ಬಳ್ಳಾರಿ, ಜು 02 : ಹವಂಬಾವಿಯ ಶ್ರೀ ಚೈತನ್ಯ ಈ ಟೆಕ್ನೋ ಶಾಲೆ ಮತ್ತು ವಿಜಯವಾಡ ಶ್ರೀ ಚೈತನ್ಯ ಕಾಲೇಜ್ ಮುಂದೆ ಸ್ವತ್ಛತೆ ಮರೀಚಿಕೆಯಾಗಿದೆ. ಒಳ ಚರಂಡಿಯಲ್ಲಿ ನೀರು ಸರಾಗವಾಗಿ ಹರಿಯದೇ ಸೊಳ್ಳೆಗಳ ಕಾಟ ಹೆಚ್ಚಾಗಿದೆ. ರಸ್ತೆ ಮೇಲೆ ಕೊಳಚೆ ನೀರು ಹರಿಯುವುದರಿಂದ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗಿದೆ.
ಕಳೆದ ಹತ್ತುದಿಗಳಿಂದ ರಸ್ತೆ ಬದಿಯ ಚರಂಡಿಯಲ್ಲಿ ತ್ಯಾಜ್ಯ ಹಾಗೂ ಮಣ್ಣು ತುಂಬಿಕೊಂಡಿದ್ದು ಕಲುಷಿತ ನೀರು ರಸ್ತೆ ಮೇಲೆ ಹರಿಯುತ್ತಿದೆ. ಚರಂಡಿಯಲ್ಲಿ ನೀರು ನಿಂತಲ್ಲೇ ನಿಂತಿರುವುದರಿಂದ ಕಸವು ಸೇರಿ ಕೊಳೆಯುತ್ತಿದ್ದು, ದುರ್ವಾಸನೆ ಬೀರುತ್ತಿದೆ. ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗಿದೆ. ಸುತ್ತಮುತ್ತಲಿನ ಮನೆಗಳ ಜನರು ಬೆಳ್ಳಿಗೆ ಮತ್ತು ಸಾಯಂಕಾಲ ಹೆಚ್ಚಿನ ಸಂಖ್ಯೆಯಲ್ಲಿ ವಾಕ್ ಮಾಡೋರು, ವೃದ್ಧರು ಹಾಗೂ ಮಕ್ಕಳು ಅನಾರೋಗ್ಯಕ್ಕೆ ತುತ್ತಾಗುವ ಪರಿಸ್ಥಿತಿ ನಿರ್ಮಾಣವಾಗುವಂತಿದೆ. ಇದು 35ನೇ ವಾರ್ಡಿಗೆ ಸೇರಿದ್ದು ಮಹಾನಗರ ಪಾಲಿಕೆಯ ಸದಸ್ಯರಿಗೆ ಮತ್ತು ಪಾಲಿಕೆ ಗಮನಕ್ಕೆ ತಂದ್ದಿದು ಈ ಸ್ಥಳಕ್ಕೆ ಪಾಲಿಕೆ ಸದಸ್ಯರು ಬೇಟಿ ಕೊಟ್ಟು ಸ್ವಚ್ಚತ ಕಾರ್ಯಕ್ಕೆ ಮುಂದಾಗಿ ಸ್ವಚ್ಚತ ವಾಹನ ಬಂದು ಹೋದರು ಯಾವುದೇ ಶಾಶ್ವತ ಪರಿಹಾರ ಇಲ್ಲದೆ ಸಾಂಕ್ರಾಮಿಕ ರೋಗ ಭೀತಿ ಉಂಟಾಗಿದೆ.
ನಿತ್ಯ ಇದೇ ರಸ್ತೆ ಮೇಲೆ ಪ್ರಭಾವಿ ವ್ಯಕ್ತಿಗಳು ಓಡಾಡುತ್ತಾರೆ. ಆದರೆ ಅವರಿಗೆ ಈ ಸಮಸ್ಯೆಯನ್ನು ಬಗೆಹರಿಸುವ ಮನಸ್ಸಿಲ್ಲದಾಗಿದೆ. ನೂತನವಾಗಿ ಸಿಸಿ ಚರಂಡಿ ನಿರ್ಮಾಣ ಮಾಡಿದ್ದರೂ ಸಹ ಸರಿಯಾದ ನಿರ್ವಹಣೆ ಇಲ್ಲದೇ ಚರಂಡಿಯಲ್ಲಿ ಕಲುಷಿತ ನೀರು ಸೇರಿ ರಸ್ತೆಯ ಮೇಲೆ ಹರಿಯುತ್ತಿದೆ. ಇದರಿಂದಾಗಿ ಸ್ಥಳೀಯರಲ್ಲಿ ಸಾಂಕ್ರಾಮಿಕ ರೋಗ ಹರಡುವ ಭೀತಿ ಸೃಷ್ಟಿಸಿದೆ. ಪಾಲಿಕೆಯವರು ಚರಂಡಿ ಸ್ವತ್ಛತಾ ಕಾರ್ಯ ಮಾಡಿದ್ದರು ಔಷಧ ಸಿಂಪಡಿಸಿಲ್ಲ. ಚರಂಡಿ ಕೊಳಚೆನೀರಿನಿಂದಾಗಿ ಸೊಳ್ಳೆಗಳ ಕಾಟ ವಿಪರೀತವಾಗಿದೆ. ಚರಂಡಿಗಳು ದುರ್ವಾಸನೆ ಬೀರುತ್ತಿದ್ದು, ನಿವಾಸಿಗಳು ತೊಂದರೆಪಡುವಂತಾಗಿದೆ. ಹತ್ತುದಿನ ಕಳೆದರೂ ಸ್ವತ್ಛಗೊಳ್ಳದ ಚರಂಡಿಗಳಿಂದ ರೋಗ ಭೀತಿ ಎದುರಾಗಿದೆ. ಇದರಿಂದಾಗಿ ನಿವಾಸಿಗಳು ನಿತ್ಯ ಸಂಕಷ್ಟಕ್ಕೆ ಇಡಾಗುತ್ತಿದ್ದರೆ ಆರೋಗ್ಯ ಇಲಾಖೆ , ಪಾಲಿಕೆಯವರು ಬೇಗ ಸ್ಪಂದಿಸಿ ಶಾಶ್ವತ ಪರಿಹಾರ ನೀಡಬೇಕು ಎಂದು ಸಾರ್ವಜನಿಕರು ಮಹಾನಗರ ಪಾಲಿಕೆಗೆ ಮನವಿ ಮಾಡಿದ್ದಾರೆ