ ಸಹಾಯ ಒದಗಿಸುವುದು ಮಾನವೀಯತೆಯ ಲಕ್ಷಣವಾಗಿದೆ. ಎಸ್.ಡಿ.ಆರ್.ಎಫ್ ಮತ್ತು ಎನ್.ಡಿ.ಆರ್.ಎಫ್ ತಂಡ ಆಗಮಿಸಲು ತಡವಾದಾಗ ಸುತ್ತ-ಮುತ್ತಲಿನವರು ಜಾಗರೂಕರಾಗಿ ಮಾನವೀಯತೆಯ ಮೂಲಕ ಸಹಾಯ ಕರ್ತವ್ಯ ಮರೆಯಬೇಕು. ಇಲ್ಲದಿದ್ದಲ್ಲಿ ಆ ಜೀವನವು ಮೌಲ್ಯಯುತವಾದುದಲ್ಲ ಎಂದು ತಿಳಿಸಿದರು.

ನಾವು ಸುರಕ್ಷಿತರಾಗಿರಬೇಕು. ಇತರರನ್ನು ಸುರಕ್ಷಿತವಾಗಿಟ್ಟುಕೊಳ್ಳಲು ಜಾಗರೂಕರಾಗಿರಬೇಕು ಎಂದು ತಿಳಿಸಿದ ಅಪರ ಜಿಲ್ಲಾಧಿಕಾರಿಗಳು, ಅಧಿಕಾರಿಗಳು ಸಹ ಸಾರ್ವಜನಿಕ ಸೇವೆ ಸೌಲಭ್ಯ ಒದಗಿಸಲು ವಿಳಂಬ ಮಾಡಬಾರದು. ಜನರನ್ನು ಕಚೇರಿಗಳಿಗೆ ಅಲೆದಾಡಿಸಬಾರದು ಎಂದರು.

ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಆರ್.ಅಬ್ದುಲ್ಲಾ ಅವರು ಮಾತನಾಡಿ, 2008 ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ವಿಶ್ವ ಮಾನವೀಯ ದಿನವನ್ನು ಆಚರಿಸಲು ಅಂಗೀಕರಿಸಿತ್ತು. 2009 ರಲ್ಲಿ ಅಧೀಕೃತವಾಗಿ ಆಚರಿಸಲಾಯಿತು ಎಂದು ತಿಳಿಸಿದರು.

ಬಳಿಕ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಆರೋಗ್ಯ, ಕಾರ್ಮಿಕ, ಅಗ್ನಿಶಾಮಕ ಮತ್ತು ವಿಕಲಚೇತನರ ಕಲ್ಯಾಣ ಇಲಾಖೆಯ ಅಧಿಕಾರಿಗಳು ತುರ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಐದು ವಿಷಯಗಳ ಕುರಿತು ಸಲಹೆ ಮತ್ತು ಅಂಶಗಳನ್ನು ತಿಳಿಸಿಕೊಟ್ಟರು.

ಈ ಸಂದರ್ಭದಲ್ಲಿ ಅಗ್ನಿ ಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಹನುಮನಗೌಡ ಪೊಲೀಸ್ ಪಾಟೀಲ್, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪರಿಣಿತ ಪರಮೇಶ, ಕಾರ್ಮಿಕ ಇಲಾಖೆಯ ಜಿಲ್ಲಾ ಕಾರ್ಮಿಕ ಅಧಿಕಾರಿ ಸಿದ್ದಪ್ಪ ಜೆ.ಖೈನೂರ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣ ಇಲಾಖೆಯ ಅಧಿಕಾರಿ ಗೋವಿಂದಪ್ಪ.ಹೆಚ್.ಎA ಸೇರಿದಂತೆ ಜಿಲ್ಲಾ ಮಾನವೀಯ ಕಾರ್ಯಕರ್ತರು ವಿಡಿಯೋ ಸಂವಾದದಲ್ಲಿ ಭಾಗವಹಿಸಿದ್ದರು.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?